ಸ್ಪರ್ಧೆ ನಿಶ್ಚಿತ, 5 ಕ್ಷೇತ್ರ ಆಯ್ಕೆ ಮಾಡಿರುವೆ, ಬಿಜೆಪಿ ಟಿಕೆಟ್ ಕೊಡದಿದ್ದರೆ ನಾನು ಇಂಡಿಪೆಂಡೆಂಟ್ -ಪ್ರಮೋದ್ ಮುತಾಲಿಕ್ ಪ್ರಕಟ

Pramod Muthalik: ಎಸ್ಸಿ ಎಸ್ಟಿ ಮೀಸಲಾತಿ, ಮಹಿಳಾ ಮೀಸಲಾತಿ ಹಾಗೂ ಪದವೀಧರರಿಗೆ ಮೀಸಲಾತಿಯಂತೆ ಬಿಜೆಪಿಯಲ್ಲಿ ಹಿಂದುಗಳಿಗೂ ಮೀಸಲಾತಿ ನೀಡಬೇಕು ಎಂಬುದು ಮುತಾಲಿಕ್ ಆಗ್ರಹವಾಗಿದೆ.

ಸ್ಪರ್ಧೆ ನಿಶ್ಚಿತ, 5 ಕ್ಷೇತ್ರ ಆಯ್ಕೆ ಮಾಡಿರುವೆ, ಬಿಜೆಪಿ ಟಿಕೆಟ್ ಕೊಡದಿದ್ದರೆ ನಾನು ಇಂಡಿಪೆಂಡೆಂಟ್ -ಪ್ರಮೋದ್ ಮುತಾಲಿಕ್ ಪ್ರಕಟ
ಬಿಜೆಪಿ ಟಿಕೆಟ್ ಕೊಡದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗುವೆ -ಪ್ರಮೋದ್ ಮುತಾಲಿಕ್
Follow us
| Updated By: ಸಾಧು ಶ್ರೀನಾಥ್​

Updated on:Dec 21, 2022 | 2:53 PM

ಮೈಸೂರು: ಮುಂದಿನ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ (Karnataka assembly elections 2023) ಕರ್ನಾಟಕದಲ್ಲಿ ರಾಜಕೀಯ ಗರಿಗೆದರಿದೆ. ಸಂಭವನೀಯ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು ಅದಾಗಲೇ ಚುನಾವಣಾ ರಣತಂತ್ರ ರೂಪಿಸುವಲ್ಲಿ ನಿರತರಾಗಿದ್ದಾರೆ. ಈ ಮಧ್ಯೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Sri Rama Sene chief Pramod Muthalik) ಮೈಸೂರಿನಲ್ಲಿ ಮಾತನಾಡಿದ್ದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನನ್ನ ಸ್ಪರ್ಧೆ ನಿಶ್ಚಿತ ಎಂದಿದ್ದಾರೆ. ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ರಾಜ್ಯದ 6 ವಿಧಾನಸಭಾ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡಿದ್ದೇನೆ. 5 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಪಕ್ಷೇತರವಾಗಿ ಸ್ಪರ್ಧಿಸಿದರೂ ಹಿಂದುತ್ವದ ಅಜೆಂಡಾದ ಮೂಲಕ ಗೆದ್ದು ಬರುತ್ತೇನೆ:

ತಾವು ಸ್ಪರ್ಧಿಸಬಯಸುವ 5 ಕ್ಷೇತ್ರಗಳು ಯಾವುವು ಎಂಬುದನ್ನೂ ಘೋಷಿಸಿರುವ ಪ್ರಮೋದ್ ಮುತಾಲಿಕ್ ಅವರು ಜಮಖಂಡಿ, ತೇರದಾಳ, ಧಾರವಾಡ ನಗರ, ಶೃಂಗೇರಿ ಮತ್ತು ಕಾರ್ಕಳ ವಿಧಾನಸಭಾ ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ಭ್ರಷ್ಟಾಚಾರದ ದಾಖಲೆಗಳಿವೆ, ಮುಂದಿನ ದಿನದಲ್ಲಿ ನಿಮ್ಮ ಮೇಲೆ ಕೇಸ್ ಹಾಕುತ್ತೇನೆ: ಸುನಿಲ್​ ಕುಮಾ​ರ್​ಗೆ ಮುತಾಲಿಕ್​ ಎಚ್ಚರಿಕೆ

ಬಿಜೆಪಿ ಟಿಕೆಟ್​ ಕೊಡದಿದ್ದರೆ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇನೆ ಎಂದಿರುವ ಪ್ರಮೋದ್​ ಮುತಾಲಿಕ್ ಬಿಜೆಪಿಯಿಂದ 25 ಟಿಕೆಟ್​ ಕೇಳಿದ್ದೇವೆ. ಈ ಪೈಕಿ ಐವರು ಸ್ವಾಮೀಜಿಗಳಿಗೂ ಟಿಕೆಟ್ ನೀಡುವಂತೆ ಕೇಳಿದ್ದೇವೆ. ಒಂದು ವೇಳೆ ಟಿಕೆಟ್​​ ಕೊಡದಿದ್ರೆ ನಾವೆಲ್ಲ ಪಕ್ಷೇತರವಾಗಿ ಸ್ಪರ್ಧೆ ಮಾಡ್ತೇವೆ. ಪಕ್ಷೇತರವಾಗಿ ಸ್ಪರ್ಧಿಸಿದರೂ ಹಿಂದುತ್ವದ ಅಜೆಂಡಾ (Hindutva) ಮೂಲಕ ಗೆದ್ದು ಬರುತ್ತೇನೆ ಎಂದು ಮೈಸೂರಿನಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಮುತಾಲಿಕ್ ಹೇಳಿದ್ದಾರೆ. ಎಸ್ಸಿ ಎಸ್ಟಿ ಮೀಸಲಾತಿ, ಮಹಿಳಾ ಮೀಸಲಾತಿ ಹಾಗೂ ಪದವೀಧರರಿಗೆ ಮೀಸಲಾತಿಯಂತೆ ಬಿಜೆಪಿಯಲ್ಲಿ ಹಿಂದುಗಳಿಗೂ ಮೀಸಲಾತಿ ನೀಡಬೇಕು ಎಂಬುದು ಮುತಾಲಿಕ್ ಆಗ್ರಹವಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ಕುರಿತಾದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:47 pm, Wed, 21 December 22

‘ಮಾರ್ಟಿನ್’ ರಿಲೀಸ್ ವೇಳೆ ಗೋಪೂಜೆ ಮಾಡಿದ ಧ್ರುವ ಸರ್ಜಾ
‘ಮಾರ್ಟಿನ್’ ರಿಲೀಸ್ ವೇಳೆ ಗೋಪೂಜೆ ಮಾಡಿದ ಧ್ರುವ ಸರ್ಜಾ
ಶಿವಕುಮಾರ್​​ಗೆ ವಿಶ್ ಮಾಡಲು ಬೆಳಗ್ಗೆಯೇ ಮನೆ ಮುಂದೆ ಅಭಿಮಾನಿಗಳ ದಂಡು
ಶಿವಕುಮಾರ್​​ಗೆ ವಿಶ್ ಮಾಡಲು ಬೆಳಗ್ಗೆಯೇ ಮನೆ ಮುಂದೆ ಅಭಿಮಾನಿಗಳ ದಂಡು
ಸಿದ್ದರಾಮಯ್ಯ ವಾಪಸ್ಸು ಕೊಟ್ಟಿದ್ದು ಅವರ ಸ್ವಂತ ಸೈಟುಗಳಲ್ಲ: ಕುಮಾರಸ್ವಾಮಿ
ಸಿದ್ದರಾಮಯ್ಯ ವಾಪಸ್ಸು ಕೊಟ್ಟಿದ್ದು ಅವರ ಸ್ವಂತ ಸೈಟುಗಳಲ್ಲ: ಕುಮಾರಸ್ವಾಮಿ
ಪೂಜೆ ಮತ್ತು ಮಂಗಳಾರತಿ ನಂತರ ಕುಮಾರಸ್ವಾಮಿಗೆ ಪ್ರಧಾನ ಅರ್ಚಕರಿಂದ ಸನ್ಮಾನ
ಪೂಜೆ ಮತ್ತು ಮಂಗಳಾರತಿ ನಂತರ ಕುಮಾರಸ್ವಾಮಿಗೆ ಪ್ರಧಾನ ಅರ್ಚಕರಿಂದ ಸನ್ಮಾನ
ಮೈಸೂರು ದಸರಾ 2024: ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಲೈವ್​ ಆಗಿ ನೋಡಿ
ಮೈಸೂರು ದಸರಾ 2024: ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಲೈವ್​ ಆಗಿ ನೋಡಿ
ಖರೀದಿ ಭರಾಟೆ: K.R.ಮಾರ್ಕೆಟ್​ನಿಂದ ಟೌನ್​ಹಾಲ್​​ವರೆಗೆ ಟ್ರಾಫಿಕ್ ಜಾಮ್​
ಖರೀದಿ ಭರಾಟೆ: K.R.ಮಾರ್ಕೆಟ್​ನಿಂದ ಟೌನ್​ಹಾಲ್​​ವರೆಗೆ ಟ್ರಾಫಿಕ್ ಜಾಮ್​
Shocking: ಕ್ರೇನ್ ಮೂಲಕ ನರಕಕ್ಕೆ ಎಂಟ್ರಿಕೊಟ್ಟ ದಾಂಡಿಗರು
Shocking: ಕ್ರೇನ್ ಮೂಲಕ ನರಕಕ್ಕೆ ಎಂಟ್ರಿಕೊಟ್ಟ ದಾಂಡಿಗರು
Daily Devotional: ನವರಾತ್ರಿ 9ನೇ ದಿನ ಸಿದ್ಧಿದಾತ್ರಿ ದೇವಿ ಆರಾಧನೆ ಮಹತ್ವ
Daily Devotional: ನವರಾತ್ರಿ 9ನೇ ದಿನ ಸಿದ್ಧಿದಾತ್ರಿ ದೇವಿ ಆರಾಧನೆ ಮಹತ್ವ
Nithya Bhavishya: ನವರಾತ್ರಿಯ 9ನೇ ದಿನ ಶುಕ್ರವಾರದ ರಾಶಿ ಭವಿಷ್ಯ
Nithya Bhavishya: ನವರಾತ್ರಿಯ 9ನೇ ದಿನ ಶುಕ್ರವಾರದ ರಾಶಿ ಭವಿಷ್ಯ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ