AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿಗೆ ಇಂದು ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಭೇಟಿ; ಕೊಡಗಿನಲ್ಲಿ 2 ದಿನ ವಿಶ್ರಾಂತಿ

ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಆರಂಭವಾದ ಪಾದಯಾತ್ರೆ ಸದ್ಯ ಮೈಸೂರಿಗೆ ತಲುಪಿದ್ದು ಇದೇ ಮೊದಲ ಬಾರಿಗೆ ಸೋನಿಯಾ ಗಾಂಧಿ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.

ಮೈಸೂರಿಗೆ ಇಂದು ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಭೇಟಿ; ಕೊಡಗಿನಲ್ಲಿ 2 ದಿನ ವಿಶ್ರಾಂತಿ
ಸೋನಿಯಾ ಗಾಂಧಿImage Credit source: Hindustan Times
TV9 Web
| Updated By: ಆಯೇಷಾ ಬಾನು|

Updated on:Oct 03, 2022 | 10:12 AM

Share

ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ(Sonia Gandhi) ಅವರು ಭಾರತ್ ಜೋಡೋ ಯಾತ್ರೆಯಲ್ಲಿ(Bharat Jodo Yatra) ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆ ಇಂದು ಮಧ್ಯಾಹ್ನದ ವೇಳೆಗೆ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ(Priyanka Gandhi) ಮೈಸೂರಿಗೆ ಆಗಮಿಸಲಿದ್ದಾರೆ ಎನ್ನಲಾಗಿದೆ. ವಿಶೇಷ ವಿಮಾನದ ಮೂಲಕ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಸೋನಿಯಾ ಆಗಮಿಸಲಿದ್ದಾರೆ.

ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಆರಂಭವಾದ ಪಾದಯಾತ್ರೆ ಸದ್ಯ ಮೈಸೂರಿಗೆ ತಲುಪಿದ್ದು ಇದೇ ಮೊದಲ ಬಾರಿಗೆ ಸೋನಿಯಾ ಗಾಂಧಿ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಇನ್ನು ಯಾತ್ರೆಯಲ್ಲಿ ಭಾಗಿಯಾಗುವ ಮುನ್ನ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ವಿಮಾನ‌ ನಿಲ್ದಾಣದಿಂದ ನೇರವಾಗಿ ಚಾಮುಂಡಿ‌ಬೆಟ್ಟಕ್ಕೆ ತೆರಳುವ ಸಾಧ್ಯತೆ ಇದೆ. ನಂತರ ಮತ್ತೆ ಹೆಲಿಕಾಫ್ಟರ್ ಮೂಲಕ ಕೊಡಗಿಗೆ ತೆರಳಲಿದ್ದಾರೆ. ಕೊಡಗಿನಲ್ಲಿ ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಇನ್ನು ಸಂಜೆ ವೇಳೆಗೆ ರಾಹುಲ್ ಗಾಂಧಿ ಕೂಡ ಕೊಡಗಿಗೆ ಹೋಗಿ ಕುಟುಂಬದ ಜೊತೆ ಎರಡು ದಿನ‌ ವಿಶ್ರಾಂತಿ ಪಡೆಯಲಿದ್ದಾರೆ. ಹೀಗಾಗಿ ಅಕ್ಟೋಬರ್ 4 ಹಾಗೂ 5ರಂದು ಪಾದಯಾತ್ರೆಗೆ ವಿರಾಮ ಇರಲಿದೆ. ಬಳಿಕ ಅಕ್ಟೋಬರ್ 6 ರಂದು ಮಂಡ್ಯ ಜಿಲ್ಲೆಯ ಮಹದೇಶ್ವರಿ ದೇವಸ್ಥಾನದಿಂದ ಪಾದಯಾತ್ರೆ ಆರಂಭವಾಗಲಿದೆ. ಈ ರಾಲಿಯಲ್ಲಿ ರಾಹುಲ್, ಸೋನಿಯಾ ಭಾಗಿಯಾಗಲಿದ್ದಾರೆ. ಅಕ್ಟೋಬರ್ 7 ರಂದು ಪ್ರಿಯಾಂಕಾ ಗಾಂಧಿ ರಾಜ್ಯಕ್ಕೆ ಆಗಮಿಸಲಿದ್ದು ಸಹೋದರ ರಾಹುಲ್ ಜೊತೆಗೆ ನಾಗಮಂಗಲದಲ್ಲಿ ಹೆಜ್ಜೆ ಹಾಕಲಿದ್ದಾರೆ. ಆದಿ ಚುಂಚನಗಿರಿ ಮಠಕ್ಕೂ ಪ್ರಿಯಾಂಕಾ ಗಾಂಧಿ ಭೇಟಿ ನೀಡುವ ಸಾಧ್ಯತೆ ಇದೆ. ಇದನ್ನೂ ಓದಿ: ಕಾಂಗ್ರೆಸ್​ನ ಭಾರತ್ ಜೋಡೋ 4ನೇ ದಿನದ ಪಾದಯಾತ್ರೆ ವೇಳೆ ಮಸೀದಿ ಚರ್ಚ್​ಗೆ ಭೇಟಿ ನೀಡಿದ ರಾಹುಲ್ ಗಾಂಧಿ

ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಭೇಟಿಯ ಉಸ್ತುವಾರಿಯನ್ನು ಎಎಸ್ ಪೊನ್ನಣ್ಣ ವಹಿಸಿಕೊಂಡಿದ್ದಾರೆ. ಮಡಿಕೇರಿ ತಾಲೂಕಿನ ಮೇಕೇರಿ ಗ್ರಾಮದಲ್ಲಿರುವ ಕೂರ್ಗ್ ವೈಲ್ಡರ್‌ನೆಸ್ ರೆಸಾರ್ಟ್ ನಲ್ಲಿ ಸೋನಿಯಾ ವಿಶ್ರಾಂತಿ ಪಡೆಯುವ ಸಾಧ್ಯತೆ ಇದೆ. ಇದು ಮಾಜಿ ಸಚಿವ ಟಿ ಜಾನ್ ಪುತ್ರ ಪೌಲ್ ಜಾನ್ ಒಡೆತನದ ರೆಸಾರ್ಟ್ ಆಗಿದ್ದು ರೆಸಾರ್ಟ್ ಗೆ CRPF ಪಡೆಯಿಂದ‌ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:52 am, Mon, 3 October 22

ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು