ಮೈಸೂರು ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಕಾಣಿಕೊಂಡ ಹೊಗೆ, ತಪ್ಪಿದ ದುರಂತ

ವಿಶ್ವವಿಖ್ಯಾತ ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಇದ್ದಕ್ಕಿದ್ದಂತೆ ಹೊಗೆ ಕಾಣಿಕೊಂಡ ಘಟನೆ ನಡೆದಿದೆ. ಇನ್ನು ಕೆಲವೇ ಕ್ಷಣದಲ್ಲಿ ವಸ್ತು ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಮೈಸೂರು ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಕಾಣಿಕೊಂಡ ಹೊಗೆ, ತಪ್ಪಿದ ದುರಂತ
ಮೈಸೂರು ದಸರಾ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 15, 2023 | 5:22 PM

ಮೈಸೂರು, ಅ.15: ವಿಶ್ವವಿಖ್ಯಾತ ಮೈಸೂರು ದಸರಾ (Mysore Dasara) ವಸ್ತು ಪ್ರದರ್ಶನ ಆವರಣದಲ್ಲಿ ಇದ್ದಕ್ಕಿದ್ದಂತೆ ಹೊಗೆ ಕಾಣಿಕೊಂಡ ಘಟನೆ ನಡೆದಿದೆ. ಶಾರ್ಟ್​ಸರ್ಕ್ಯೂಟ್​ನಿಂದ, ಫ್ಯೂಸ್ ಬಾಕ್ಸ್​ನಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣದಲ್ಲಿ ವಸ್ತು ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಈ ವೇಳೆ ಇಂತಹ ಘಟನೆ ನಡೆದಿದೆ. ಇನ್ನು ಓವರ್​ಲೋಡ್​ನಿಂದ ಶಾರ್ಟ್​ಸರ್ಕ್ಯೂಟ್ ಆಗಿರುವ ಅನುಮಾನ ವ್ಯಕ್ತವಾಗಿದ್ದು, ಎಚ್ಚೆತ್ತ ಸಿಬ್ಬಂದಿಗಳು ಕೂಡಲೇ ವಸ್ತು ಪ್ರದರ್ಶನ ಆವರಣದಲ್ಲಿ ಫ್ಯೂಸ್ ಸರಿಪಡಿಸುತ್ತಿದ್ದಾರೆ.

ದಸರಾ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಮೈಸೂರಿನ ಕುಪ್ಪಣ್ಣ ಪಾರ್ಕ್​ನಲ್ಲಿರುವ ಗಾಜಿನ ಮನೆಯಲ್ಲಿ ಟೇಪ್ ಕತ್ತರಿಸಿ ದಸರಾ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಇನ್ನು ಫಲಪುಷ್ಪ ಪ್ರದರ್ಶನಲ್ಲಿ ವಿವಿಧ ರೀತಿಯ ಚಿತ್ರಗಳನ್ನು ಬಿಡಿಸಲಾಗಿದ್ದು, 2.5 ಲಕ್ಷ ಹೂವುಗಳಲ್ಲಿ ಚಂದ್ರಯಾನ-3 ಕಲಾಕೃತಿಯನ್ನು ಅರಳಿಸಲಾಗಿದೆ. ಈ ವೇಳೆ ಸಿಎಂಗೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಸಾಥ್​ ನೀಡಿದ್ದಾರೆ.

ಇದನ್ನೂ ಓದಿ: ಒಡೆಯರ ದಸರಾ ಹೇಗಿರುತ್ತೆ? ಹೇಗೆಲ್ಲ ಆಚರಿಸುತ್ತಾರೆ? ಮೈಸೂರು ದಸರಾ ನಡೆದು ಬಂದಿದ್ಹೇಗೆ? ಸಂಪೂರ್ಣ ಇತಿಹಾಸ ಇಲ್ಲಿದೆ

ಕಾಂಗ್ರೆಸ್ ಸರ್ಕಾರದಲ್ಲಿ ಬದಲಾದ ಕುಸ್ತಿ ಪೇಟದ ಬಣ್ಣ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದಲ್ಲಿ ಕುಸ್ತಿ ಹಬ್ಬವೇ ಒಂದು ಮೆರಗು ಹೆಚ್ಚಿಸುತ್ತದೆ. ಕೆಲವೇ ಕ್ಷಣಗಳಲ್ಲಿ ಪಾರಂಪರಿಕ ಕುಸ್ತಿ ಪಂದ್ಯಾವಳಿಗಳ ಉದ್ಘಾಟನೆಗೆ ನಡೆಯಲಿದೆ. ಆದರೆ, ಈ ಬಾರಿ ಕಾಂಗ್ರೆಸ್ ಸರ್ಕಾರದಲ್ಲಿ ಕುಸ್ತಿ ಪೇಟದ ಬಣ್ಣ ಬದಲಾಗಿದೆ. ಪ್ರತಿ ವರ್ಷ ಆಯೋಜಕರು ಧರಿಸುತ್ತಿದ್ದ ಕೇಸರಿ ಬಣ್ಣದ ಪೇಟಕ್ಕೆ ಬ್ರೇಕ್ ಹಾಕಲಾಗಿದೆ. ಈ ಮೂಲಕ ದಸರಾದಲ್ಲೂ ಸದ್ದು ಮಾಡುತ್ತಿದೆಯಾ ಕೇಸರಿ ಬಣ್ಣ ? ಎಂಬ ಪ್ರಶ್ನೆ ಮೂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:59 pm, Sun, 15 October 23

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ