AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಲಿ, ಟಿಪ್ಪು ಸುಲ್ತಾನ್ ದಸರಾ ಮುನ್ನಡೆಸಿಕೊಂಡು ಹೋಗಿದ್ದರು: ತನ್ವೀರ್ ಸೇಠ್

ದಸರಾ ಉದ್ಘಾಟನಾ ಸಮಾರಂಭಕ್ಕೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಈ ಬಗ್ಗೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇತಿಹಾಸದಲ್ಲಿ ವಿವಿಧ ವ್ಯಕ್ತಿಗಳು ದಸರಾ ಉದ್ಘಾಟನೆ ಮಾಡಿದ್ದಾರೆ ಎಂಬುದನ್ನು ಉಲ್ಲೇಖಿಸಿದ ಅವರು, ಮಹಾರಾಜರ ಅನುಪಸ್ಥಿತಿಯಲ್ಲಿ ಹೈದರಾಲಿ, ಟಿಪ್ಪು ಸುಲ್ತಾನ್ ಕೂಡ ದಸರಾ ಮುನ್ನಡೆಸಿಕೊಂಡು ಹೋಗಿದ್ದರು ಎಂದಿದ್ದಾರೆ.

ಹೈದರಾಲಿ, ಟಿಪ್ಪು ಸುಲ್ತಾನ್ ದಸರಾ ಮುನ್ನಡೆಸಿಕೊಂಡು ಹೋಗಿದ್ದರು: ತನ್ವೀರ್ ಸೇಠ್
ತನ್ವೀರ್ ಸೇಠ್
ಗಣಪತಿ ಶರ್ಮಾ
|

Updated on: Aug 25, 2025 | 2:17 PM

Share

ಮೈಸೂರು, ಆಗಸ್ಟ್ 25: ವಿಶ್ವ ವಿಖ್ಯಾತ ಮೈಸೂರು ದಸರಾ (Mysuru Dasara) ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಕನ್ನಡಿಗ ಲೇಖಕಿ ಬಾನು ಮುಷ್ತಾಕ್ (Banu Mushtaq) ಅವರನ್ನು ಆಯ್ಕೆ ಮಾಡಿರುವುದನ್ನು ಬಿಜೆಪಿ ಸಂಸದ ಪ್ರತಾಪ್ ಸಿಂಹ ಪ್ರಶ್ನಸಿದ್ದಾರೆ. 2023ರ ಜನ ಸಾಹಿತ್ಯ ಸಮ್ಮೇಳನದಲ್ಲಿ ಮುಷ್ತಾಕ್ ಮಾತನಾಡಿದ್ದ ವಿಡಿಯೋವನ್ನು ಹಂಚಿಕೊಂಡ ಪ್ರತಾಪ್ ಸಿಂಹ, ‘ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪದ ಈಕೆ, ತಾಯಿ ಚಾಮುಂಡೇಶ್ವರಿಯನ್ನು ನಾಡದೇವತೆಯಾಗಿ ಒಪ್ಪಿಕೊಂಡು ಪುಷ್ಪಾರ್ಚನೆ ಮಾಡಿಯಾರೆ ಬೂಕರ್ ಬಾನು’ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ತಿರುಗೇಟು ನೀಡಿದ್ದು, ಮಹಾರಾಜರ ಅನುಪಸ್ಥಿತಿಯಲ್ಲಿ ಹೈದರಾಲಿ, ಟಿಪ್ಪು ಸುಲ್ತಾನ್ 18 ವರ್ಷಗಳ ಕಾಲ ದಸರಾವನ್ನು ಮುನ್ನಡೆಸಿಕೊಂಡು ಹೋಗಿದ್ದರು ಎಂದಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ತನ್ವೀರ್ ಸೇಠ್, ವಿಜಯನಗರ ಸಾಮ್ರಾಜ್ಯ ಇದ್ದಾಗ ದಸರಾ ಶುರು ಮಾಡಲಾಗಿತ್ತು. ತದನಂತರ ನಮ್ಮಲ್ಲಿ ಮಹಾರಾಜರ ಪಟ್ಟಾಭಿಷೇಕ ಆಗದೇ ಇದ್ದಂತಹ ಸಂದರ್ಭದಲ್ಲಿ ಸುಮಾರು 18ಕ್ಕೂ ವರ್ಷಗಳ ಕಾಲ ಹೈದರಾಲಿ ಮತ್ತು ಟಿಪ್ಪು ಸುಲ್ತಾನ್ ದಸರಾ ಮುಂದುವರಿಸಿಕೊಂಡು ಹೋದರು ಎಂಬ ಒಂದು ಇತಿಹಾಸ ಇದೆ. ತದನಂತರ 1974ರ ನಂತರ ಸರ್ಕಾರ ಜವಾಬ್ದಾರಿ ವಹಿಸಿಕೊಂಡಂತಹ ಸಂದರ್ಭದಿಂದ ಅನೇಕ ಮಹಾನ್ ವ್ಯಕ್ತಿಗಳು, ಸಾಹಿತಿಗಳು, ಸಮಾಜದ ಮುಖ್ಯವಾದಂತಹ ವ್ಯಕ್ತಿಗಳು ಉದ್ಘಾಟನೆ ಮಾಡಿದ್ದಾರೆ ಎಂದು ಹೇಳಿದರು.

ತನ್ವೀರ್ ಸೇಠ್ ಹೇಳಿಕೆಯ ವಿಡಿಯೋ

ನಿಸಾರ್ ಅಹ್ಮದ್ ಅವರಿಂದ ಹಿಡಿದು ಸಾಮಾನ್ಯ ಒಬ್ಬ ರೈತನು ಕೂಡ ದಸರಾ ಉದ್ಘಾಟನೆ ಮಾಡಿದಂತಹ ಸಂದರ್ಭಗಳಿವೆ. ನಾಸ್ತಿಕರಾಗಿರುವ ಬರಗೂರು ರಾಮಚಂದ್ರಪ್ಪ ಅವರು, ‘ನಾನು ಪೂಜೆ ಮಾಡಲ್ಲ’ ಎಂದು ಸ್ಪಷ್ಟವಾಗಿ ಹೇಳಿದ್ದರು. ಅದರು ಸರಿಯೋ ತಪ್ಪೋ ಎಂಬುದು ಬೇರೆ, ಆ ಸಂದರ್ಭದಲ್ಲಿ ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದೆ ಎಂದು ಸೇಠ್ ನೆನಪಿಸಿಕೊಂಡರು.

ಇದನ್ನೂ ಓದಿ: ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪದವರು ಚಾಮುಂಡೇಶ್ವರಿಯನ್ನು ಒಪ್ಪಿ ಪುಷ್ಪಾರ್ಚನೆ ಮಾಡಿಯಾರೇ: ಪ್ರತಾಪ್ ಸಿಂಹ ಪ್ರಶ್ನೆ

ದಸರಾ ಉದ್ಘಾಟನೆಗೆ ಸರ್ಕಾರ ಆಹ್ವಾನ ಮಾಡುವುದು ನಮ್ಮ ಕಾರ್ಯಕ್ರಮಗಳ ಚಾಲನೆ ಕೊಡುವುದಕ್ಕೆ. ಪೂಜೆ ಪುರಸ್ಕಾರಗಳು ಮತ್ತು ಇದರ ಸಂಪೂರ್ಣವಾದಂತ ಹೊಣೆಗಾರಿಕೆ ಸರ್ಕಾರ ನಡೆಸಿಕೊಂಡು ಬಂದಿದೆ. ಇದರಲ್ಲಿ ಯಾವುದೇ ವ್ಯತ್ಯಾಸ ಇಲ್ಲ. ಇವತ್ತು ವ್ಯಕ್ತಿ ಗಳಿಸಿರುವಂತಹ ಆ ಸ್ಥಾನಮಾನಗಳನ್ನು ಗೌರವಿಸಿ ನಾವು ಉದ್ಘಾಟಕರಾಗಿ ಕರೆಯುತ್ತೇವೆ. ಇದರಲ್ಲಿ ಜಾತಿ ಮತ್ತು ಧರ್ಮ ಇಲ್ಲ. ಇಲ್ಲಿ ಬೇಕಾಗಿರುವಂತಹದ್ದು ಸಾಹಿತ್ಯ ಲೋಕದಲ್ಲಿ ಅವರು ಏನು ಸಾಧನೆ ಮಾಡಿದ್ದಾರೆ ಎಂಬುದಷ್ಟೇ ಎಂದು ತನ್ವೀರ್ ಸೇಠ್ ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?