AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಹೆಡ್ ಕಾನ್ಸ್​ಟೇಬಲ್​ ಮೇಲೆ ಹಲ್ಲೆ! 6 ಜನರ ವಿರುದ್ಧ ಎಫ್ಐಆರ್ ದಾಖಲು

ಬಾರ್ ಬಳಿ ಹೆಡ್ ಕಾನ್ಸ್​ಟೇಬಲ್​ ಹರೀಶ್ ಮನೆಯಿದೆ. ಮನೆ ಮುಂದೆ ಗಾಡಿ ನಿಲ್ಲಿಸಬೇಡಿ ಎಂದು ಹರೀಶ್ ಹೇಳಿದ್ದಾರೆ. ಹೀಗಾಗಿ ಹಲ್ಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಇನ್ನು ಪ್ರತಿದಿನ ಕುಡಿದು ಅಸಭ್ಯವಾಗಿ ವರ್ತನೆ ಮಾಡುತ್ತಾರೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಹೆಡ್ ಕಾನ್ಸ್​ಟೇಬಲ್​ ಮೇಲೆ ಹಲ್ಲೆ! 6 ಜನರ ವಿರುದ್ಧ ಎಫ್ಐಆರ್ ದಾಖಲು
ಕುಡಿದು ಗಲಾಟೆ ಮಾಡುವ ದೃಶ್ಯ ಸೆರೆಯಾಗಿದೆ
TV9 Web
| Edited By: |

Updated on:Jun 01, 2022 | 9:27 AM

Share

ಮೈಸೂರು: ಹೊರವಲಯದಲ್ಲಿ ಹೆಡ್ ಕಾನ್ಸ್​ಟೇಬಲ್​ (Head Constable) ಮೇಲೆ ಹಲ್ಲೆ ನಡೆದಿದ್ದು, ಅನುಗ್ರಹ ಬಾರ್ ಅಂಡ್ ರೆಸ್ಟೋರೆಂಟ್ ಸಿಬ್ಬಂದಿ ವಿರುದ್ಧ ಆರೋಪ ಕೇಳಿಬಂದಿದೆ. ಮನೆ ಮುಂದೆ ವಾಹನ (Vehicles) ನಿಲ್ಲಿಸಬೇಡಿ ಎಂದಿದ್ದಕ್ಕೆ ಪೊಲೀಸ್ ಹೆಡ್ ಕಾನ್ಸ್​ಟೇಬಲ್ ಹರೀಶ್ ಎಂಬುವವರು ಮೇಲೆ ಹಲ್ಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿ, ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಪ್ರಕರಣ ಸಂಬಂಧ ಪುನೀತ್, ವಿನಯ್, ಶ್ರೀಕಾಂತ್ ಸೇರಿದಂತೆ 6 ಜನರ ವಿರುದ್ಧ ಇಲವಾಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಬಾರ್ ಬಳಿ ಹೆಡ್ ಕಾನ್ಸ್​ಟೇಬಲ್​ ಹರೀಶ್ ಮನೆಯಿದೆ. ಮನೆ ಮುಂದೆ ಗಾಡಿ ನಿಲ್ಲಿಸಬೇಡಿ ಎಂದು ಹರೀಶ್ ಹೇಳಿದ್ದಾರೆ. ಹೀಗಾಗಿ ಹಲ್ಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಇನ್ನು ಪ್ರತಿದಿನ ಕುಡಿದು ಅಸಭ್ಯವಾಗಿ ವರ್ತನೆ ಮಾಡುತ್ತಾರೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ನಮ್ಮ ಮನೆಯಲ್ಲಿ ಮಕ್ಕಳಿದ್ದಾರೆ ಈ ರಸ್ತೆಯಲ್ಲಿ ಓಡಾಡಲು ತುಂಬಾ ಕಷ್ಟವಾಗುತ್ತಿದೆ. ಹೀಗಾಗಿ ಬಾರ್ ಸ್ಥಳಾಂತರಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಅನಂತರಾಜು ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್​​​​: ಡೆತ್​ನೋಟ್ ಇಟ್ಟುಕೊಂಡು ರೇಖಾಗೆ ಧಮ್ಕಿ ಹಾಕಿದರಾ ಸುಮಾ? ಮತ್ತೊಂದು ಆಡಿಯೋ ಲಭ್ಯ

ಇದನ್ನೂ ಓದಿ
Image
ಸಾರ್ವಜನಿಕ ಸ್ಥಳದಲ್ಲಿ ನಟಿಯ ಬೆತ್ತಲೆ ಫೋಟೋಶೂಟ್​ ಕೇಸ್​; ಪೂನಂ ಪಾಂಡೆ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ
Image
Railway Recruitment 2022: ಎಸ್​ಎಸ್​ಎಲ್​ಸಿ ಪಾಸಾದವರಿಗೆ ಸುವರ್ಣಾವಕಾಶ: 5636 ಹುದ್ದೆಗಳಿಗೆ ನೇಮಕಾತಿ
Image
ಬೆಳಗಾವಿಯಲ್ಲಿ ತೀವ್ರಗೊಂಡ ಮಂದಿರ V/S ಮಸೀದಿ ವಿವಾದ! ಶಾಸಕ ಅಭಯ್ ಪಾಟೀಲ್ ವಿರುದ್ಧ ಸಿಡಿದೆದ್ದ ಮುಸ್ಲಿಂ ಮುಖಂಡರು
Image
ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ದೂರು ದಾಖಲು

ಪುಂಡಾಟದ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ದಂಪತಿ ಮೇಲೆ ಹಲ್ಲೆ: ಬೆಂಗಳೂರು: ಪುಂಡಾಟದ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ದಂಪತಿ ಮೇಲೆ ಹಲ್ಲೆ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಕೆಕೆ ಬಡಾವಣೆಯಲ್ಲಿ ಸಂಭವಿಸಿದೆ. ಚಿಲ್ಲರೆ ಅಂಗಡಿ ಮಾಲೀಕ ರವಿ ಹಾಗೂ ಪತ್ನಿ ಸಾವಿತ್ರಿ ಮೇಲೆ ವೆಲ್ಡಿಂಗ್​​​ ಶಾಪ್ ಮಾಲೀಕ ಮೊಹಮ್ಮದ್‌, ಸಹಚರರಿಂದ ಹಲ್ಲೆ ನಡೆದಿದೆ. ಆರೋಪಿಗಳು ವೆಲ್ಡಿಂಗ್​ ಶಾಪ್​ನಲ್ಲಿ ಪದೇ ಪದೇ ಶಬ್ದ ಮಾಡಿ ಪುಂಡಾಟ ಮಾಡುತ್ತಿದ್ದರು. ಇದನ್ನು ಪ್ರಶ್ನಿಸಿದ ರವಿ-ಸಾವಿತ್ರಿ ದಂಪತಿ ಮೇಲೆ ರಾಡ್​ಗಳಿಂದ ಹಲ್ಲೆ ಮಾಡಿದ್ದಾರೆ.

ವೆಲ್ಡಿಂಗ್​​​ ಶಾಪ್ ಮಾಲೀಕ ಮೊಹಮ್ಮದ್‌ ಯಾಸಿನ್, ಶರವತ ಮಸೂರ್, ನವಾಜ್​​​ ಖಾನ್ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದ್ದು, ಹೊಸಕೋಟೆ ನಗರ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:19 am, Wed, 1 June 22

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ