AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ. ನರಸೀಪುರ: ಚಿರತೆಗೆ ಬಲಿಯಾದ ಯುವತಿಯ ಕುಟುಂಬಕ್ಕೆ 7.5 ಲಕ್ಷ ಪರಿಹಾರ, ಉದ್ಯೋಗದ ಭರವಸೆ

ಮನೆ ಮುಂದೆ ಕುಳಿತ್ತಿದ್ದಾಗ ಯುವತಿ ಮೇಲೆ ಚಿರತೆ ದಾಳಿ ಮಾಡಿದ್ದು, ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ 20 ವರ್ಷದ ಯುವತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಈಕೆಯ ಕುಟುಂಬಕ್ಕೆ 7 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದ್ದು, ಉದ್ಯೋಗದ ಭರವಸೆಯೂ ನೀಡಲಾಗಿದೆ.

ಟಿ. ನರಸೀಪುರ: ಚಿರತೆಗೆ ಬಲಿಯಾದ ಯುವತಿಯ ಕುಟುಂಬಕ್ಕೆ 7.5 ಲಕ್ಷ ಪರಿಹಾರ, ಉದ್ಯೋಗದ ಭರವಸೆ
ಟಿ. ನರಸೀಪುರ: ಚಿರತೆಗೆ ಬಲಿಯಾದ ಯುವತಿಯ ಕುಟುಂಬಕ್ಕೆ 7.5 ಲಕ್ಷ ಪರಿಹಾರ, ಉದ್ಯೋಗದ ಭರವಸೆ
TV9 Web
| Edited By: Rakesh Nayak Manchi|

Updated on:Dec 02, 2022 | 8:29 AM

Share

ಮೈಸೂರು: ಟಿ.ನರಸೀಪುರ ತಾಲೂಕಿನಲ್ಲಿ (T.Narasipura) ಚಿರತೆ ದಾಳಿ (Leopard Attack) ಗೊಳಗಾಗಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಮೃತಪಟ್ಟ ಪ್ರಕರಣ ಸಂಬಂಧ ಮೃತ ಯುವತಿ ಕುಟುಂಬಕ್ಕೆ 7.5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ (Forest Department) ಅಧಿಕಾರಿಗಳು ಸ್ಥಳದಲ್ಲೇ 5 ಲಕ್ಷ ಪರಿಹಾರದ ಚೆಕ್ ವಿತರಿಸಿದರು. ಇದೇ ವೇಳೆ ಕುಟುಂಬದ ಒಬ್ಬರಿಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಕೊಡಿಸುವ ಭರವಸೆ ನೀಡಿದ್ದಾರೆ. ತಾಲೂಕಿನಲ್ಲಿ ಚಿರತೆ ದಾಳಿಗೆ ಇಬ್ಬರು ಬಲಿಯಾದ ಹಿನ್ನೆಲೆ ಆಕ್ರೋಶಗೊಂಡಿರುವ ಗ್ರಾಮದ ಜನರು ಧರಣಿ ಕುಳಿತಿದ್ದರು. ಅದತರಂತೆ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು, ಆರ್​​ಎಫ್​​ಒಗೆ ಕಡ್ಡಾಯ ರಜೆ ನೀಡಿ ತನಿಖೆ ಬಳಿಕ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ನಂತರ ಗ್ರಾಮಸ್ಥರು ಧರಣಿಯನ್ನು ಕೈಬಿಟ್ಟರು.

ತಾಲೂಕಿನಲ್ಲಿ ಚಿರತೆ ಹಾವಳಿ ಇರುವ ಹಿನ್ನೆಲೆ 15 ತಂಡಗಳನ್ನು ರಚನೆ ಮಾಡಿ ಬೇರೆಬೇರೆ ಕಡೆಗಳಲ್ಲಿ ಕಾರ್ಯಾಚರಣೆಗೆ ಇಳಿಸುತ್ತೇವೆ. 7 ದಿನಗಳ ಒಳಗೆ ಕಂಡಲ್ಲಿ ಗುಂಡು ಹಾರಿಸಿ ಚಿರತೆಯನ್ನು ಸೆರೆ ಹಿಡಿಯುವ ಕಾರ್ಯ ನಾವು ಮಾಡುತ್ತೇವೆ. ಆರ್​ಎಫ್​ಒ ಅವರನ್ನು ಕಡ್ಡಾಯ ರಜೆ ಮೇಲೆ ಹೋಗಲು ಸೂಚಿಸಲಾಗಿದೆ. ಡಿ.2ರಿಂದ ಅವರು ರಜೆ ಮೇಲೆ ಹೋಗಲಿದ್ದಾರೆ ಮತ್ತು ಅವರ ಕಡೆಯಿಂದ ತಪ್ಪು ನಡೆದಿದೆಯೇ ಎಂಬುದನ್ನು ತಿನಿಖೆ ನಡೆಸಿ ವರದಿಯನ್ನು ಸರ್ಕಾರಕ್ಕೆ ಕಳುಹಿಸುತ್ತೇವೆ ಎಂದು ಮಹಿಳಾ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ: ಕೆಂಗೇರಿ, ಕುಂಬಳಗೋಡು ಸುತ್ತಮುತ್ತ ಅಲರ್ಟ್

ಏನಿದು ಪ್ರಕರಣ?

ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದ ಮನೆ ಮುಂದೆ ಕುಳಿತಿದ್ದಾಗ ಗುರುವಾರ ಸಂಜೆ ಚಿರತೆ ದಾಳಿ ಮಾಡಿತ್ತು. ತೀವ್ರವಾಗಿ ಗಾಯಗೊಂಡಿದ್ದ ಮೇಘನಾಳನ್ನ (20) ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಕೊನೆಯುಸಿರೆಳೆದಿದ್ದಳು.

ಟಿ.ನರಸೀಪುರ ತಾಲೂಕಿನಲ್ಲೇ ಚಿರತೆ ದಾಳಿಗೆ ಎರಡನೇ ಬಲಿಯಾಗಿದೆ. ಕಳೆದ ತಿಂಗಳಷ್ಟೇ ಟಿ.ನರಸಿಪುರ ತಾಲೂಕಿನಲ್ಲೇ ಚಿರತೆ ಓರ್ವ ಯುವಕನ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ಇದೀಗ ಮೇಘನಾಳನ್ನ ಬಲಿಪಡೆದುಕೊಂಡಿದೆ. ಒಂದು ತಿಂಗಳಲ್ಲೇ ಚಿರತೆ ದಾಳಿಗೆ 2ನೇ ಬಲಿಯಾಗಿರುವುದರಿಂದ ಇದೀಗ ಟಿ. ನರಸೀಪುರ ತಾಲೂಕಿನ ಜನರಲ್ಲಿ ಚಿರತೆ ಭಯ ಶುರುವಾಗಿದ್ದು, ಜನರು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:24 am, Fri, 2 December 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು