AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ವರ್ಷ ಪ್ರೀತಿಸಿ, ತಾಳಿ ಕಟ್ಟಿಸಿಕೊಂಡ ನಂತರ ಇಷ್ಟವಿಲ್ಲ ಎಂದಿದ್ದ ತಂಗಿ; ಸಹೋದರಿ ತಪ್ಪಿಗೆ ಅಣ್ಣನ ಕೊಲೆ

ನಿನ್ನೆ(ಜೂ.16) ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ಹೇಮಂತ್ ಅಲಿಯಾಸ್ ಸ್ವಾಮಿ(23) ಎಂಬಾತನನ್ನ ಕಲ್ಲಿನಿಂದ ಜಜ್ಜಿ, ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ (Murder) ಮಾಡಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ತಂಗಿಯ ವಿಷಯವಾಗಿ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ.

5 ವರ್ಷ ಪ್ರೀತಿಸಿ, ತಾಳಿ ಕಟ್ಟಿಸಿಕೊಂಡ ನಂತರ ಇಷ್ಟವಿಲ್ಲ ಎಂದಿದ್ದ ತಂಗಿ; ಸಹೋದರಿ ತಪ್ಪಿಗೆ ಅಣ್ಣನ ಕೊಲೆ
ಕೊಲೆಯಾದ ಹೇಮಂತ್​, ಆರೋಪಿ ಸಾಗರ್​
ಕಿರಣ್ ಹನುಮಂತ್​ ಮಾದಾರ್
|

Updated on: Jun 17, 2023 | 7:14 AM

Share

ಮೈಸೂರು: ನಿನ್ನೆ(ಜೂ.16) ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ಹೇಮಂತ್ ಅಲಿಯಾಸ್ ಸ್ವಾಮಿ(23) ಎಂಬಾತನನ್ನ ಕಲ್ಲಿನಿಂದ ಜಜ್ಜಿ, ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ (Murder) ಮಾಡಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ತಂಗಿಯ ವಿಷಯವಾಗಿ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ಹೌದು ಕೊಲೆಯಾದ ಯುವಕನ ತಂಗಿ, ಆರೋಪಿ ಸಾಗರ್​ನನ್ನು 5 ವರ್ಷ ಪ್ರೀತಿ ಮಾಡಿ ತಾಳಿ ಕಟ್ಟಿಸಿಕೊಂಡು, ನಂತರ ಇಷ್ಟವಿಲ್ಲ ಎಂದಿದ್ದಳು. ಮದುವೆ ನಂತರವೂ ಪ್ರೀತಿ ಮಾಡಿದವಳು ಸಿಗದ ಕೋಪದಲ್ಲಿ ಸಾಗರ್​ ಜೊತೆಗೆ ತನ್ನ ಸ್ನೇಹಿತರಾದ ಪ್ರತಾಪ್, ಮಂಜು ಎಂಬುವವರು ಸೇರಿ ಬರ್ಬರವಾಗಿ ಹತ್ಯೆ ಮಾಡಿ, ಪರಾರಿಯಾಗಿದ್ದಾರೆ. ಈ ಕುರಿತು ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,

15 ದಿನಗಳ ಹಿಂದೆ ಓಡಿ ಹೋಗಿ ಮದುವೆ ಆಗಿದ್ದ ಜೋಡಿ

ಕೊಲೆಯಾದ ಹೇಮಂತ್ ಅಲಿಯಾಸ್ ಸ್ವಾಮಿಯ ಜೊತೆ ಆರೋಪಿ ಸಾಗರ್ ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದ.​ ಈ ವೇಳೆ ಇಂಜಿನಿಯರಿಂಗ್ ಓದುತ್ತಿದ್ದ ಸ್ವಾಮಿ ತಂಗಿ ಜೊತೆ ಪ್ರೇಮಾಂಕುರ ಆಗಿದ್ದು, 5 ವರ್ಷದಿಂದ ಪ್ರೀತಿಸುತ್ತಿದ್ದರು. ಬಳಿಕ ಹುಡುಗಿ ಮನೆಯವರ ವಿರೋಧದ ನಡುವೆಯು 15 ದಿನಗಳ ಹಿಂದೆ ಓಡಿ ಹೋಗಿ ಮದುವೆ ಕೂಡ ಆಗಿ, ನಂತರ ವಾಪಸ್ಸಾಗಿದ್ದರು. ಇದಾದ ಬಳಿಕ ಹುಡುಗಿ ರಿಟರ್ನ್​ ಹೊಡೆದಿದ್ದು, ಸಾಗರ್ ನನ್ನನ್ನು ಬಲವಂತವಾಗಿ ಮದುವೆ ಆಗಿದ್ದಾನೆಂದು ಆರೋಪಿಸಿ, ಪೊಲೀಸ್ ಠಾಣೆಯಲ್ಲೂ ಸಾಗರ್ ಬೇಡ ಎಂದಿದ್ದಳು.

ಇದನ್ನೂ ಓದಿ:ಜನರ ಸಮ್ಮುಖದಲ್ಲೇ ಯುವಕನನ್ನು ಅಟ್ಟಾಡಿಸಿಕೊಂಡು ಹೋಗಿ ಬರ್ಬರವಾಗಿ ಕೊಲೆ: ಬೆಚ್ಚಿಬೀಳಿಸುವ ಸಿಸಿಟಿವಿ ವಿಡಿಯೋ ವೈರಲ್

ಕಟ್ಟಿದ್ದ ತಾಳಿ ಕಿತ್ತು ಹಾಕಿದ್ದ ಸಹೋದರ ಸ್ವಾಮಿ

ಇನ್ನು ಮೃತ ಹೇಮಂತ್ ಅಲಿಯಾಸ್ ಸ್ವಾಮಿ ಸಾಗರ್​ ಕಟ್ಟಿದ್ದ ತಾಳಿಯನ್ನ ಕಿತ್ತು ಹಾಕಿದ್ದನು. ಇದರಿಂದ ಸಹೋದರ ಸ್ವಾಮಿ ಮೇಲೆ ಕೋಪಗೊಂಡಿದ್ದ ಸಾಗರ್​​ ಸ್ನೇಹಿತರ ಜೊತೆ ಸೇರಿ ಬರ್ಬರವಾಗಿ ಹತ್ಯೆ ಮಾಡಿದ್ದ. ಹೌದು ರಾತ್ರಿ ಬೈಕ್‌ನಲ್ಲಿ ಬರುತ್ತಿದ್ದ ಸ್ವಾಮಿಯನ್ನು ಸಾಗರ್ ತನ್ನ ಸ್ನೇಹಿತರಾದ ಪ್ರತಾಪ್ ಹಾಗೂ ಮಂಜು ಜೊತೆ ಸೇರಿ ಅಡ್ಡ ಹಾಕಿದ್ದ. ಈ ವೇಳೆ ಸ್ವಾಮಿ ಹಾಗೂ ಸಾಗರ್ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೈ ಕೈ ಮಿಲಾಯಿಸುವ ಹಂತ ತಲುಪಿದೆ. ಇದರಿಂದ ಆಕ್ರೋಶಗೊಂಡ ಸಾಗರ್, ಸ್ವಾಮಿಗೆ ಚಾಕುವಿನಿಂದ ಇರಿದಿದ್ದ. ಈ ವೇಳೆ ಕೆಳಗೆ ಬಿದ್ದ ಸ್ವಾಮಿ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿತ್ತು. ಬಳಿಕ ಸ್ಥಳಕ್ಕಾಗಮಿಸಿದ ವಿಜಯನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದು, ಸದ್ಯ ತಲೆ ಮರೆಸಿಕೊಂಡಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್