AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರದಲ್ಲಿಯೂ ಸಾಫ್ಟ್ ಡ್ರಿಂಕ್ ಫ್ಯಾಕ್ಟರಿ ಆರಂಭಿಸಲಿದ್ದಾರೆ ಶ್ರೀಲಂಕಾ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್

Muthiah Muralitharan Factory in Chamarajanagar; ಸಾಫ್ಟ್ ಡ್ರಿಂಕ್ ಫ್ಯಾಕ್ಟರಿ ಆರಂಭಿಸಲು ಅಗತ್ಯವಿರುವ ಆಡಳಿತಾತ್ಮಕ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಕಾರ್ಖಾನೆಯ ನಿರ್ಮಾಣ ಪ್ರಾರಂಭವಾಗಿದೆ. ಮುತ್ತಯ್ಯ ಪಾನೀಯಗಳ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ರ್ಯಾಂಡ್, ತಂಪು ಪಾನೀಯಗಳು, ರಿಫ್ರೆಶ್ ಡ್ರಿಂಕ್ಸ್​​ ಮತ್ತು ಫ್ಲೇವರ್ಡ್ ಹಾಲನ್ನು ತಯಾರಿಸಲಿದೆ.

ಚಾಮರಾಜನಗರದಲ್ಲಿಯೂ ಸಾಫ್ಟ್ ಡ್ರಿಂಕ್ ಫ್ಯಾಕ್ಟರಿ ಆರಂಭಿಸಲಿದ್ದಾರೆ ಶ್ರೀಲಂಕಾ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್
ಮುತ್ತಯ್ಯ ಮುರಳೀಧರನ್ (ಸಂಗ್ರಹ ಚಿತ್ರ)
ಗಣಪತಿ ಶರ್ಮಾ
|

Updated on: Aug 17, 2023 | 8:47 PM

Share

ಬೆಂಗಳೂರು: ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ಮತ್ತು ಖ್ಯಾತ ಆಫ್ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ (Muttiah Muralitharan) ಧಾರವಾಡದಲ್ಲಿ ಉದ್ಯಮ ಸ್ಥಾಪಿಸಲು ಯೋಜನೆ ರೂಪಿಸಿರುವ ಬಗ್ಗೆ ಇತ್ತೀಚೆಗೆ ವರದಿಯಾಗಿತ್ತು. ಇದೀಗ, ಅವರು ಚಾಮರಾಜನಗರದಲ್ಲಿ (Chamarajanagar) ಸಾಫ್ಟ್ ಡ್ರಿಂಕ್ ಫ್ಯಾಕ್ಟರಿ (Soft Drink Factroy) ಆರಂಭಿಸಲಿದ್ದಾರೆ ಎಂದು ವರದಿಯಾಗಿದೆ. ಮುತ್ತಯ್ಯ ಬಿವರೇಜ್ ಆ್ಯಂಡ್ ಕೆನ್​ಫೆಕ್ಷನರಿ ಪ್ರೈವೇಟ್ ಲಿಮಿಟೆಡ್ (Muthiah Beverage and Confectionery Private Limited) ಘಟಕವನ್ನು ಮುರಳೀಧರನ್ ಅವರು, ಚಾಮರಾಜನಗರದ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ವಲಯದಲ್ಲಿ ಸ್ಥಾಪಿಸಲಿದ್ದಾರೆ. ಸುಮಾರು 46 ಎಕರೆ ವಿಸ್ತಾರವಾದ ಪ್ರದೇಶದಲ್ಲಿ ಘಟಕ ಸ್ಥಾಪನೆಯಾಗಲಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಸಾಫ್ಟ್ ಡ್ರಿಂಕ್ ಫ್ಯಾಕ್ಟರಿ ಆರಂಭಿಸಲು ಅಗತ್ಯವಿರುವ ಆಡಳಿತಾತ್ಮಕ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಕಾರ್ಖಾನೆಯ ನಿರ್ಮಾಣ ಪ್ರಾರಂಭವಾಗಿದೆ. ಮುತ್ತಯ್ಯ ಪಾನೀಯಗಳ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ರ್ಯಾಂಡ್, ತಂಪು ಪಾನೀಯಗಳು, ರಿಫ್ರೆಶ್ ಡ್ರಿಂಕ್ಸ್​​ ಮತ್ತು ಫ್ಲೇವರ್ಡ್ ಹಾಲನ್ನು ತಯಾರಿಸಲಿದೆ. ಈ ಬ್ರ್ಯಾಂಡ್​​ನಲ್ಲಿ ಚಾಕೊಲೇಟ್‌ಗಳನ್ನು ಸಹ ಉತ್ಪಾದಿಸಲಾಗುತ್ತದೆ. ಈ ಆಲ್ಕೋಹಾಲ್ ರಹಿತ ಪಾನೀಯಗಳ ಉತ್ಪಾದನೆಯು ಚಾಮರಾಜನಗರದ ಬೆಳವಣಿಗೆಗೆ ಕೊಡುಗೆ ನೀಡಲಿದ್ದು, ಅಭಿವೃದ್ಧಿಗೆ ಪೂರಕವಾಗಲಿದೆ ಎನ್ನಲಾಗಿದೆ.

250 ಕೋಟಿ ರೂ.ನಿಂದ 400 ಕೋಟಿ ರೂ.ವರೆಗೆ ಈ ಯೋಜನೆಗೆ ಹೂಡಿಕೆ ಮಾಡಲಾಗುತ್ತಿದೆ. ಇದರಿಂದಾಗಿ ಸ್ಥಳೀಯವಾಗಿ 500 ರಿಂದ 800 ಉದ್ಯೋಗಾವಕಾಶ ಸೃಷ್ಟಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಪರೋಕ್ಷವಾಗಿ ನೂರಾರು ಮಂದಿಗೆ ಉದ್ಯೋಗಾವಕಾಶ ಸೃಷ್ಟಿಸಲಿದೆ ಎಂಬುದಾಗಿ ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

ಕಾರ್ಖಾನೆ ಸ್ಥಾಪನೆಗಾಗಿ ಮುರಳೀಧರನ್ ಅವರು ಆರು ತಿಂಗಳ ಹಿಂದೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ (ಕೆಐಎಡಿಬಿ) ಭೂಮಿ ಖರೀದಿಸಿದ್ದರು.

ಮುತ್ತಯ್ಯ ಬಿವರೇಜಸ್ ಘಟಕದ ಕಾಮಗಾರಿ 9 ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಕಾರ್ಖಾನೆ ಮೂಲಗಳು ತಿಳಿಸಿವೆ. ಮುತ್ತಯ್ಯ ಬೆವರೇಜಸ್ ಚಾಮರಾಜನಗರದ ಕೈಗಾರಿಕಾ ರಂಗದ ಚಹರೆಯನ್ನು ಬದಲಾಯಿಸಲಿದೆ ಮತ್ತು ಸ್ಥಳೀಯ ಜನರಿಗೆ ಉದ್ಯೋಗವನ್ನು ನೀಡಲಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕರು ತಿಳಿಸಿದ್ದಾರೆ.

ಇದನ್ನೂ ಓದಿ: ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಧಾರವಾಡಕ್ಕೆ ಎಂಟ್ರಿ: ಕಾರ್ಖಾನೆ ಆರಂಭಿಸಲಿರುವ ಮುತ್ತಯ್ಯ ಮುರಳಿಧರನ್

ಶ್ರೀಲಂಕಾದ ಮೆ. ಸಿಲೋನ್ ಬಿವರೇಜ್ ಕ್ಯಾನ್ ಪ್ರೈವೆಟ್ ಲಿಮಿಟೆಡ್ ಸಹಯೋಗದೊಂದಿಗೆ ಮುರಳೀಧರನ್ ಅವರು ಚಾಮರಾಜನಗರದಲ್ಲಿ ಉದ್ಯಮ ವಿಸ್ತರಣೆ ಯೋಜನೆ ಹಾಕಿಕೊಂಡಿದ್ದಾರೆ. ಕರ್ನಾಟಕ ಸರ್ಕಾರವು ಕ್ರಿಕೆಟ್ ಕ್ಷೇತ್ರದಲ್ಲಿ ಮುರಳೀಧರನ್ ಅವರ ಸಾಧನೆಯನ್ನು ಗುರುತಿಸಿ ಅವರ ಉದ್ಯಮಕ್ಕಾಗಿ ಭೂಮಿ ಗುತ್ತಿಗೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಧಾರವಾಡದಲ್ಲಿ ಉದ್ಯಮ ಸ್ಥಾಪಿಸಲು ಈಗಾಗಲೇ ಯೋಜನೆ ರೂಪಿಸಿರುವ ಮುರಳೀಧರನ್, ಎಫ್ಎಂಸಿಜಿ ಕ್ಲಸ್ಟರ್ ನಲ್ಲಿ ತನ್ನ ಘಟಕ ಸ್ಥಾಪಿಸಲು ಅನುಮತಿ ಹಾಗೂ ಸ್ಥಳಾವಕಾಶ ಕೋರಿ ಕರ್ನಾಟಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಎಲ್ಲವೂ ಯೋಜನೆ ಪ್ರಕಾರ ನಡೆದರೆ, ಮೂರು ತಿಂಗಳಲ್ಲಿ ಉದ್ದೇಶಿತ ಕೈಗಾರಿಕೆ ಸ್ಥಾಪನೆಯ ಪ್ರಾಥಮಿಕ ಕಾರ್ಯಗಳು ಆರಂಭವಾಗಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ