AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸೋದಿಲ್ಲ; ಸಿದ್ದರಾಮಯ್ಯ ಸ್ಪಷ್ಟನೆ

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ. ಗ್ಯಾರಂಟಿ ಯೋಜನೆಗಳು ಪುನರ್ ಪರಿಶೀಲನೆಯೂ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ(Siddaramaiah) ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಮತಕ್ಕಾಗಿ ನಾವು ಗ್ಯಾರಂಟಿ ಯೋಜನೆ ಜಾರಿಗೆ ತಂದಿಲ್ಲ ಎಂದರು.

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸೋದಿಲ್ಲ; ಸಿದ್ದರಾಮಯ್ಯ ಸ್ಪಷ್ಟನೆ
ಸಿದ್ದರಾಮಯ್ಯ
ರಾಮ್​, ಮೈಸೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jun 14, 2024 | 7:27 PM

Share

ಮೈಸೂರು , ಜೂ.14: ಗ್ಯಾರಂಟಿ ಯೋಜನೆ(Guarantee scheme)ಗಳ ಬಗ್ಗೆ ಹಬ್ಬಿರುವ ಊಹಾಪೋಹದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ(Siddaramaiah) ಸ್ಪಷ್ಟನೆ ನೀಡಿದ್ದಾರೆ. ‘ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ. ಗ್ಯಾರಂಟಿ ಯೋಜನೆಗಳು ಪುನರ್ ಪರಿಶೀಲನೆಯೂ ಆಗಲ್ಲ ಎಂದಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಮತಕ್ಕಾಗಿ ನಾವು ಗ್ಯಾರಂಟಿ ಯೋಜನೆ ಜಾರಿಗೆ ತಂದಿಲ್ಲ. ಬಡವರಿಗಾಗಿ ನಾವು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ ಎಂದರು.

ಲೋಕಸಭಾ ಸ್ಥಾನಗಳಲ್ಲಿ ಹಿನ್ನಡೆ; ಮತಗಳಿಕೆ ವಿಚಾರದಲ್ಲಿ ಹೆಚ್ಚಳ

ನಮಗೆ ಲೋಕಸಭಾ ಸ್ಥಾನಗಳಲ್ಲಿ ಹಿನ್ನಡೆಯಾಗಿರಬಹುದು‌. ಆದರೆ. ಮತಗಳಿಕೆ ವಿಚಾರದಲ್ಲಿ ಶೇಕಡಾ13ರಷ್ಟು ಹೆಚ್ಚಾಗಿದೆ. ಮೈಸೂರು ಸೋತಿದ್ದು ಸತ್ಯ, ಚಾಮರಾಜನಗರ ಗೆದ್ದಿದ್ದೇವೆ‌. ಪಕ್ಷದ ಹೈಕಮಾಂಡ್​ಗೆ ಸೋಲಿನ ಬಗ್ಗೆ ಕಾರಣ ಹೇಳುತ್ತೇನೆ. ರಾಜ್ಯದಲ್ಲಿ‌ 1 ರಿಂದ 9 ಲೋಕಸಭಾ ಸ್ಥಾನವನ್ನು ಗೆದ್ದಿದ್ದೇವೆ ಎಂದು ಹೇಳಿದರು. ಇದೇ ವೇಳೆ 7 ನೇ ವೇತನ ಆಯೋಗದ ಪ್ರಶ್ನೆ ಕೇಳುತ್ತಿದ್ದಂತೆ ಮಾತನಾಡದೆ ಸಿಎಂ ತೆರಳಿದರು.

ಇದನ್ನೂ ಓದಿ:ಲೋಕಸಭಾ ಚುನಾವಣೆ ಸೋತ ಎಂ ಲಕ್ಷ್ಮಣ್ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕೆಂದರು!

ಇನ್ನು ಈ ಕುರಿತು ಜೂ.8 ರಂದು ಮಾತನಾಡಿದ್ದ ಗೃಹ ಸಚಿವ ಜಿ ಪರಮೇಶ್ವರ್, ‘ಕಾಂಗ್ರೆಸ್ ಪಕ್ಷದ ಕೆಲ ನಾಯಕರೇ ಹೇಳುತ್ತಿರುವ ಹಾಗೆ, ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಗ್ಯಾರಂಟಿ ಯೋಜನೆಗಳು  ನಿಂತು ಹೋಗಲಿವೆಯೇ? ಯಾವ ಕಾರಣಕ್ಕೂ ನಿಲ್ಲಲ್ಲ ಎಂದು ಸ್ಪಷ್ಟನೆ ನೀಡಿದ್ದರು. ನಾವು ರಾಜಕೀಯ ದೃಷ್ಟಿಕೋನದಿಂದ ಜಾರಿಗೊಳಿಸಿಲ್ಲ, ರಾಜ್ಯದ ಲಕ್ಷಾಂತರ ಬಡವರು, ಕೂಲಿ ಕಾರ್ಮಿಕರು, ಕೃಷಿ ಕೂಲಿ ಕಾರ್ಮಿಕರು, ಗ್ರಾಮೀಣ ಭಾಗದ ಜನರನ್ನು ಬಡತನ ರೇಖೆಯಿಂದ ಮೇಲೆತ್ತಲು ಯೋಜನೆಗಳನ್ನು ರಚಿಸಿ ಜಾರಿಗೊಳಿಸಲಾಗಿದೆ ಎಂದಿದ್ದರು. ಇದೀಗ ಸಿಎಂ ಕೂಡ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:22 pm, Fri, 14 June 24

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?