AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಮಾಚಾರ ಮಾಡಿ ಕೊಲೆ ಆರೋಪ: ಕೆರೆಯಲ್ಲಿ ಬಾಲಕನ ಶವ ಪತ್ತೆ, ಮೂವರು ಅಪ್ರಾಪ್ತ ಸ್ನೇಹಿತರನ್ನು ವಶಕ್ಕೆ ಪಡೆದ ಪೊಲೀಸ್

ಪೊಲೀಸರ ವಶದಲ್ಲಿರುವ ಒಬ್ಬ ಆರೋಪಿ, ತಾತನಿಂದ ವಾಮಾಚಾರ ಮಾಡುವುದನ್ನ ಕಲಿತಿದ್ದನಂತೆ. ಅಮಾವಾಸ್ಯೆ ದಿನ ಬಲಿ ಕೊಟ್ಟರೆ ಇಷ್ಟಾರ್ಥ ಸಿದ್ದಿಗಳು ನೆರವೇರುತ್ತವೆ ಎಂಬ ನಂಬಿಕೆ. ಇದೇ ದೃಷ್ಟಿಯಿಂದ ಮಹೇಶ್ನನ್ನು ಪುಸಲಾಯಿಸಿದ ಮೂವರು ಆರೋಪಿಗಳು ಕೆರೆ ಬಳಿಗೆ ಕರೆತಂದಿದ್ದಾರೆ.

ವಾಮಾಚಾರ ಮಾಡಿ ಕೊಲೆ ಆರೋಪ: ಕೆರೆಯಲ್ಲಿ ಬಾಲಕನ ಶವ ಪತ್ತೆ, ಮೂವರು ಅಪ್ರಾಪ್ತ ಸ್ನೇಹಿತರನ್ನು ವಶಕ್ಕೆ ಪಡೆದ ಪೊಲೀಸ್
ಮಹೇಶ್ ಅಲಿಯಾಸ್ ಮನು ಮೃತ ಬಾಲಕ
TV9 Web
| Edited By: |

Updated on: Jan 04, 2022 | 7:20 AM

Share

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ಹಳೆಪುರ ಬಳಿ ಕೆರೆಯಲ್ಲಿ ಬಾಲಕನ ಶವ ಪತ್ತೆಯಾಗಿದ್ದು ಹತ್ಯೆ ಆರೋಪ ಕೇಳಿ ಬಂದಿದೆ. ಮಹೇಶ್ ಅಲಿಯಾಸ್ ಮನು(16) ಮೃತದೇಹ ಪತ್ತೆಯಾಗಿದೆ. ಮಹೇಶ್‌ನ ಮೂವರು ಅಪ್ರಾಪ್ತ ಸ್ನೇಹಿತರ ವಿರುದ್ಧ ಆರೋಪ ಕೇಳಿ ಬಂದಿದೆ.

ಮೈಸೂರಿನ ಕೆರೆಯಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಸ್ನೇಹಿತರಿಂದಲೇ ಬಾಲಕನ ಕೊಲೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ವಾಮಾಚಾರ ಮಾಡಿ ಮಹೇಶ್‌ನನ್ನು ಕೆರೆಗೆ ತಳ್ಳಿದ್ದಾರೆ ಎಂದು ಹೇಳಲಾಗುತ್ತಿದೆ. ಅಮಾವಾಸೆ ದಿನದಂದು ಕೆರೆ ಬಳಿ ವಾಮಾಚಾರ ಮಾಡಿ ಬಾಲಕನ ಕೊಲೆ ಮಾಡಲಾಗಿದೆ ಎಂಬ ಶಂಖೆ ವ್ಯಕ್ತವಾಗಿದೆ. ಸದ್ಯ ಬಾಲಕನ ಮೂವರು ಸ್ನೇಹಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪೊಲೀಸರ ವಶದಲ್ಲಿರುವ ಒಬ್ಬ ಆರೋಪಿ, ತಾತನಿಂದ ವಾಮಾಚಾರ ಮಾಡುವುದನ್ನ ಕಲಿತಿದ್ದನಂತೆ. ಅಮಾವಾಸ್ಯೆ ದಿನ ಬಲಿ ಕೊಟ್ಟರೆ ಇಷ್ಟಾರ್ಥ ಸಿದ್ದಿಗಳು ನೆರವೇರುತ್ತವೆ ಎಂಬ ನಂಬಿಕೆ. ಇದೇ ದೃಷ್ಟಿಯಿಂದ ಮಹೇಶ್ನನ್ನು ಪುಸಲಾಯಿಸಿದ ಮೂವರು ಆರೋಪಿಗಳು ಕೆರೆ ಬಳಿಗೆ ಕರೆತಂದಿದ್ದಾರೆ. ಸ್ಥಳದಲ್ಲಿ ಗೊಂಬೆಯೊಂದನ್ನ ತಯಾರಿಸಿ ಅದರ ಮೇಲೆ ಮಹೇಶ್ ಹೆಸರು ಬರೆದಿದ್ದಾರೆ. ನಂತರ ಪೂಜೆ ಮಾಡಿ ಮಹೇಶ್ ನನ್ನು ಆರೋಪಿಗಳು ಕೆರೆಗೆ ತಳ್ಳಿದ್ದಾರೆ. ಕೃತ್ಯವೆಸಗಿದ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಬೆಳಗ್ಗೆ ಮಹೇಶ್ ಕೆರೆಗೆ ಬಿದ್ದ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ಸಿಕ್ಕಿದೆ. ಕೆರೆಯಲ್ಲಿ ಶೋಧ ಮಾಡಿದಾಗ ಮಹೇಶ್ ಮೃತದೇಹ ಪತ್ತೆಯಾಗಿದೆ. ಕೆರೆ ಬಳಿ ವಾಮಾಚಾರ ಪೂಜೆ ಮಾಡಿದ ಕುರುಹುಗಳು ಪತ್ತೆಯಾಗಿವೆ. ಗೊಂಬೆ, ಕೋಳಿ, ಮಡಿಕೆ ಸೇರಿದಂತೆ ಇನ್ನಿತರ ಪದಾರ್ಥಗಳು ಸಿಕ್ಕಿವೆ. ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Badava Rascal: ಬಡವ ರಾಸ್ಕಲ್ ಬೆನ್ನುತಟ್ಟಿದ ಪ್ರಶಾಂತ್ ನೀಲ್; ಚಿತ್ರತಂಡಕ್ಕೆ ಹೇಳಿದ್ದೇನು?

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು