AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ನೀಡಿದ ಲಿಸ್ಟ್​​ನದ್ದು ಮಾತ್ರ ಮಾಡಿ: ಡಾ.ಯತೀಂದ್ರ ಎಡವಟ್ಟು ವಿಡಿಯೋ ವೈರಲ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಡಾ.ಯತೀಂದ್ರ ಅವರು ಸರ್ಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ, ವೈಎಸ್​ಟಿ ಕಲೆಕ್ಟ್ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಯತೀಂದ್ರ ಅವರು ಮಾಡಿದ ಮತ್ತೊಂದು ಎಡವಟ್ಟಿನ ವಿಡಿಯೋ ವೈರಲ್ ಆಗುತ್ತಿದೆ. ಸಿದ್ದರಾಮಯ್ಯ ಜೊತೆ ದೂರವಾಣಿ ಕರೆ ಮೂಲಕ ಮಾತನಾಡಿದ ವಿಡಿಯೋ ವೈರಲ್ ಆಗುತ್ತಿದೆ.

ರಾಮ್​, ಮೈಸೂರು
| Edited By: Rakesh Nayak Manchi|

Updated on:Nov 16, 2023 | 7:43 AM

Share

ಮೈಸೂರು, ನ.16: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಪುತ್ರ, ಮಾಜಿ ಶಾಸಕ ಡಾ.ಯತೀಂದ್ರ (Dr.Yathindra Siddaramaiah) ಅವರು ಸರ್ಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ, ವೈಎಸ್​ಟಿ ಕಲೆಕ್ಟ್ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಯತೀಂದ್ರ ಅವರು ಮಾಡಿದ ಮತ್ತೊಂದು ಎಡವಟ್ಟಿನ ವಿಡಿಯೋ ವೈರಲ್ ಆಗುತ್ತಿದೆ. ಸಾರ್ವಜನಿಕ ಸಭೆಯಲ್ಲಿ ಸಿದ್ದರಾಮಯ್ಯ ಜೊತೆ ದೂರವಾಣಿ ಕರೆ ಮೂಲಕ ಮಾತನಾಡಿದ ವಿಡಿಯೋ ವೈರಲ್ (Video Viral) ಆಗುತ್ತಿದೆ.

ಮೈಸೂರು ತಾಲೂಕಿನ ಕೀಳನಪುರ ಗ್ರಾಮದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಯತೀಂದ್ರ ಅವರು ದೂರವಾಣಿ ಕರೆ ಮಾಡಿ “ಅಪ್ಪ ಹೇಳಿ” ಅಂತ ಮಾತು ಆರಂಭಿಸಿ ತಾನು ನೀಡಿದ ಲಿಸ್ಟ್​ ಬಗ್ಗೆ ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು ವಿವೇಕಾನಂದರ ಹೆಸರು ಎತ್ತಿದ್ದು, ಇದಕ್ಕೆ ಯಾರು ಎಂದು ಯತೀಂದ್ರ ಅವರು ಪ್ರಶ್ನೆ ಮಾಡುವುದನ್ನು ವಿಡಿಯೋದಲ್ಲಿ ಕಾಣಬಹುದು.

ಇದನ್ನೂ ಓದಿ: ಜೆಡಿಎಸ್ ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ನಮೋನಮಃ ಎಂದು ಯಾಕೆ ಹೇಳಿದರು?

ಅಲ್ಲದೆ, ಬೇರೊಂದು ಲಿಸ್ಟ್​ ನೀಡಿದ ಬಗ್ಗೆ ಅಸಮಾಧಾನಗೊಂಡ ಯತೀಂದ್ರ ಅವರು, ನಾನು ಕೊಟ್ಟಿರುವುದೇ ಐದು ಅಂತ ಹೇಳಿ ಮಹದೇವರಿಗೆ‌ ಫೋನ್ ನೀಡುವಂತೆ ಸಿದ್ದರಾಮಯ್ಯಗೆ ಸೂಚಿಸುತ್ತಾರೆ. ಬಳಿಕ ಮಹದೇವ್ ಜೊತೆ ಮಾತನಾಡಿದ ಯತೀಂದ್ರ, ಮಹದೇವ್​ ಯಾಕೆ ಯಾವ್ದ್ಯಾವುದು ಕೊಡ್ತೀಯಾ? ಮತ್ತೆ ಇದೆಲ್ಲ ಯಾರು ಕೊಡ್ತಿರೋದು ಅಂತ ಪ್ರಶ್ನೆ ಮಾಡಿದ್ದಾರೆ.

ಅಲ್ಲದೆ, ಇಲ್ಲ ಅದೆಲ್ಲ ಬೇಡ. ನಾನು ಯಾವುದು ನಾಲ್ಕೈದು ಕೊಟ್ಟಿದ್ದೇನೋ ಅಷ್ಟೇ ಮಾತ್ರ ಮಾಡಿ ಅಂತ ಹೇಳುವಂತೆ ಯತೀಂದ್ರ ಅವರು ಮಹದೇವರಿಗೆ ಸೂಚಿಸಿ ಮಾತು ನಿಲ್ಲಿಸುವುದನ್ನು ವಿಡಿಯೋದಲ್ಲಿ ಕಾಣಬಹುದು.

ಆಶ್ರಯ ಸಮಿತಿ ಅಧ್ಯಕ್ಷರಾಗಿರುವ (ಸಾಂವಿಧಾನಿಕ ಹುದ್ದೆ) ಯತೀಂದ್ರ ಅವರು ಜನ ಸಂಪರ್ಕ ಸಭೆ ಎಲ್ಲರ ಮನವಿ ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ಸೂಚಿಸಲು ಯತೀಂದ್ರ ಅವರು ಯತ್ನಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:07 am, Thu, 16 November 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ