AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪಹಾರ ಸೇವಿಸುತ್ತಿದ್ದ ವೇಳೆ ಹೃದಯಾಘಾತ; 25 ವರ್ಷದ ಕಾನೂನು ವಿದ್ಯಾರ್ಥಿ ಸಾವು

ನಂಜಾಪುರ ಗ್ರಾಮದ 25 ವರ್ಷದ ನಿತಿನ್ ಕುಮಾರ್ ಮೃತ ದುರ್ದೈವಿ. ಮೈಸೂರಿನ ವಿದ್ಯಾವರ್ಧಕ ಕಾನೂನು ಕಾಲೇಜಿನಲ್ಲಿ ನಾಲ್ಕನೇ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಉಪಹಾರ ಸೇವಿಸುತ್ತಿದ್ದ ವೇಳೆ ಹೃದಯಾಘಾತ; 25 ವರ್ಷದ ಕಾನೂನು ವಿದ್ಯಾರ್ಥಿ ಸಾವು
ನಿತಿನ್ ಕುಮಾರ್(25)
TV9 Web
| Edited By: |

Updated on:Feb 07, 2022 | 11:42 AM

Share

ಮೈಸೂರು: ಉಪಹಾರ ಸೇವಿಸುತ್ತಿದ್ದ ವೇಳೆ ಹೃದಯಾಘಾತದಿಂದ (Heart attack) ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನ ಟಿಫಾನಿಸ್ ಹೋಂ ಹೋಟೆಲ್‌ನಲ್ಲಿ(Hotel) ನಡೆದಿದೆ. ನಂಜಾಪುರ ಗ್ರಾಮದ 25 ವರ್ಷದ ನಿತಿನ್ ಕುಮಾರ್(25) ಮೃತ ದುರ್ದೈವಿ. ಮೈಸೂರಿನ ವಿದ್ಯಾವರ್ಧಕ ಕಾನೂನು ಕಾಲೇಜಿನಲ್ಲಿ ನಾಲ್ಕನೇ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ(Student) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿ ಕುಸಿದು ಬಿದ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಚಿತ್ರದುರ್ಗ: ಕಾರು ಡಿಕ್ಕಿ, ಸ್ಥಳದಲ್ಲೇ ಇಬ್ಬರ ದುರ್ಮರಣ

ಮರಕ್ಕೆ ಕಾರು ಡಿಕ್ಕಿ ಹೊಡೆದು, ಸ್ಥಳದಲ್ಲೇ ಇಬ್ಬರು ದುರ್ಮರಣ ಹೊಂದಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗೀತಾ(32), ಶಾರದಾ(60), ಧೃತಿ(5) ಸಾವನ್ನಪ್ಪಿದ್ದಾರೆ. ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದರೆ, ಬಾಲಕಿ ಧೃತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಆನೇಕಲ್: ಮನೆ ಮುಂದೆ ಮಹಿಳೆಯನ್ನು ನಗ್ನಗೊಳಿಸಿ ಥಳಿಸಿದ ಆರೋಪ; ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು

ಮನೆ ಮುಂದೆ ಮಹಿಳೆಯನ್ನು  ನಗ್ನಗೊಳಿಸಿ ಥಳಿಸಿದ ಆರೋಪ ಕೇಳಿಬಂದಿದ್ದು, ಬೆಂಗಳೂರು ಪೊಲೀಸ್ ಆಯುಕ್ತರಿಗೆ ಮಹಿಳೆ ದೂರು ನೀಡಿದ್ದಾರೆ. ಬೆಳ್ಳಂದೂರು ನಿವಾಸಿ ನಾಗರತ್ನ(46) ಎಂಬುವವರು ದೂರು ನೀಡಿದ್ದಾರೆ. ರಾಮು, ಮುನಿವೆಂಕಟಪ್ಪ ಇತರ 10 ಜನರ ವಿರುದ್ಧ ದೂರು ದಾಖಲಾಗಿದೆ. ಬೆಳ್ಳಂದೂರು ಪೊಲೀಸರ ವಿರುದ್ಧವೂ ನಿಂದನೆ ಆರೋಪ ಕೇಳಿಬಂದಿದೆ. ತಾಯಿ ಮನೆ ಬಳಿ ಕಸ ಕ್ಲೀನ್ ಮಾಡುವ ವೇಳೆ ತಕರಾರು ನಡೆದಿದೆ. ಮಾತಿಗೆ ಮಾತು ಬೆಳೆದು ಮೇಲೆ ಹಲ್ಲೆ ಮಾಡಿದ್ದಾರೆ ಎಂದು ನಾಗರತ್ನ ಆರೋಪಿಸಿದ್ದಾರೆ.

ತಾಳಿ ಕಿತ್ತುಕೊಂಡು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ಪ್ರಶ್ನಿಸಿದ ಮಗನಿಗೆ ಪೊಲೀಸರು ಥಳಿಸಿದ್ದಾರೆ ಅಂತ ಮಹಿಳೆ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ಜೊತೆಗೆ ಬೆಳ್ಳಂದೂರು ಪೊಲೀಸರು ದೂರು ಸ್ವಿಕರಿಸಲಿಲ್ಲ ಅಂತ ದೂರಿನಲ್ಲಿ ಆರೋಪಿಸಿದ್ದಾರೆ. ಘಟನೆಯ ಬಗ್ಗೆ ಸ್ಪಷ್ಟನೆ ಬೆಳ್ಳಂದೂರು ಠಾಣೆ ಪೊಲೀಸರು, ಮಹಿಳೆ ವರ್ತನೆ, ಮಾನಸಿಕ ಸ್ಥಿತಿ ಸರಿ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ:

ಹೃದಯಾಘಾತದಿಂದ ಪದ್ಮಶ್ರೀ ಪುರಸ್ಕೃತ ಆಧುನಿಕ ಸೂಫಿಸಂತ ಇಬ್ರಾಹಿಂ ಸುತಾರ್ ನಿಧನ; ಸರ್ಕಾರಿ ಗೌರವಗಳೊಂದಿಗೆ ಇಂದು ಸಂಜೆ 5 ಗಂಟೆಗೆ ಅಂತ್ಯಕ್ರಿಯೆ

ಸರ್ಕಾರದ ಆದೇಶಕ್ಕಿಲ್ಲ ಮರ್ಯಾದೆ; ಹಿಜಾಬ್‌- ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು

Published On - 11:25 am, Mon, 7 February 22

ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ