AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ ಮಹೋತ್ಸವ 2021: ಈ ಬಾರಿಯ ದಸರಾ ಬಗ್ಗೆ ವಿವರಣೆ ನೀಡಿದ ಸಚಿವ ಎಸ್​ಟಿ ಸೋಮಶೇಖರ್

Mysuru Dasara Festival 2021: ಸೆಪ್ಟೆಂಬರ್ 16 ರಂದು ಅಂಬಾವಿಲಾಸ ಅರಮನೆಗೆ ಗಜಪಡೆ ಆಗಮನ ಆಗಲಿದೆ. ದಸರಾ ಜಂಬೂ ಸವಾರಿಯಲ್ಲಿ 8 ಆನೆಗಳು ಭಾಗಿ ಆಗಲಿವೆ ಎಂದು ಸೋಮಶೇಖರ್ ಮಾಹಿತಿ ನೀಡಿದ್ದಾರೆ.

ಮೈಸೂರು ದಸರಾ ಮಹೋತ್ಸವ 2021: ಈ ಬಾರಿಯ ದಸರಾ ಬಗ್ಗೆ ವಿವರಣೆ ನೀಡಿದ ಸಚಿವ ಎಸ್​ಟಿ ಸೋಮಶೇಖರ್
ಮೈಸೂರು ದಸರಾ ಆನೆಗಳು (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Sep 08, 2021 | 3:53 PM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ- 2021 ಸಂಬಂಧಿಸಿ ಮೈಸೂರಿನಲ್ಲಿ ಸಚಿವ ಎಸ್.ಟಿ‌. ಸೋಮಶೇಖರ್ ಹೇಳಿಕೆ ನೀಡಿದ್ದಾರೆ. ಸೆಪ್ಟೆಂಬರ್ 13 ಕ್ಕೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಿಂದ ಗಜಪಯಣಕ್ಕೆ ಚಾಲನೆ ನೀಡಲಾಗುವುದು. ಸೆಪ್ಟೆಂಬರ್ 16 ರಂದು ಅಂಬಾವಿಲಾಸ ಅರಮನೆಗೆ ಗಜಪಡೆ ಆಗಮನ ಆಗಲಿದೆ. ದಸರಾ ಜಂಬೂ ಸವಾರಿಯಲ್ಲಿ 8 ಆನೆಗಳು ಭಾಗಿ ಆಗಲಿವೆ ಎಂದು ಸೋಮಶೇಖರ್ ಮಾಹಿತಿ ನೀಡಿದ್ದಾರೆ. ಅಕ್ಟೋಬರ್ 7 ರಂದು ಮೈಸೂರು ದಸರಾ ಉದ್ಘಾಟನೆ ನಡೆಯಲಿದೆ. ಉದ್ಘಾಟಕರು ಯಾರು ಎಂದು ಸಿಎಂ ನಿರ್ಧರಿಸುತ್ತಾರೆ ಎಂದು ಅವರು ಹೇಳಿದ್ದಾರೆ.

50 ಲಕ್ಷ ರೂಪಾಯಿ ಆನೆಗಳ ಪೋಷಣೆಗೆ ಮೀಸಲಿಡಲಾಗಿದೆ. 9 ದಿನವೂ ಅರಮನೆ ಒಳಗೆ ಸಾಂಸ್ಕೃತಿಕ ಕಾರ್ಯಕ್ರಮ ಇರಲಿದೆ. ನಂಜನಗೂಡಿನ ದೇಗುಲ ಒಳಗೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಆಗಲಿದೆ. ಅಕ್ಟೋಬರ್​ 15 ರಂದು ಜಂಬೂ ಸವಾರಿ ನಡೆಯಲಿದೆ. ಈ ಬಾರಿ ನಗರದ ಒಳಗೆ 100 ಕಿಲೋ ಮೀಟರ್ ದೀಪಾಲಂಕಾರ ಮಾಡಲಾಗುವುದು. ಮೈಸೂರು ನಗರದ 157 ವೃತ್ತಗಳಲ್ಲಿ ದೀಪಾಲಂಕಾರ ಮಾಡಲಾಗುವುದು. ದಸರಾದಲ್ಲಿ ಮೂರು ಸ್ತಬ್ಧಚಿತ್ರಗಳಿಗೆ ಈ ಬಾರಿ ಅವಕಾಶ ನೀಡಲಾಗುತ್ತದೆ. ಚಾಮುಂಡೇಶ್ವರಿ ಉತ್ಸವಮೂರ್ತಿ ದರ್ಶನಕ್ಕೆ ಅವಕಾಶ ಇರಲಿದೆ. ಹೆಚ್ಚಿನ ಜನ ಭಾಗಿಯಾಗಲು ಅವಕಾಶ ನೀಡಲು ಮನವಿ ಮಾಡಲಾಗಿದೆ ಎಂದು ಮೈಸೂರಿನಲ್ಲಿ ಸಚಿವ ಎಸ್.ಟಿ‌. ಸೋಮಶೇಖರ್ ವಿವರಣೆ ನೀಡಿದ್ಧಾರೆ.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸಹ- 2021ಯ ಜಂಬೂಸವಾರಿಗೆ ಆಯ್ಕೆಯಾದ ಆನೆಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಬಾರಿ ದಸರಾದಲ್ಲಿ 8 ಆನೆಗಳು ಭಾಗಿಯಾಗಲಿವೆ. ಮೈಸೂರು ದಸರಾ ಮಹೋತ್ಸವ ಸಂಬಂಧಿಸಿ ಮೈಸೂರಿನಲ್ಲಿ ದಸರಾ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗಿದೆ. ಸಚಿವ ಎಸ್.ಟಿ. ಸೋಮಶೇಖರ್ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಮೈಸೂರಿನ ಅರಮನೆ ಸಭಾಂಗಣದಲ್ಲಿ ಸಭೆ ನಡೆದಿದೆ. ಸಂಸದ ಪ್ರತಾಪ್​​ಸಿಂಹ, ಶಾಸಕರಾದ ಜಿ.ಟಿ. ದೇವೇಗೌಡ, ಎಸ್.ಎ. ರಾಮದಾಸ್, ಹರ್ಷವರ್ಧನ್, ನಿರಂಜನ್ ಕುಮಾರ್, ಮೇಯರ್ ಸುನಂದಾ ಪಾಲನೇತ್ರ, ಡಿಸಿ ಡಾ. ಬಗಾದಿ ಗೌತಮ್, ಪೊಲೀಸ್ ಕಮಿಷನರ್ ಡಾ. ಚಂದ್ರಗುಪ್ತ ಮತ್ತು ಇತರ ಅಧಿಕಾರಿಗಳು ಭಾಗಿ ಆಗಿದ್ದಾರೆ.

ಇದನ್ನೂ ಓದಿ: Mysuru Dasara 2021: ಮೈಸೂರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲಿರುವ ಆನೆಗಳ ಪಟ್ಟಿ ಹೀಗಿದೆ

ಇದನ್ನೂ ಓದಿ: Mysuru Dasara 2021: ಅಂದು ಪುಂಡಾನೆ, ಇಂದು ದಸರಾ ಜಂಬೂಸವಾರಿಯ ಆಕರ್ಷಣೆ; ಇದು ಅಶ್ವತ್ಥಾಮನ ಜೀವನಗಾಥೆ 

Published On - 3:46 pm, Wed, 8 September 21

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ