AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಕೇಂದ್ರ ಕಾರಾಗೃಹದ ಕಾಂಪೌಂಡ್​ ಹಿಂಭಾಗ ಗಾಂಜಾ ಮಾರಾಟ, ಅಬಕಾರಿ ಪೊಲೀಸರ ದಾಳಿ

ಕೇಂದ್ರ ಕಾರಾಗೃಹ ದೊಡ್ಡ ಕಾಂಪೌಂಡ್​ ಹಿಂಭಾಗ ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿದ್ದಾಗ ಅಬಕಾರಿ ಪೊಲೀಸರು ದಾಳಿ ನಡೆಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಇನ್ನೊಂದೆಡೆ, ಲಂಚ ಪಡೆಯುತ್ತಿದ್ದ ಹೆಚ್​ಡಿ ಕೋಟಿ ಪೊಲೀಸ್ ಠಾಣೆಯ ಮಹಿಳಾ ಎಎಸ್​ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮೈಸೂರು ಕೇಂದ್ರ ಕಾರಾಗೃಹದ ಕಾಂಪೌಂಡ್​ ಹಿಂಭಾಗ ಗಾಂಜಾ ಮಾರಾಟ, ಅಬಕಾರಿ ಪೊಲೀಸರ ದಾಳಿ
ಮೈಸೂರು ಕೇಂದ್ರ ಕಾರಾಗೃಹದ ಕಾಂಪೌಂಡ್​ ಹಿಂಭಾಗ ಗಾಂಜಾ ಮಾರಾಟಕ್ಕೆ ಯತ್ನ
ರಾಮ್​, ಮೈಸೂರು
| Edited By: Rakesh Nayak Manchi|

Updated on: Nov 23, 2023 | 8:13 AM

Share

ಮೈಸೂರು, ನ.23: ಜಿಲ್ಲೆಯ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇರುವ ಕೇಂದ್ರ ಕಾರಾಗೃಹ ದೊಡ್ಡ ಕಾಂಪೌಂಡ್​ ಹಿಂಭಾಗ ಗಾಂಜಾ (Ganja) ಮಾರಾಟ ವೇಳೆ ಅಬಕಾರಿ (Excise) ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಅಬಕಾರಿ ಎಸ್​ಪಿ ಪಿ.ಮಹೇಶ್ ಕುಮಾರ್ ಮಾರ್ಗದರ್ಶನಲ್ಲಿ‌ ಉಪ ನಿರೀಕ್ಷಕ ರವಿಕುಮಾರ್ ನೇತೃತ್ವದ ತಂಡದಿಂದ ಈ ದಾಳಿ ನಡೆದಿದೆ.

ದಾಳಿ ವೇಳೆ ಪೊಲೀಸರನ್ನು ಕಂಡ ಕೂಡಲೇ ಆರೋಪಿಗಳು ಬೈಕ್​ ಬಿಟ್ಟು ಪರಾರಿಯಾಗಿದ್ದು, ಬೈಕ್​ ಅನ್ನು ಜಪ್ತಿ ಮಾಡಲಾಗಿದ್ದು, ಬೈಕ್ ಮಾಲೀಕರ ಮಾಹಿತಿ ಮೇರೆಗೆ ಆರೋಪಿಗಳ ಪತ್ತೆಗೆ ಶೋಧಕಾರ್ಯ ನಡೆಸುತ್ತಿದ್ದಾರೆ.

ಲಂಚ ಸ್ವೀಕರಿಸುತ್ತಿದ್ದ ಮಹಿಳಾ ಎಎಸ್​ಐ ಲೋಕಾಯುಕ್ತ ಬಲೆಗೆ

ಮೈಸೂರು: ಲಂಚ ಸ್ವೀಕರಿಸುತ್ತಿದ್ದಾಗ ಮಹಿಳಾ ಎಎಸ್​ಐ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಕೀಲಾವತಿ ಲೋಕಾಯುಕ್ತ ಅಧಿಕಾರಿಗಳಿಂದ ಬಂಧನಕ್ಕೊಳಗಾದ ಹೆಚ್​.ಡಿ.ಕೋಟೆ ಪೊಲೀಸ್ ಠಾಣೆ ಎಎಸ್​ಐ.

ಇದನ್ನೂ ಓದು: ಕೋಲಾರದಲ್ಲಿ ಅಕ್ರಮ ಗಾಂಜಾ, ಡ್ರಗ್ಸ್​ ಕೃತ್ಯ ಹೆಚ್ಚಳ; ನಶೆಯಲ್ಲಿ ತೇಲಾಡುತ್ತಿದ್ದ ಯುವಕರಿಗೆ ಚಳಿ ಬಿಡಿಸಿದ ಅಬಕಾರಿ, ಪೊಲೀಸ್​ ಇಲಾಖೆ

ಕೆಂಡಗಣ್ಣ ನಾಯ್ಕ ಎಂಬುವರು ನಾಗೇಂದ್ರಗೆ 1.25 ಲಕ್ಷ ಸಾಲ ನೀಡಿದ್ದರು. ಈ ಮೊತ್ತದಲ್ಲಿ ನಾಗೇಂದ್ರ ಅವರು 25 ಸಾವಿರ ರೂಪಾಯಿ ವಾಪಸ್​​ ನೀಡಿದ್ದು, 1 ಲಕ್ಷ ರೂ. ಬಾಕಿ ಇರಿಸಿಕೊಂಡು ಕೆಂಡಗಣ್ಣ ಅವರಿಗೆ ಸತಾಯಿಸುತ್ತಿದ್ದನು. ಈ ಬಗ್ಗೆ ಕೆಂಡಗಣ್ಣ ಅವರು ಹೆಚ್​ಡಿ ಕೋಟಿ ಠಾಣೆಗೆ ದೂರು ನೀಡಿದ್ದರು.

ಆದರೆ, ಸಾಲದ ಹಣ ವಾಪಸ್​​ ಕೊಡಿಸುವುದಕ್ಕೆ ಎಎಸ್​ಐ ಶಕೀಲಾವತಿ ಅವರು ಮೂರು ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಕೆಂಡಗಣ್ಣ ಅವರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಅದರಂತೆ ನಡೆದ ಟ್ರಾಪ್​ನಲ್ಲಿ ಕೆಂಡಗಣ್ಣ ಅವರಿಂದ ಲಂಚದ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!