AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ವರ್ಷ ಪ್ರೀತಿಸಿ, ತಾಳಿ ಕಟ್ಟಿಸಿಕೊಂಡ ನಂತರ ಇಷ್ಟವಿಲ್ಲ ಎಂದಿದ್ದ ತಂಗಿ; ಸಹೋದರಿ ತಪ್ಪಿಗೆ ಅಣ್ಣನ ಕೊಲೆ

ನಿನ್ನೆ(ಜೂ.16) ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ಹೇಮಂತ್ ಅಲಿಯಾಸ್ ಸ್ವಾಮಿ(23) ಎಂಬಾತನನ್ನ ಕಲ್ಲಿನಿಂದ ಜಜ್ಜಿ, ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ (Murder) ಮಾಡಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ತಂಗಿಯ ವಿಷಯವಾಗಿ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ.

5 ವರ್ಷ ಪ್ರೀತಿಸಿ, ತಾಳಿ ಕಟ್ಟಿಸಿಕೊಂಡ ನಂತರ ಇಷ್ಟವಿಲ್ಲ ಎಂದಿದ್ದ ತಂಗಿ; ಸಹೋದರಿ ತಪ್ಪಿಗೆ ಅಣ್ಣನ ಕೊಲೆ
ಕೊಲೆಯಾದ ಹೇಮಂತ್​, ಆರೋಪಿ ಸಾಗರ್​
ಕಿರಣ್ ಹನುಮಂತ್​ ಮಾದಾರ್
|

Updated on: Jun 17, 2023 | 7:14 AM

Share

ಮೈಸೂರು: ನಿನ್ನೆ(ಜೂ.16) ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ಹೇಮಂತ್ ಅಲಿಯಾಸ್ ಸ್ವಾಮಿ(23) ಎಂಬಾತನನ್ನ ಕಲ್ಲಿನಿಂದ ಜಜ್ಜಿ, ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ (Murder) ಮಾಡಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ತಂಗಿಯ ವಿಷಯವಾಗಿ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ಹೌದು ಕೊಲೆಯಾದ ಯುವಕನ ತಂಗಿ, ಆರೋಪಿ ಸಾಗರ್​ನನ್ನು 5 ವರ್ಷ ಪ್ರೀತಿ ಮಾಡಿ ತಾಳಿ ಕಟ್ಟಿಸಿಕೊಂಡು, ನಂತರ ಇಷ್ಟವಿಲ್ಲ ಎಂದಿದ್ದಳು. ಮದುವೆ ನಂತರವೂ ಪ್ರೀತಿ ಮಾಡಿದವಳು ಸಿಗದ ಕೋಪದಲ್ಲಿ ಸಾಗರ್​ ಜೊತೆಗೆ ತನ್ನ ಸ್ನೇಹಿತರಾದ ಪ್ರತಾಪ್, ಮಂಜು ಎಂಬುವವರು ಸೇರಿ ಬರ್ಬರವಾಗಿ ಹತ್ಯೆ ಮಾಡಿ, ಪರಾರಿಯಾಗಿದ್ದಾರೆ. ಈ ಕುರಿತು ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,

15 ದಿನಗಳ ಹಿಂದೆ ಓಡಿ ಹೋಗಿ ಮದುವೆ ಆಗಿದ್ದ ಜೋಡಿ

ಕೊಲೆಯಾದ ಹೇಮಂತ್ ಅಲಿಯಾಸ್ ಸ್ವಾಮಿಯ ಜೊತೆ ಆರೋಪಿ ಸಾಗರ್ ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದ.​ ಈ ವೇಳೆ ಇಂಜಿನಿಯರಿಂಗ್ ಓದುತ್ತಿದ್ದ ಸ್ವಾಮಿ ತಂಗಿ ಜೊತೆ ಪ್ರೇಮಾಂಕುರ ಆಗಿದ್ದು, 5 ವರ್ಷದಿಂದ ಪ್ರೀತಿಸುತ್ತಿದ್ದರು. ಬಳಿಕ ಹುಡುಗಿ ಮನೆಯವರ ವಿರೋಧದ ನಡುವೆಯು 15 ದಿನಗಳ ಹಿಂದೆ ಓಡಿ ಹೋಗಿ ಮದುವೆ ಕೂಡ ಆಗಿ, ನಂತರ ವಾಪಸ್ಸಾಗಿದ್ದರು. ಇದಾದ ಬಳಿಕ ಹುಡುಗಿ ರಿಟರ್ನ್​ ಹೊಡೆದಿದ್ದು, ಸಾಗರ್ ನನ್ನನ್ನು ಬಲವಂತವಾಗಿ ಮದುವೆ ಆಗಿದ್ದಾನೆಂದು ಆರೋಪಿಸಿ, ಪೊಲೀಸ್ ಠಾಣೆಯಲ್ಲೂ ಸಾಗರ್ ಬೇಡ ಎಂದಿದ್ದಳು.

ಇದನ್ನೂ ಓದಿ:ಜನರ ಸಮ್ಮುಖದಲ್ಲೇ ಯುವಕನನ್ನು ಅಟ್ಟಾಡಿಸಿಕೊಂಡು ಹೋಗಿ ಬರ್ಬರವಾಗಿ ಕೊಲೆ: ಬೆಚ್ಚಿಬೀಳಿಸುವ ಸಿಸಿಟಿವಿ ವಿಡಿಯೋ ವೈರಲ್

ಕಟ್ಟಿದ್ದ ತಾಳಿ ಕಿತ್ತು ಹಾಕಿದ್ದ ಸಹೋದರ ಸ್ವಾಮಿ

ಇನ್ನು ಮೃತ ಹೇಮಂತ್ ಅಲಿಯಾಸ್ ಸ್ವಾಮಿ ಸಾಗರ್​ ಕಟ್ಟಿದ್ದ ತಾಳಿಯನ್ನ ಕಿತ್ತು ಹಾಕಿದ್ದನು. ಇದರಿಂದ ಸಹೋದರ ಸ್ವಾಮಿ ಮೇಲೆ ಕೋಪಗೊಂಡಿದ್ದ ಸಾಗರ್​​ ಸ್ನೇಹಿತರ ಜೊತೆ ಸೇರಿ ಬರ್ಬರವಾಗಿ ಹತ್ಯೆ ಮಾಡಿದ್ದ. ಹೌದು ರಾತ್ರಿ ಬೈಕ್‌ನಲ್ಲಿ ಬರುತ್ತಿದ್ದ ಸ್ವಾಮಿಯನ್ನು ಸಾಗರ್ ತನ್ನ ಸ್ನೇಹಿತರಾದ ಪ್ರತಾಪ್ ಹಾಗೂ ಮಂಜು ಜೊತೆ ಸೇರಿ ಅಡ್ಡ ಹಾಕಿದ್ದ. ಈ ವೇಳೆ ಸ್ವಾಮಿ ಹಾಗೂ ಸಾಗರ್ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೈ ಕೈ ಮಿಲಾಯಿಸುವ ಹಂತ ತಲುಪಿದೆ. ಇದರಿಂದ ಆಕ್ರೋಶಗೊಂಡ ಸಾಗರ್, ಸ್ವಾಮಿಗೆ ಚಾಕುವಿನಿಂದ ಇರಿದಿದ್ದ. ಈ ವೇಳೆ ಕೆಳಗೆ ಬಿದ್ದ ಸ್ವಾಮಿ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿತ್ತು. ಬಳಿಕ ಸ್ಥಳಕ್ಕಾಗಮಿಸಿದ ವಿಜಯನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದು, ಸದ್ಯ ತಲೆ ಮರೆಸಿಕೊಂಡಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ