AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಕೇಂದ್ರ ಕಾರಾಗೃಹದ ಕಾಂಪೌಂಡ್​ ಹಿಂಭಾಗ ಗಾಂಜಾ ಮಾರಾಟ, ಅಬಕಾರಿ ಪೊಲೀಸರ ದಾಳಿ

ಕೇಂದ್ರ ಕಾರಾಗೃಹ ದೊಡ್ಡ ಕಾಂಪೌಂಡ್​ ಹಿಂಭಾಗ ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿದ್ದಾಗ ಅಬಕಾರಿ ಪೊಲೀಸರು ದಾಳಿ ನಡೆಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಇನ್ನೊಂದೆಡೆ, ಲಂಚ ಪಡೆಯುತ್ತಿದ್ದ ಹೆಚ್​ಡಿ ಕೋಟಿ ಪೊಲೀಸ್ ಠಾಣೆಯ ಮಹಿಳಾ ಎಎಸ್​ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮೈಸೂರು ಕೇಂದ್ರ ಕಾರಾಗೃಹದ ಕಾಂಪೌಂಡ್​ ಹಿಂಭಾಗ ಗಾಂಜಾ ಮಾರಾಟ, ಅಬಕಾರಿ ಪೊಲೀಸರ ದಾಳಿ
ಮೈಸೂರು ಕೇಂದ್ರ ಕಾರಾಗೃಹದ ಕಾಂಪೌಂಡ್​ ಹಿಂಭಾಗ ಗಾಂಜಾ ಮಾರಾಟಕ್ಕೆ ಯತ್ನ
ರಾಮ್​, ಮೈಸೂರು
| Edited By: |

Updated on: Nov 23, 2023 | 8:13 AM

Share

ಮೈಸೂರು, ನ.23: ಜಿಲ್ಲೆಯ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇರುವ ಕೇಂದ್ರ ಕಾರಾಗೃಹ ದೊಡ್ಡ ಕಾಂಪೌಂಡ್​ ಹಿಂಭಾಗ ಗಾಂಜಾ (Ganja) ಮಾರಾಟ ವೇಳೆ ಅಬಕಾರಿ (Excise) ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಅಬಕಾರಿ ಎಸ್​ಪಿ ಪಿ.ಮಹೇಶ್ ಕುಮಾರ್ ಮಾರ್ಗದರ್ಶನಲ್ಲಿ‌ ಉಪ ನಿರೀಕ್ಷಕ ರವಿಕುಮಾರ್ ನೇತೃತ್ವದ ತಂಡದಿಂದ ಈ ದಾಳಿ ನಡೆದಿದೆ.

ದಾಳಿ ವೇಳೆ ಪೊಲೀಸರನ್ನು ಕಂಡ ಕೂಡಲೇ ಆರೋಪಿಗಳು ಬೈಕ್​ ಬಿಟ್ಟು ಪರಾರಿಯಾಗಿದ್ದು, ಬೈಕ್​ ಅನ್ನು ಜಪ್ತಿ ಮಾಡಲಾಗಿದ್ದು, ಬೈಕ್ ಮಾಲೀಕರ ಮಾಹಿತಿ ಮೇರೆಗೆ ಆರೋಪಿಗಳ ಪತ್ತೆಗೆ ಶೋಧಕಾರ್ಯ ನಡೆಸುತ್ತಿದ್ದಾರೆ.

ಲಂಚ ಸ್ವೀಕರಿಸುತ್ತಿದ್ದ ಮಹಿಳಾ ಎಎಸ್​ಐ ಲೋಕಾಯುಕ್ತ ಬಲೆಗೆ

ಮೈಸೂರು: ಲಂಚ ಸ್ವೀಕರಿಸುತ್ತಿದ್ದಾಗ ಮಹಿಳಾ ಎಎಸ್​ಐ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಕೀಲಾವತಿ ಲೋಕಾಯುಕ್ತ ಅಧಿಕಾರಿಗಳಿಂದ ಬಂಧನಕ್ಕೊಳಗಾದ ಹೆಚ್​.ಡಿ.ಕೋಟೆ ಪೊಲೀಸ್ ಠಾಣೆ ಎಎಸ್​ಐ.

ಇದನ್ನೂ ಓದು: ಕೋಲಾರದಲ್ಲಿ ಅಕ್ರಮ ಗಾಂಜಾ, ಡ್ರಗ್ಸ್​ ಕೃತ್ಯ ಹೆಚ್ಚಳ; ನಶೆಯಲ್ಲಿ ತೇಲಾಡುತ್ತಿದ್ದ ಯುವಕರಿಗೆ ಚಳಿ ಬಿಡಿಸಿದ ಅಬಕಾರಿ, ಪೊಲೀಸ್​ ಇಲಾಖೆ

ಕೆಂಡಗಣ್ಣ ನಾಯ್ಕ ಎಂಬುವರು ನಾಗೇಂದ್ರಗೆ 1.25 ಲಕ್ಷ ಸಾಲ ನೀಡಿದ್ದರು. ಈ ಮೊತ್ತದಲ್ಲಿ ನಾಗೇಂದ್ರ ಅವರು 25 ಸಾವಿರ ರೂಪಾಯಿ ವಾಪಸ್​​ ನೀಡಿದ್ದು, 1 ಲಕ್ಷ ರೂ. ಬಾಕಿ ಇರಿಸಿಕೊಂಡು ಕೆಂಡಗಣ್ಣ ಅವರಿಗೆ ಸತಾಯಿಸುತ್ತಿದ್ದನು. ಈ ಬಗ್ಗೆ ಕೆಂಡಗಣ್ಣ ಅವರು ಹೆಚ್​ಡಿ ಕೋಟಿ ಠಾಣೆಗೆ ದೂರು ನೀಡಿದ್ದರು.

ಆದರೆ, ಸಾಲದ ಹಣ ವಾಪಸ್​​ ಕೊಡಿಸುವುದಕ್ಕೆ ಎಎಸ್​ಐ ಶಕೀಲಾವತಿ ಅವರು ಮೂರು ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಕೆಂಡಗಣ್ಣ ಅವರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಅದರಂತೆ ನಡೆದ ಟ್ರಾಪ್​ನಲ್ಲಿ ಕೆಂಡಗಣ್ಣ ಅವರಿಂದ ಲಂಚದ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ