AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಹುಲಿ ದಾಳಿಗೆ ಬೇಸತ್ತು ಅರಣ್ಯ ಇಲಾಖೆ ಸಿಬ್ಬಂದಿಗೆ ಥಳಿಸಿದ ಗ್ರಾಮಸ್ಥರು

ಮೈಸೂರು ಜಿಲ್ಲೆ ನಂಜನಗೂಡಿನ ಮಹದೇವನಗರದ ಹೊರವಲಯದಲ್ಲಿ ಹುಲಿ ದಾಳಿಗೆ ಬೇಸತ್ತು ಅರಣ್ಯ ಇಲಾಖೆ ಸಿಬ್ಬಂದಿಗೆ ಗ್ರಾಮಸ್ಥರು ಥಳಿಸಿದ್ದಾರೆ. ಪದೇ ಪದೆ ಹುಲಿ ದಾಳಿ ಆದರೂ, ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯಾ ಇಲಾಖೆ ಸಿಬ್ಬಂದಿಗೆ ಥಳಿಸಿ ಆಕ್ರೋಶ ಹೊರ ಹಾಕಿದ್ದಾರೆ.

ಮೈಸೂರು: ಹುಲಿ ದಾಳಿಗೆ ಬೇಸತ್ತು ಅರಣ್ಯ ಇಲಾಖೆ ಸಿಬ್ಬಂದಿಗೆ ಥಳಿಸಿದ ಗ್ರಾಮಸ್ಥರು
ಹುಲಿ ದಾಳಿಗೆ ಬೇಸತ್ತು ಅರಣ್ಯ ಇಲಾಖೆ ಸಿಬ್ಬಂದಿಗೆ ಥಳಿತ
ರಾಮ್​, ಮೈಸೂರು
| Edited By: ಆಯೇಷಾ ಬಾನು|

Updated on: Nov 01, 2023 | 11:56 AM

Share

ಮೈಸೂರು, ನ.01: ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಯಿಂದಾಗಿ (Tiger Attack) ರೈತನೋರ್ವ ಗಂಭಿರವಾಗಿ ಗಾಯಗೊಂಡಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಈ ಘಟನೆ ಸಂಬಂಧ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು ಈ ವೇಳೆ ಗ್ರಾಮಸ್ಥರು ಸಿಬ್ಬಂದಿಗೆ ಥಳಿಸಿದ ಘಟನೆ ನಡೆದಿದೆ. ಮೈಸೂರು (Mysuru) ಜಿಲ್ಲೆ ನಂಜನಗೂಡಿನ ಮಹದೇವನಗರದ ಹೊರವಲಯದಲ್ಲಿ ಪದೇ ಪದೆ ಹುಲಿ ದಾಳಿ ನಡೆಯುತ್ತಿದ್ದು ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯಾ ಇಲಾಖೆ ಸಿಬ್ಬಂದಿಗೆ ಥಳಿಸಿ ಆಕ್ರೋಶ ಹೊರ ಹಾಕಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಮಹಾಂತೇಶ್ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ. ವರ್ಷದ ಹಿಂದೆ ಹಾದನೂರು ಒಡೆಯನಪುರದ ಮಹದೇವೇಗೌಡ ಎಂಬ ರೈತ ಹುಲಿ ದಾಳಿಗೆ ಬಲಿಯಾಗಿದ್ದರು.

ಸ್ಥಳೀಯರ ಮೊಬೈಲ್‌ನಲ್ಲಿ ಹುಲಿ ಓಡಾಟದ ದೃಶ್ಯ ಸೆರೆ

ಇನ್ನು ನಂಜನಗೂಡು ತಾಲೂಕಿನ ಮಹದೇವ ನಗರದ ಹೊರವಲಯದಲ್ಲಿ ಹುಲಿಯ ಓಡಾಟ ಆತಂಕಕ್ಕೆ ಕಾರಣವಾಗಿದೆ. ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸ್ಥಳೀಯರ ಮೊಬೈಲ್‌ನಲ್ಲಿ ಹುಲಿ ಓಡಾಟದ ದೃಶ್ಯ ಸೆರೆಯಾಗಿದೆ. ಮತ್ತೊಂದೆಡೆ ಗಾಯಾಳು ವೀರಭದ್ರ ಭೋವಿ ಅವರನ್ನು ಶಾಸಕ ದರ್ಶನ್ ಧೃವನಾರಾಯಣ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಇದನ್ನೂ ಓದಿ: ಹಸು, ಕರುವಿನ ಮೇಲೆ ಹುಲಿ ದಾಳಿ; ಬಿಡಿಸಲು ಹೋದ ವ್ಯಕ್ತಿ ಮೇಲೂ ಎರಗಿದ ವ್ಯಾಘ್ರ

ಘಟನೆ ಹಿನ್ನೆಲೆ

ವೀರಭದ್ರ ಭೋವಿ ಎಂಬ ರೈತ ಬಂಡಿಪುರ ರಾಷ್ಟ್ರೀಯ ಉದ್ಯಾನವನದ ಸಮೀಪದ, ನಂಜನಗೂಡು ತಾಲೂಕಿನ ಮಹದೇವ ನಗರ ಗ್ರಾಮದ ಮತ್ತಿ ಮರದ ಜೇನುಕಟ್ಟೆಯ ಬಳಿ ದನ ಮೇಯಿಸುತ್ತಿದ್ದಾಗ ಹಸು ಹಾಗೂ ಕರುವಿನ ಮೇಲೆ ಹುಲಿ ದಾಳಿ ನಡೆಸಿತ್ತು. ಆಗ ಹಸುವನ್ನು ರಕ್ಷಿಸಲು ಮುಂದಾದ ವೀರಭದ್ರ ಮೇಲೂ ಹುಲಿ ದಾಳಿ ಮಾಡಿತ್ತು. ಸದ್ಯ ರೈತನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಮಹಾದೇವನಗರ ರೈತರು ಆಕ್ರೋಶ ಹೊರಹಾಕಿದ್ದಾರೆ. ಶಾಶ್ವತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ