AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಹೆಡ್ ಕಾನ್ಸ್​ಟೇಬಲ್​ ಮೇಲೆ ಹಲ್ಲೆ! 6 ಜನರ ವಿರುದ್ಧ ಎಫ್ಐಆರ್ ದಾಖಲು

ಬಾರ್ ಬಳಿ ಹೆಡ್ ಕಾನ್ಸ್​ಟೇಬಲ್​ ಹರೀಶ್ ಮನೆಯಿದೆ. ಮನೆ ಮುಂದೆ ಗಾಡಿ ನಿಲ್ಲಿಸಬೇಡಿ ಎಂದು ಹರೀಶ್ ಹೇಳಿದ್ದಾರೆ. ಹೀಗಾಗಿ ಹಲ್ಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಇನ್ನು ಪ್ರತಿದಿನ ಕುಡಿದು ಅಸಭ್ಯವಾಗಿ ವರ್ತನೆ ಮಾಡುತ್ತಾರೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಹೆಡ್ ಕಾನ್ಸ್​ಟೇಬಲ್​ ಮೇಲೆ ಹಲ್ಲೆ! 6 ಜನರ ವಿರುದ್ಧ ಎಫ್ಐಆರ್ ದಾಖಲು
ಕುಡಿದು ಗಲಾಟೆ ಮಾಡುವ ದೃಶ್ಯ ಸೆರೆಯಾಗಿದೆ
TV9 Web
| Edited By: |

Updated on:Jun 01, 2022 | 9:27 AM

Share

ಮೈಸೂರು: ಹೊರವಲಯದಲ್ಲಿ ಹೆಡ್ ಕಾನ್ಸ್​ಟೇಬಲ್​ (Head Constable) ಮೇಲೆ ಹಲ್ಲೆ ನಡೆದಿದ್ದು, ಅನುಗ್ರಹ ಬಾರ್ ಅಂಡ್ ರೆಸ್ಟೋರೆಂಟ್ ಸಿಬ್ಬಂದಿ ವಿರುದ್ಧ ಆರೋಪ ಕೇಳಿಬಂದಿದೆ. ಮನೆ ಮುಂದೆ ವಾಹನ (Vehicles) ನಿಲ್ಲಿಸಬೇಡಿ ಎಂದಿದ್ದಕ್ಕೆ ಪೊಲೀಸ್ ಹೆಡ್ ಕಾನ್ಸ್​ಟೇಬಲ್ ಹರೀಶ್ ಎಂಬುವವರು ಮೇಲೆ ಹಲ್ಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿ, ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಪ್ರಕರಣ ಸಂಬಂಧ ಪುನೀತ್, ವಿನಯ್, ಶ್ರೀಕಾಂತ್ ಸೇರಿದಂತೆ 6 ಜನರ ವಿರುದ್ಧ ಇಲವಾಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಬಾರ್ ಬಳಿ ಹೆಡ್ ಕಾನ್ಸ್​ಟೇಬಲ್​ ಹರೀಶ್ ಮನೆಯಿದೆ. ಮನೆ ಮುಂದೆ ಗಾಡಿ ನಿಲ್ಲಿಸಬೇಡಿ ಎಂದು ಹರೀಶ್ ಹೇಳಿದ್ದಾರೆ. ಹೀಗಾಗಿ ಹಲ್ಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಇನ್ನು ಪ್ರತಿದಿನ ಕುಡಿದು ಅಸಭ್ಯವಾಗಿ ವರ್ತನೆ ಮಾಡುತ್ತಾರೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ನಮ್ಮ ಮನೆಯಲ್ಲಿ ಮಕ್ಕಳಿದ್ದಾರೆ ಈ ರಸ್ತೆಯಲ್ಲಿ ಓಡಾಡಲು ತುಂಬಾ ಕಷ್ಟವಾಗುತ್ತಿದೆ. ಹೀಗಾಗಿ ಬಾರ್ ಸ್ಥಳಾಂತರಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಅನಂತರಾಜು ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್​​​​: ಡೆತ್​ನೋಟ್ ಇಟ್ಟುಕೊಂಡು ರೇಖಾಗೆ ಧಮ್ಕಿ ಹಾಕಿದರಾ ಸುಮಾ? ಮತ್ತೊಂದು ಆಡಿಯೋ ಲಭ್ಯ

ಇದನ್ನೂ ಓದಿ
Image
ಸಾರ್ವಜನಿಕ ಸ್ಥಳದಲ್ಲಿ ನಟಿಯ ಬೆತ್ತಲೆ ಫೋಟೋಶೂಟ್​ ಕೇಸ್​; ಪೂನಂ ಪಾಂಡೆ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ
Image
Railway Recruitment 2022: ಎಸ್​ಎಸ್​ಎಲ್​ಸಿ ಪಾಸಾದವರಿಗೆ ಸುವರ್ಣಾವಕಾಶ: 5636 ಹುದ್ದೆಗಳಿಗೆ ನೇಮಕಾತಿ
Image
ಬೆಳಗಾವಿಯಲ್ಲಿ ತೀವ್ರಗೊಂಡ ಮಂದಿರ V/S ಮಸೀದಿ ವಿವಾದ! ಶಾಸಕ ಅಭಯ್ ಪಾಟೀಲ್ ವಿರುದ್ಧ ಸಿಡಿದೆದ್ದ ಮುಸ್ಲಿಂ ಮುಖಂಡರು
Image
ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ದೂರು ದಾಖಲು

ಪುಂಡಾಟದ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ದಂಪತಿ ಮೇಲೆ ಹಲ್ಲೆ: ಬೆಂಗಳೂರು: ಪುಂಡಾಟದ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ದಂಪತಿ ಮೇಲೆ ಹಲ್ಲೆ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಕೆಕೆ ಬಡಾವಣೆಯಲ್ಲಿ ಸಂಭವಿಸಿದೆ. ಚಿಲ್ಲರೆ ಅಂಗಡಿ ಮಾಲೀಕ ರವಿ ಹಾಗೂ ಪತ್ನಿ ಸಾವಿತ್ರಿ ಮೇಲೆ ವೆಲ್ಡಿಂಗ್​​​ ಶಾಪ್ ಮಾಲೀಕ ಮೊಹಮ್ಮದ್‌, ಸಹಚರರಿಂದ ಹಲ್ಲೆ ನಡೆದಿದೆ. ಆರೋಪಿಗಳು ವೆಲ್ಡಿಂಗ್​ ಶಾಪ್​ನಲ್ಲಿ ಪದೇ ಪದೇ ಶಬ್ದ ಮಾಡಿ ಪುಂಡಾಟ ಮಾಡುತ್ತಿದ್ದರು. ಇದನ್ನು ಪ್ರಶ್ನಿಸಿದ ರವಿ-ಸಾವಿತ್ರಿ ದಂಪತಿ ಮೇಲೆ ರಾಡ್​ಗಳಿಂದ ಹಲ್ಲೆ ಮಾಡಿದ್ದಾರೆ.

ವೆಲ್ಡಿಂಗ್​​​ ಶಾಪ್ ಮಾಲೀಕ ಮೊಹಮ್ಮದ್‌ ಯಾಸಿನ್, ಶರವತ ಮಸೂರ್, ನವಾಜ್​​​ ಖಾನ್ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದ್ದು, ಹೊಸಕೋಟೆ ನಗರ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:19 am, Wed, 1 June 22

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು