Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಕೇಸ್​: ಭೈರತಿ ಸುರೇಶ್​, ಲೋಕಾಯುಕ್ತ ಎಸ್​ಪಿ ವಿರುದ್ಧ ದೂರು

ಮುಡಾ ಹಗರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉರುಳಾಗಿ ಪರಿಣಮಿಸಿದೆ. ಇದೀಗ, ಈ ಉರುಳು ಸಿದ್ದರಾಮಯ್ಯ ಅವರ ಸಂಪುಟದ ಭೈರತಿ ಸುರೇಶ್​ ಅವರಿಗೂ ಸುತ್ತುವ ಸಾಧ್ಯತೆ ಇದೆ. ಹೌದು, ಸಚಿವ ಭೈರತಿ ಸುರೇಶ್​ ವಿರುದ್ಧ ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ.

ಮುಡಾ ಕೇಸ್​: ಭೈರತಿ ಸುರೇಶ್​, ಲೋಕಾಯುಕ್ತ ಎಸ್​ಪಿ ವಿರುದ್ಧ ದೂರು
ಸ್ನೇಹಮಯಿ ಕೃಷ್ಣ, ಭೈರತಿ ಸುರೇಶ್​
Follow us
ರಾಮ್​, ಮೈಸೂರು
| Updated By: ವಿವೇಕ ಬಿರಾದಾರ

Updated on:Oct 06, 2024 | 6:31 PM

ಮೈಸೂರು, ಅಕ್ಟೋಬರ್​ 06: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿನ ಕಡತ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಭೈರತಿ ಸುರೇಶ್ (Byrathi Suresh)​ ಮತ್ತು ಹಿಂದಿನ ಲೋಕಾಯುಕ್ತ ಎಸ್​​ಪಿ ಸಜಿತ್ ವಿರುದ್ಧ ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ದೂರು ನೀಡಿದ್ದಾರೆ. ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್​​ ಮೋಹನ್​​ ಅವರಿಗೆ ಲಿಖಿತ ದೂರು ನೀಡಿದ್ದಾರೆ.

ಲೋಕಾಯುಕ್ತ ನೀಡಿದ್ದ ಸರ್ಚ್​ ವಾರಂಟ್​ ಆಧರಿಸಿ ಜು.26ರಂದು ಮುಡಾ ಕಚೇರಿ ಮೇಲೆ ದಾಳಿ ನಡೆಸಲು ನಿರ್ಧರಿಸಲಾಗಿತ್ತು. ಆದರೆ ದಾಳಿ ವಿಚಾರವನ್ನು ಮೈಸೂರು ಲೋಕಾಯುಕ್ತದ ಅಂದಿನ ಅಧೀಕ್ಷಕ ಸಜಿತ್ ಅವರು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಅವರಿಗೆ ಮಾಹಿತಿ ನೀಡಿದ್ದರು.

ಇದನ್ನೂ ಓದಿ: ಈ ದಸರಾಗೆ ಮುಡಾ ಸೈಟ್ ನೋಡುವುದನ್ನ ತಪ್ಪಿಸಿಕೊಳ್ಳಬೇಡಿ: ಸಿಎಂ ವಿರುದ್ಧ ಬಿಜೆಪಿ ವ್ಯಂಗ್ಯ

ಭೈರತಿ ಸುರೇಶ್‌ ಕೂಡಲೇ ಮೈಸೂರಿಗೆ ಹೆಲಿಕಾಪ್ಟರ್‌ನಲ್ಲಿ ಬಂದು ಮುಡಾದಲ್ಲಿನ ಕೆಲವು ಪ್ರಮುಖ ಕಡತಗಳನ್ನು ತೆಗೆದುಕೊಂಡು ಹೋಗಿದ್ದರು. ಈ ಕಡತದಲ್ಲಿನ ದಾಖಲೆಗಳನ್ನು ಇಟ್ಟುಕೊಂಡೇ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಿಕಾ ಗೋಷ್ಠಿಯನ್ನು ನಡೆಸಿದ್ದರು. ಈ ರೀತಿ ಸಹಾಯ ಮಾಡಿದ ಕಾರಣಕ್ಕಾಗಿ ಮೈಸೂರು ಲೋಕಾಯುಕ್ತದಲ್ಲಿ ಪೊಲೀಸ್ ಅಧೀಕ್ಷಕರಾಗಿದ್ದ ಸುಜೀತ್‌ ಅವರನ್ನು ಬೆಂಗಳೂರಿನ ಆಯಾಕಟ್ಟಿನ ಜಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:27 pm, Sun, 6 October 24

ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್