AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಕೇಂದ್ರ ಕಾರಾಗೃಹದ ಕಾಂಪೌಂಡ್​ ಹಿಂಭಾಗ ಗಾಂಜಾ ಮಾರಾಟ, ಅಬಕಾರಿ ಪೊಲೀಸರ ದಾಳಿ

ಕೇಂದ್ರ ಕಾರಾಗೃಹ ದೊಡ್ಡ ಕಾಂಪೌಂಡ್​ ಹಿಂಭಾಗ ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿದ್ದಾಗ ಅಬಕಾರಿ ಪೊಲೀಸರು ದಾಳಿ ನಡೆಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಇನ್ನೊಂದೆಡೆ, ಲಂಚ ಪಡೆಯುತ್ತಿದ್ದ ಹೆಚ್​ಡಿ ಕೋಟಿ ಪೊಲೀಸ್ ಠಾಣೆಯ ಮಹಿಳಾ ಎಎಸ್​ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮೈಸೂರು ಕೇಂದ್ರ ಕಾರಾಗೃಹದ ಕಾಂಪೌಂಡ್​ ಹಿಂಭಾಗ ಗಾಂಜಾ ಮಾರಾಟ, ಅಬಕಾರಿ ಪೊಲೀಸರ ದಾಳಿ
ಮೈಸೂರು ಕೇಂದ್ರ ಕಾರಾಗೃಹದ ಕಾಂಪೌಂಡ್​ ಹಿಂಭಾಗ ಗಾಂಜಾ ಮಾರಾಟಕ್ಕೆ ಯತ್ನ
Follow us
ರಾಮ್​, ಮೈಸೂರು
| Updated By: Rakesh Nayak Manchi

Updated on: Nov 23, 2023 | 8:13 AM

ಮೈಸೂರು, ನ.23: ಜಿಲ್ಲೆಯ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇರುವ ಕೇಂದ್ರ ಕಾರಾಗೃಹ ದೊಡ್ಡ ಕಾಂಪೌಂಡ್​ ಹಿಂಭಾಗ ಗಾಂಜಾ (Ganja) ಮಾರಾಟ ವೇಳೆ ಅಬಕಾರಿ (Excise) ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಅಬಕಾರಿ ಎಸ್​ಪಿ ಪಿ.ಮಹೇಶ್ ಕುಮಾರ್ ಮಾರ್ಗದರ್ಶನಲ್ಲಿ‌ ಉಪ ನಿರೀಕ್ಷಕ ರವಿಕುಮಾರ್ ನೇತೃತ್ವದ ತಂಡದಿಂದ ಈ ದಾಳಿ ನಡೆದಿದೆ.

ದಾಳಿ ವೇಳೆ ಪೊಲೀಸರನ್ನು ಕಂಡ ಕೂಡಲೇ ಆರೋಪಿಗಳು ಬೈಕ್​ ಬಿಟ್ಟು ಪರಾರಿಯಾಗಿದ್ದು, ಬೈಕ್​ ಅನ್ನು ಜಪ್ತಿ ಮಾಡಲಾಗಿದ್ದು, ಬೈಕ್ ಮಾಲೀಕರ ಮಾಹಿತಿ ಮೇರೆಗೆ ಆರೋಪಿಗಳ ಪತ್ತೆಗೆ ಶೋಧಕಾರ್ಯ ನಡೆಸುತ್ತಿದ್ದಾರೆ.

ಲಂಚ ಸ್ವೀಕರಿಸುತ್ತಿದ್ದ ಮಹಿಳಾ ಎಎಸ್​ಐ ಲೋಕಾಯುಕ್ತ ಬಲೆಗೆ

ಮೈಸೂರು: ಲಂಚ ಸ್ವೀಕರಿಸುತ್ತಿದ್ದಾಗ ಮಹಿಳಾ ಎಎಸ್​ಐ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಕೀಲಾವತಿ ಲೋಕಾಯುಕ್ತ ಅಧಿಕಾರಿಗಳಿಂದ ಬಂಧನಕ್ಕೊಳಗಾದ ಹೆಚ್​.ಡಿ.ಕೋಟೆ ಪೊಲೀಸ್ ಠಾಣೆ ಎಎಸ್​ಐ.

ಇದನ್ನೂ ಓದು: ಕೋಲಾರದಲ್ಲಿ ಅಕ್ರಮ ಗಾಂಜಾ, ಡ್ರಗ್ಸ್​ ಕೃತ್ಯ ಹೆಚ್ಚಳ; ನಶೆಯಲ್ಲಿ ತೇಲಾಡುತ್ತಿದ್ದ ಯುವಕರಿಗೆ ಚಳಿ ಬಿಡಿಸಿದ ಅಬಕಾರಿ, ಪೊಲೀಸ್​ ಇಲಾಖೆ

ಕೆಂಡಗಣ್ಣ ನಾಯ್ಕ ಎಂಬುವರು ನಾಗೇಂದ್ರಗೆ 1.25 ಲಕ್ಷ ಸಾಲ ನೀಡಿದ್ದರು. ಈ ಮೊತ್ತದಲ್ಲಿ ನಾಗೇಂದ್ರ ಅವರು 25 ಸಾವಿರ ರೂಪಾಯಿ ವಾಪಸ್​​ ನೀಡಿದ್ದು, 1 ಲಕ್ಷ ರೂ. ಬಾಕಿ ಇರಿಸಿಕೊಂಡು ಕೆಂಡಗಣ್ಣ ಅವರಿಗೆ ಸತಾಯಿಸುತ್ತಿದ್ದನು. ಈ ಬಗ್ಗೆ ಕೆಂಡಗಣ್ಣ ಅವರು ಹೆಚ್​ಡಿ ಕೋಟಿ ಠಾಣೆಗೆ ದೂರು ನೀಡಿದ್ದರು.

ಆದರೆ, ಸಾಲದ ಹಣ ವಾಪಸ್​​ ಕೊಡಿಸುವುದಕ್ಕೆ ಎಎಸ್​ಐ ಶಕೀಲಾವತಿ ಅವರು ಮೂರು ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಕೆಂಡಗಣ್ಣ ಅವರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಅದರಂತೆ ನಡೆದ ಟ್ರಾಪ್​ನಲ್ಲಿ ಕೆಂಡಗಣ್ಣ ಅವರಿಂದ ಲಂಚದ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಮತ್ತೆ ಮಳೆ: ವೀಕೆಂಡ್​ನಲ್ಲಿ ಸಿಲಿಕಾನ್​ ಸಿಟಿ ಕೂಲ್​ ಕೂಲ್
ಬೆಂಗಳೂರಿನಲ್ಲಿ ಮತ್ತೆ ಮಳೆ: ವೀಕೆಂಡ್​ನಲ್ಲಿ ಸಿಲಿಕಾನ್​ ಸಿಟಿ ಕೂಲ್​ ಕೂಲ್
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ