AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪರ್ಧೆ ನಿಶ್ಚಿತ, 5 ಕ್ಷೇತ್ರ ಆಯ್ಕೆ ಮಾಡಿರುವೆ, ಬಿಜೆಪಿ ಟಿಕೆಟ್ ಕೊಡದಿದ್ದರೆ ನಾನು ಇಂಡಿಪೆಂಡೆಂಟ್ -ಪ್ರಮೋದ್ ಮುತಾಲಿಕ್ ಪ್ರಕಟ

Pramod Muthalik: ಎಸ್ಸಿ ಎಸ್ಟಿ ಮೀಸಲಾತಿ, ಮಹಿಳಾ ಮೀಸಲಾತಿ ಹಾಗೂ ಪದವೀಧರರಿಗೆ ಮೀಸಲಾತಿಯಂತೆ ಬಿಜೆಪಿಯಲ್ಲಿ ಹಿಂದುಗಳಿಗೂ ಮೀಸಲಾತಿ ನೀಡಬೇಕು ಎಂಬುದು ಮುತಾಲಿಕ್ ಆಗ್ರಹವಾಗಿದೆ.

ಸ್ಪರ್ಧೆ ನಿಶ್ಚಿತ, 5 ಕ್ಷೇತ್ರ ಆಯ್ಕೆ ಮಾಡಿರುವೆ, ಬಿಜೆಪಿ ಟಿಕೆಟ್ ಕೊಡದಿದ್ದರೆ ನಾನು ಇಂಡಿಪೆಂಡೆಂಟ್ -ಪ್ರಮೋದ್ ಮುತಾಲಿಕ್ ಪ್ರಕಟ
ಬಿಜೆಪಿ ಟಿಕೆಟ್ ಕೊಡದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗುವೆ -ಪ್ರಮೋದ್ ಮುತಾಲಿಕ್
TV9 Web
| Updated By: ಸಾಧು ಶ್ರೀನಾಥ್​|

Updated on:Dec 21, 2022 | 2:53 PM

Share

ಮೈಸೂರು: ಮುಂದಿನ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ (Karnataka assembly elections 2023) ಕರ್ನಾಟಕದಲ್ಲಿ ರಾಜಕೀಯ ಗರಿಗೆದರಿದೆ. ಸಂಭವನೀಯ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು ಅದಾಗಲೇ ಚುನಾವಣಾ ರಣತಂತ್ರ ರೂಪಿಸುವಲ್ಲಿ ನಿರತರಾಗಿದ್ದಾರೆ. ಈ ಮಧ್ಯೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Sri Rama Sene chief Pramod Muthalik) ಮೈಸೂರಿನಲ್ಲಿ ಮಾತನಾಡಿದ್ದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನನ್ನ ಸ್ಪರ್ಧೆ ನಿಶ್ಚಿತ ಎಂದಿದ್ದಾರೆ. ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ರಾಜ್ಯದ 6 ವಿಧಾನಸಭಾ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡಿದ್ದೇನೆ. 5 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಪಕ್ಷೇತರವಾಗಿ ಸ್ಪರ್ಧಿಸಿದರೂ ಹಿಂದುತ್ವದ ಅಜೆಂಡಾದ ಮೂಲಕ ಗೆದ್ದು ಬರುತ್ತೇನೆ:

ತಾವು ಸ್ಪರ್ಧಿಸಬಯಸುವ 5 ಕ್ಷೇತ್ರಗಳು ಯಾವುವು ಎಂಬುದನ್ನೂ ಘೋಷಿಸಿರುವ ಪ್ರಮೋದ್ ಮುತಾಲಿಕ್ ಅವರು ಜಮಖಂಡಿ, ತೇರದಾಳ, ಧಾರವಾಡ ನಗರ, ಶೃಂಗೇರಿ ಮತ್ತು ಕಾರ್ಕಳ ವಿಧಾನಸಭಾ ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ಭ್ರಷ್ಟಾಚಾರದ ದಾಖಲೆಗಳಿವೆ, ಮುಂದಿನ ದಿನದಲ್ಲಿ ನಿಮ್ಮ ಮೇಲೆ ಕೇಸ್ ಹಾಕುತ್ತೇನೆ: ಸುನಿಲ್​ ಕುಮಾ​ರ್​ಗೆ ಮುತಾಲಿಕ್​ ಎಚ್ಚರಿಕೆ

ಬಿಜೆಪಿ ಟಿಕೆಟ್​ ಕೊಡದಿದ್ದರೆ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇನೆ ಎಂದಿರುವ ಪ್ರಮೋದ್​ ಮುತಾಲಿಕ್ ಬಿಜೆಪಿಯಿಂದ 25 ಟಿಕೆಟ್​ ಕೇಳಿದ್ದೇವೆ. ಈ ಪೈಕಿ ಐವರು ಸ್ವಾಮೀಜಿಗಳಿಗೂ ಟಿಕೆಟ್ ನೀಡುವಂತೆ ಕೇಳಿದ್ದೇವೆ. ಒಂದು ವೇಳೆ ಟಿಕೆಟ್​​ ಕೊಡದಿದ್ರೆ ನಾವೆಲ್ಲ ಪಕ್ಷೇತರವಾಗಿ ಸ್ಪರ್ಧೆ ಮಾಡ್ತೇವೆ. ಪಕ್ಷೇತರವಾಗಿ ಸ್ಪರ್ಧಿಸಿದರೂ ಹಿಂದುತ್ವದ ಅಜೆಂಡಾ (Hindutva) ಮೂಲಕ ಗೆದ್ದು ಬರುತ್ತೇನೆ ಎಂದು ಮೈಸೂರಿನಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಮುತಾಲಿಕ್ ಹೇಳಿದ್ದಾರೆ. ಎಸ್ಸಿ ಎಸ್ಟಿ ಮೀಸಲಾತಿ, ಮಹಿಳಾ ಮೀಸಲಾತಿ ಹಾಗೂ ಪದವೀಧರರಿಗೆ ಮೀಸಲಾತಿಯಂತೆ ಬಿಜೆಪಿಯಲ್ಲಿ ಹಿಂದುಗಳಿಗೂ ಮೀಸಲಾತಿ ನೀಡಬೇಕು ಎಂಬುದು ಮುತಾಲಿಕ್ ಆಗ್ರಹವಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ಕುರಿತಾದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:47 pm, Wed, 21 December 22

ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್