AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ.ನರಸೀಪುರ: ಮೇಯುತ್ತಿದ್ದ ಮೇಕೆ ಮೇಲೆ ಚಿರತೆ ದಾಳಿ

ಮೈಸೂರಿನ ಟಿ.ನರಸೀಪುರದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಯುವ ಎರಡನೇ ಬಾರಿ ಸಾಕು ಪ್ರಾಣಿಗಳ ಮೇಲೆ ಚಿರತೆ ದಾಳಿ ನಡೆದಿದೆ.

ಟಿ.ನರಸೀಪುರ: ಮೇಯುತ್ತಿದ್ದ ಮೇಕೆ ಮೇಲೆ ಚಿರತೆ ದಾಳಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 15, 2022 | 7:41 AM

Share

ಮೈಸೂರು: ಟಿ.ನರಸೀಪುರ (T. Narasipur) ತಾಲೂಕಿನಲ್ಲಿ ಇಟ್ಟ ಬೋನುಗಳಿಗೂ ಬೀಳದೆ, ಯಾರ ಕಣ್ಣಿಗೂ ಬೀಳದೆ ಅರಣ್ಯ ಇಲಾಖೆ ಸಿಬ್ಬಂದಿಗೆ ಸವಾಲಾಗಿ ನಿಂತಿರುವ ಚಿರತೆಯು  ಇದೀಗ ಮತ್ತೊಮ್ಮೆ ಸಾಕು ಪ್ರಾಣಿಗಳ ಮೇಲೆ ದಾಳಿ (Leopard Attack) ನಡೆಸಿದೆ. ಚಿರತೆ ಸೆರೆಗೆ ಕಾರ್ಯಾಚರಣೆ ಆರಂಭವಾದ ನಂತರ ಸಾಕು ಪ್ರಾಣಿಗಳ ಮೇಲಿನ ಎರಡನೇ ದಾಳಿ ಇದಾಗಿದೆ. ಟಿ.ನರಸೀಪುರ ತಾಲೂಕಿನ ಯಾಚೇನಹಳ್ಳಿ ಗ್ರಾಮದಲ್ಲಿ ಮೇಯುತ್ತಿದ್ದ ಮೇಕೆಯ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿದೆ. ರೈತ ಮಹಿಳೆ ಸೌಭಾಗ್ಯ ಅವರು ಮೇಕೆಗಳನ್ನ ಮೇಯಿಸುವಾಗ ಈ ಘಟನೆ ನಡೆದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರಿದಿದೆ.

ಕುರಿಗಳು ಮೇಯುತ್ತಿದ್ದಾಗ ದಾಳಿ ನಡೆಸಿದ ಚಿರತೆ ಕುರಿ ಮರಿಯನ್ನು ಎಳೆದುಕೊಂಡು ಕಬ್ಬಿನ ಗದ್ದೆ ಒಳಗೆ ಹೋಗಿದೆ. ಈ ಹಿಂದೆ ಅಂದರೆ ಡಿಸೆಂಬರ್ 12ರಂದು ಟಿ.ನರಸೀಪುರ ತಾಲೂಕಿನ ನುಗ್ಗಹಳ್ಳಿ ಕೊಪ್ಪಲು ಗ್ರಾಮದಲ್ಲಿ ಕುರಿ, ಮೇಕೆ ಮೇಲೆ ಚಿರತೆ ದಾಳಿ ನಡೆಸಿತ್ತು. ಇದಕ್ಕೂ ಮುನ್ನ ತಿಂಗಳ ಅವಧಿಯಲ್ಲಿ ಯುವಕ ಮತ್ತು ಯುವತಿಯನ್ನು ಚಿರತೆ ಬಲಿ ಪಡೆದಿತ್ತು.

ಇದನ್ನೂ ಓದಿ: ಮೈಸೂರು: ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ ಮರಿ ಸ್ಥಳಾಂತರಕ್ಕೆ ಗ್ರಾಮದ ಯುವಕರಿಂದ ತಕರಾರು

ಚಿರತೆ ಹಾವಳಿ ಇದ್ದ ಕಡೆಗಳಲ್ಲಿ ಸಿಬ್ಬಂದಿ ಬೋನ್ ಇರಿಸಿದ್ದಾರೆ. ಅದರಂತೆ ಹೆಚ್.ಡಿ.ಕೋಟೆ ತಾಲೂಕಿನ ಬದನಕುಪ್ಪೆ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ದಿನದ ಹಿಂದೆಯಷ್ಟೇ ಚಿರತೆ ಮರಿ ಬಿದ್ದಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಯುವಕರು ಚಿರತೆ ಸ್ಥಳಾಂತರಕ್ಕೆ ಅಡ್ಡಪಡಿಸಿದ್ದಾರೆ. ಚಿರತೆ ದಾಳಿಯಿಂದ ಸಾಕುಪ್ರಾಣಿಗಳು ಸಾವನ್ನಪ್ಪಿದ್ದು, ಪರಿಹಾರ ನೀಡುವಂತೆ ಒತ್ತಾಯಿಸಿದ್ದರು.

ಜಿಲ್ಲೆಯಲ್ಲಿ ಚಿರತೆ ದಾಳಿ ಪ್ರಕರಣಗಳು ಹೆಚ್ಚಾಗುತ್ತಿರುವ ನಡುವೆಯೇ ನಂಜನಗೂಡು ತಾಲೂಕಿನ ಬಳ್ಳೂರುಹುಂಡಿ ಗ್ರಾಮದಲ್ಲಿ ಹುಲಿ ಭೀತಿ ಎದುರಾಗಿದೆ. ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿ ಗಾಯಗೊಳಿಸಿತ್ತು. ಬಳ್ಳೂರುಹುಂಡಿ ಗ್ರಾಮದ ದಾಸಯ್ಯ ಎಂಬುವರು ಹಸು ಮೇಯಿಸುತ್ತಿದ್ದಾಗ ಹುಲಿ ದಾಳಿ ಮಾಡಿತ್ತು.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:41 am, Thu, 15 December 22

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ