AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೃಂಗೇರಿ ಶ್ರೀಗಳಿಗೆ ಅರಮನೆಗೆ ಪೂರ್ಣಕುಂಭ ಸ್ವಾಗತ, ದೀರ್ಘದಂಡ ನಮಸ್ಕಾರದೊಂದಿಗೆ ಪಾದಪೂಜೆ ಮಾಡಿದ ಯದುವೀರ ದಂಪತಿ

ಮೆರವಣಿಗೆಯಲ್ಲಿ ಅರಮನೆ ನಾದಸ್ವಾರ, ವೇದ ಮಂತ್ರ ಘೋಷಗಳು ಮೊಳಗಿದವು. ಮೈಸೂರು ರಾಜವಂಶಸ್ಥರಿಂದ ಸ್ವಾಮೀಜಿಗೆ ಪೂರ್ಣಕುಂಭ ಸ್ವಾಗತ ಮಾಡಲಾಗಿದ್ದು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿ ಸ್ವಾಮೀಜಿಗೆ ದೀರ್ಘದಂಡ ನಮಸ್ಕಾರ ಮಾಡಿದ್ರು.

ಶೃಂಗೇರಿ ಶ್ರೀಗಳಿಗೆ ಅರಮನೆಗೆ ಪೂರ್ಣಕುಂಭ ಸ್ವಾಗತ, ದೀರ್ಘದಂಡ ನಮಸ್ಕಾರದೊಂದಿಗೆ ಪಾದಪೂಜೆ ಮಾಡಿದ ಯದುವೀರ ದಂಪತಿ
ಯದುವೀರ ದಂಪತಿಗೆ ಆಶೀರ್ವಾದ ಮಾಡಿದ ಶೃಂಗೇರಿ ಶ್ರೀಗಳು
TV9 Web
| Edited By: |

Updated on:May 10, 2022 | 10:52 PM

Share

ಮೈಸೂರು: ಮೈಸೂರು ಅರಮನೆಗೆ ಶೃಂಗೇರಿಯ ಕಿರಿಯ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ(Vidhushekara Bharathi Swamiji) ಆಗಮಿಸಿದ್ದಾರೆ. ಅರಮನೆ ಆವರಣಕ್ಕೆ ಆಗಮಿಸಿದ ವಿಧುಶೇಖರ ಭಾರತಿ ಸ್ವಾಮೀಜಿ ಅವರಿಗೆ ಮೈಸೂರು ಅರಮನೆಯಿಂದ ಸಾಂಪ್ರದಾಯಿಕ ಸ್ವಾಗತ ಕೋರಲಾಗಿದೆ. ಜಯಮಾರ್ತಾಂಡ ದ್ವಾರದಿಂದ ಕಲ್ಯಾಣ ಮಂಟಪದವರೆಗೆ ಬೆಳ್ಳಿ ಪಲ್ಲಕ್ಕಿಯಲ್ಲಿ ಸ್ವಾಮೀಜಿಯವರಿಗೆ ಮೆರವಣಿಗೆ ಮಾಡಲಾಗಿದೆ.

ಜೀವನದಲ್ಲಿ ಆಧುನಿಕತೆ ಎಷ್ಟೇ ಹಾಸುಹೊಕ್ಕಿದ್ದರು. ಜಗತ್ತೇ ಬದಲಾದರೂ ಅರಮನೆಯ ಆಚರಣೆ ಪರಂಪರೆ ಬದಲಾಗುವುದಿಲ್ಲ ಇದಕ್ಕೆ ಸಾಕ್ಷಿ ಮೈಸೂರು ಅರಮನೆಯಲ್ಲಿ ನಡೆದ ಅರ್ಥಪೂರ್ಣ ಗುರುಪೂಜಾ ಕಾರ್ಯಕ್ರಮ. ಇವತ್ತು ಮೈಸೂರು ಅರಮನೆಯಲ್ಲಿ ಹಬ್ಬದ ವಾತಾವರಣ ಮನೆಮಾಡಿತ್ತು. ಇದಕ್ಕೆ ಕಾರಣ ಶೃಂಗೇರಿ ಶಾರದಾಪೀಠದ ಕಿರಿಯ ಸ್ವಾಮಿಗಳಾದ ಶ್ರೀ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ. ಹೌದು ಶ್ರೀಗಳು ಮೈಸೂರಿಗೆ ಆಗಮಿಸಿದ್ದರು. ಶ್ರೀಗಳ ಆಗಮನಕ್ಕಾಗಿ ಅರಮನೆಯಲ್ಲಿ ರಾಜ ಮನೆತನದಿಂದ ಸಾಂಪ್ರದಾಯಿಕವಾಗಿ ಸ್ವಾಗತ ಕೋರಲಾಯ್ತು.

ಅರಮನೆ ಜಯ ಮಾರ್ತಾಂಡ ದ್ವಾರದ ಬಳಿ ಗುರುಗಳ ಸ್ವಾಗತಕ್ಕೆ ಎಲ್ಲಾ ಸಿದ್ದತೆ ಮಾಡಲಾಗಿತ್ತು. ಶ್ರೀ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳನ್ನು ಬೆಳ್ಳಿ ಪಲ್ಲಕ್ಕಿಯಲ್ಲಿ ಮೆರವಣಿಗೆ ಮೂಲಕ ಅರಮನೆಗೆ ಕರೆದುಕೊಂಡು ಬರಲಾಯ್ತು. ವೇದ ಘೋಷಗಳ ಮೊಳಗುತ್ತಿದ್ದವು. ಅರಮನೆ ಕಲ್ಯಾಣಮಂಟಪದ ಬಳಿ ಯದುವಂಶದ ಪ್ರಮೋದ ದೇವಿ ಒಡೆಯರ್, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಪತ್ನಿ‌ ತ್ರಿಷಿಕಾ ಕುಮಾರಿ ಪುತ್ರ ಆದ್ಯವೀರ ಗುರುಗಳನ್ನು ಸ್ವಾಗತಿಸಿದರು. ಎಲ್ಲರೂ ಗುರುಗಳಿಗೆ ಸಾಷ್ಟಾಂಗ ನಮಸ್ಕಾರ ಮಾಡಿ ಸ್ವಾಗತಿಸಿದರು.

ತದನಂತರ ಗುರುಗಳು ಮೈಸೂರು ಅರಮನೆಯ ಕಲ್ಯಾಣ ಮಂಟಪಕ್ಕೆ ತೆರಳಿದರು ಅಲ್ಲಿ ವಿಶೇಷ ಪೂಜೆಗೆ ಎಲ್ಲ ವಸ್ತುಗಳನ್ನು ಮಾಡಿಕೊಳ್ಳಲಾಗಿತ್ತು ಸುಮಾರು 45 ನಿಮಿಷಗಳ ಕಾಲಶ್ರೀ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳಿಗೆ ಶ್ರದ್ದಾ ಭಕ್ತಿಯಿಂದ ಪೂಜೆ ಸಲ್ಲಿಸಲಾಯ್ತು. ರಾಜ ಮನೆತನದವರು ಗುರುಗಳಿಗೆ ಗುರು ಮನೆಯ ಕಾಣಿಕೆ ನೀಡಿ ಗೌರವಿಸಿದರು. ಈ ವೇಳೆ ಯದುವಂಶದ ಕುಡಿ ಆದ್ಯವೀರ ತಾಯಿಯ ಬಳಿಯೇ ಕುಳಿತು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದದ್ದು ಎಲ್ಲರ ಗಮನಸೆಳೆಯಿತು.

ವರದಿ: ರಾಮ್, ಟಿವಿ9 ಮೈಸೂರು

sringeri vidhushekara bharathi swamiji 1

Published On - 8:52 pm, Tue, 10 May 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ