AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಗರಿಗೆದರಿದ ಪಾಲಿಕೆ ಉಪಚುನಾವಣೆ; 6 ನಾಮಪತ್ರ ಸಲ್ಲಿಕೆ

ನಾಳೆ (ಆಗಸ್ಟ್ 25) ಮಹಾನಗರ ಪಾಲಿಕೆ ಮೇಯರ್ ಚುನಾವಣೆ ನಡೆಯುತ್ತಿದ್ದು, ಮೊದಲ ಬಾರಿಗೆ ಮೇಯರ್ ಗದ್ದುಗೆ ಹಿಡಿಯಲು ಬಿಜೆಪಿ ಸರ್ಕಸ್ ನಡೆಸುತ್ತಿದೆ.

ಮೈಸೂರಿನಲ್ಲಿ ಗರಿಗೆದರಿದ ಪಾಲಿಕೆ ಉಪಚುನಾವಣೆ; 6 ನಾಮಪತ್ರ ಸಲ್ಲಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 24, 2021 | 8:41 AM

Share

ಮೈಸೂರು: ಜಿಲ್ಲೆಯಲ್ಲಿ ಪಾಲಿಕೆ ಉಪಚುನಾವಣೆ ಗರಿಗೆದರಿದೆ. 36ನೇ ವಾರ್ಡ್ಗೆ ಉಪಚುನಾವಣೆ ನಡೆಯುತ್ತಿದ್ದು, ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದೆ. ಬಿಜೆಪಿ (BJP), ಕಾಂಗ್ರೆಸ್ (Congress), ಜೆಡಿಎಸ್ (JDS) ಸೇರಿ ಒಟ್ಟು 6 ನಾಮಪತ್ರ ಸಲ್ಲಿಕೆಯಾಗಿದೆ. ಮಾಜಿ ಮೇಯರ್ ರುಕ್ಮಿಣಿ ಮಾದೇಗೌಡ ಅವರ ಸದಸ್ಯತ್ವ ರದ್ದಾದ ಹಿನ್ನೆಲೆ ಉಪಚುನಾವಣೆ ನಡೆಯುತ್ತಿದೆ. ಬಿಜೆಪಿಯಿಂದ ಪಿ.ಶೋಭಾ, ಕಾಂಗ್ರೆಸ್ನಿಂದ ರಜನಿ ಅಣ್ಣಯ್ಯ, ಜೆಡಿಎಸ್ನಿಂದ ಎಸ್.ಲೀಲಾವತಿ ಮತ್ತು ಮೂವರು ಪಕ್ಷೇತರರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ನಾಳೆ (ಆಗಸ್ಟ್ 25) ಮಹಾನಗರ ಪಾಲಿಕೆ ಮೇಯರ್ ಚುನಾವಣೆ ನಡೆಯುತ್ತಿದ್ದು, ಮೊದಲ ಬಾರಿಗೆ ಮೇಯರ್ ಗದ್ದುಗೆ ಹಿಡಿಯಲು ಬಿಜೆಪಿ ಸರ್ಕಸ್ ನಡೆಸುತ್ತಿದೆ. ಈ ಹಿಂದೆ ಮೈಸೂರು ಪಾಲಿಕೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಇತ್ತು. ಬದಲಾದ ಪರಿಸ್ಥಿತಿಯಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿಯಲ್ಲಿ ಬಿಕ್ಕಟ್ಟು ಶುರುವಾಯಿತು. ಮೈತ್ರಿ ಬಿಕ್ಕಟ್ಟಿನ ಲಾಭ ಪಡೆಯಲು ಬಿಜೆಪಿ ಇದೀಗ ಯತ್ನಿಸುತ್ತಿದೆ. ಕೊರೊನಾ ಭೀತಿ ನಡುವೆ ಚುನಾವಣೆ ಭರಾಟೆ ಜೋರಾಗಿ ನಡೆಯುತ್ತಿದೆ.

ಕಾಂಗ್ರೆಸ್ ಸಂಪರ್ಕಕ್ಕೆ ಸಿಗದ ಸಾ.ರಾ.ಮಹೇಶ್ ಕಾಂಗ್ರೆಸ್ ನಾಯಕರ ಸಂಪರ್ಕಕ್ಕೆ ಸಿಗದ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ರನ್ನು, 2 ದಿನಗಳ ಹಿಂದೆ ಎಸ್.ಟಿ.ಸೋಮಶೇಖರ್ ಭೇಟಿಯಾಗಿದ್ದರು. ಮೇಯರ್ ಚುನಾವಣೆ ಹಿನ್ನೆಲೆ ಭೇಟಿ ಆಗಿದ್ದರು. ಮೊದಲ ಬಾರಿಗೆ ಬಿಜೆಪಿಯನ್ನು ಪಾಲಿಕೆಯಲ್ಲಿ ಅಧಿಕಾರಕ್ಕೆ ಏರಿಸಬೇಕು ಅಂತ ಭೇಟಿ ಮಾಡಿದ್ದರು ಎಂದು ಹೇಳಲಾಗುತ್ತಿತ್ತು. ಇದೇ ಕಾರಣಕ್ಕಾಗಿ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಅವರನ್ನು ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿಸಿದ್ದಾರೆ ಎನ್ನಲಾಗಿದೆ. ಆದರೆ, ಭೇಟಿಯ ನಡುವೆ ಅವರ ನಡುವೆ ಏನೆಲ್ಲಾ ಮಾತುಕತೆ ನಡೆದಿದೆ ಎಂಬ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಆದರೆ ಇದೀಗ ಕಾಂಗ್ರೆಸ್ ನಾಯಕರ ಸಂಪರ್ಕಕ್ಕೆ ಸಾ.ರಾ.ಮಹೇಶ್ ಸಿಗುತ್ತಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ

ನಂಜನಗೂಡು: ಲಂಚ ಸ್ವೀಕರಿಸಿದ ಶಾಲಾ ವಾರ್ಡನ್‌ಗೆ ಜೈಲು ಶಿಕ್ಷೆ

ದೇಹ ಇಲ್ಲೇ ಮಣ್ಣಾದರೂ ಸೈ, ಅಫ್ಘಾನಿಸ್ತಾನವನ್ನು ಬಿಟ್ಟು ಹೋಗುವುದಿಲ್ಲ: ಹಂಗಾಮಿ ಅಧ್ಯಕ್ಷ ಅಮರುಲ್ಲಾ ಸಲೇಹ್

(There are 6 nominations for the Mysuru Mayor Election)

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ