AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವರಾಗಿಯೇ ಕಾಂಗ್ರೆಸ್ ಪಕ್ಷಕ್ಕೆ ಬರುತ್ತಿದ್ದಾರೆ, ನಾವು ಯಾವುದೇ ಆಪರೇಷನ್ ಹಸ್ತ ಮಾಡುತ್ತಿಲ್ಲ: ಡಿಸಿಎಂ ಡಿಕೆ ಶಿವಕುಮಾರ್​

ಆಪರೇಷನ್ ಈ ಒಂದು ಶಬ್ದ ಸದ್ಯ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಕುರಿತಾಗಿ ಮೈಸೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಪ್ರತಿಕ್ರಿಯಿಸಿದ್ದು, ನಾವಾಗಿಯೇ ಯಾರನ್ನೂ ಕರೆತರುವ ಪ್ರಯತ್ನ ಮಾಡುತ್ತಿಲ್ಲ. ಅವರಾಗಿಯೇ ಕಾಂಗ್ರೆಸ್ ಪಕ್ಷಕ್ಕೆ ಬರುತ್ತಿದ್ದಾರೆ. ನಾವು ಯಾವುದೇ ಆಪರೇಷನ್​ ಹಸ್ತ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

ಅವರಾಗಿಯೇ ಕಾಂಗ್ರೆಸ್ ಪಕ್ಷಕ್ಕೆ ಬರುತ್ತಿದ್ದಾರೆ, ನಾವು ಯಾವುದೇ ಆಪರೇಷನ್ ಹಸ್ತ ಮಾಡುತ್ತಿಲ್ಲ: ಡಿಸಿಎಂ  ಡಿಕೆ ಶಿವಕುಮಾರ್​
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ರಾಮ್​, ಮೈಸೂರು
| Edited By: |

Updated on: Aug 24, 2023 | 2:52 PM

Share

ಮೈಸೂರು, ಆಗಸ್ಟ್​​ 24: ನಾವಾಗಿಯೇ ಯಾರನ್ನೂ ಕರೆತರುವ ಪ್ರಯತ್ನ ಮಾಡುತ್ತಿಲ್ಲ. ಅವರಾಗಿಯೇ ಕಾಂಗ್ರೆಸ್ ಪಕ್ಷಕ್ಕೆ ಬರುತ್ತೇವೆ ಎಂದು ಹೇಳುತ್ತಿದ್ದಾರೆ. ನಾವು ಯಾವುದೇ ಆಪರೇಷನ್ ಹಸ್ತ ಮಾಡುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಬರುವವರಿಗೆ ನಾವು ಸ್ವಾಗತ ಕೋರುತ್ತಿದ್ದೇವೆ. ತಮ್ಮ ಭವಿಷ್ಯ, ನಮ್ಮ ಪಕ್ಷದ ವರ್ಚಸ್ಸು ಗಮನಿಸಿ ನಿರ್ಧರಿಸುತ್ತಿದ್ದಾರೆ. ಎಷ್ಟು ಜನ ಬರ್ತಾರೆ ಅಂತಾ ಈಗಲೇ ನಾನು ಹೇಳಲು ಸಾಧ್ಯವಿಲ್ಲ. ಎಲ್ಲದಕ್ಕೂ ಕಾಲ, ಸಮಯ ಗಳಿಗೆ ಎಂಬುದು ಇರುತ್ತದೆ. ಆ ಗಳಿಗೆ ಬಂದಾಗ ಎಲ್ಲವೂ ನಡೆಯುತ್ತದೆ ಎಂದರು.

ಜೆಡಿಎಸ್​​ ಶಾಸಕರನ್ನು ಕಾಂಗ್ರೆಸ್ ಸೆಳೆಯಲು ಯತ್ನಿಸಿದೆ ಎಂಬ ವಿಚಾರವಾಗಿ ಮಾತನಾಡಿ, ಇಂತಹ ಮಾತು ಹೇಳುತ್ತಾ ಹೋದರೆ ಅದು ಬಹಳ ದೊಡ್ಡದಾಗುತ್ತೆ. ಈಗ ಅದರ ಬಗ್ಗೆ ಚರ್ಚೆ ಬೇಡ ಎಂದು ಹೇಳಿದರು.

ದೇಶದ ಎಲ್ಲ ಕಡೆ ನಮ್ಮ ಗ್ಯಾರಂಟಿ ಯೋಜನೆಗಳು ಸದ್ದು ಮಾಡುತ್ತಿವೆ

ದೇಶದ ಎಲ್ಲ ಕಡೆ ನಮ್ಮ ಗ್ಯಾರಂಟಿ ಯೋಜನೆಗಳು ಸದ್ದು ಮಾಡುತ್ತಿವೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತೆ ಅಂತಾ ಪ್ರಧಾನಮಂತ್ರಿ ಮೋದಿ ಟೀಕಿಸಿದ್ದರು. ಈಗ ಅವರದೇ ಸರ್ಕಾರ ನಮ್ಮನ್ನು ನೋಡಿ ಗ್ಯಾರಂಟಿ ಜಾರಿ ಮಾಡಿದೆ.

ಇದನ್ನೂ ಓದಿ: ಕಾಂಗ್ರೆಸ್ ಸೇರ್ಪಡೆಯಾದ ಆಯನೂರು ಮಂಜುನಾಥ್, ಬೆಂಗಳೂರಿನಿಂದಲೇ ಶಿವಮೊಗ್ಗ ಕೈ ನಾಯಕನಿಗೆ ತಿರುಗೇಟು

ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ಗ್ಯಾರಂಟಿ ಯೋಜನೆ ಜಾರಿಗೊಳಿಸಿದೆ. ಇದಕ್ಕೆ ಪ್ರಧಾನಮಂತ್ರಿ ಮೋದಿಯವರು ಏನು ಹೇಳುತ್ತಾರೆ. ದೇಶದಲ್ಲಿ ಎಲ್ಲರೂ ಈಗ ನಮ್ಮ ಕಾರ್ಯಕ್ರಮಗಳನ್ನು ನೋಡುತ್ತಿದ್ದಾರೆ ಎಂದು ಹೇಳಿದರು.

ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ಬೆಳಗಾವಿಯಿಂದ ಶಿಫ್ಟ್ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ

ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ಬೆಳಗಾವಿಯಿಂದ ಶಿಫ್ಟ್ ವಿಚಾರವಾಗಿ ಮಾತನಾಡಿದ ಅವರು, ಕಾರ್ಯಕ್ರಮ ಸ್ಥಳಾಂತರ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಸ್ಪಷ್ಟನೆ ನೀಡಿದರು. ಬೆಳಗಾವಿಯಲ್ಲಿ ಮತ್ತೊಂದು ಕಾರ್ಯಕ್ರಮ ಆಯೋಜಿಸಲಾಗುವುದು. ಸದ್ಯ ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ.

ಇದನ್ನೂ ಓದಿ: ದೆಹಲಿಗೆ ಬರುವಂತೆ ಆಹ್ವಾನ: ಕಾಂಗ್ರೆಸ್ ಆಪರೇಷನ್ ಹಸ್ತದ ಗುಟ್ಟು ಬಿಚ್ಚಿಟ್ಟ ಜೆಡಿಎಸ್​ ಶಾಸಕ

ಆ.30ರಂದು ಫಲಾನುಭವಿಗಳ ಬ್ಯಾಂಕ್​ ಖಾತೆಗೆ ₹2000 ಜಮೆ ಆಗಲಿದೆ. ಫಲಾನುಭವಿಗಳ ಮೊಬೈಲ್​​ಗೆ ಕೂಡಲೇ ಸಂದೇಶ ರವಾನೆ ಆಗಲಿದೆ. ನಮ್ಮಲ್ಲಿ ಹಣದ ಕೊರತೆ ಇಲ್ಲ, ಹಣ ಬ್ಯಾಂಕ್​ಗೆ ಡೆಪಾಸಿಟ್ ಆಗಿದೆ. ಸರ್ವರ್​ ಸಮಸ್ಯೆಯಾದರೆ ಹಣ ಜಮೆ ಆಗುವುದು ತಡವಾಗಬಹುದು ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ