AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ತಾಲೂಕಿನ ಬ್ಯಾತಳ್ಳಿ, ಕಡಕೊಳ ಸುತ್ತಮುತ್ತ ಹುಲಿಗಳು ಪ್ರತ್ಯಕ್ಷ, ಗ್ರಾಮಸ್ಥರಲ್ಲಿ ಆತಂಕ

ಮೈಸೂರು ಜಿಲ್ಲೆಯಲ್ಲಿ ಆಗ ಆಗ ಹುಲಿಗಳು ಪ್ರತ್ಯಕ್ಷವಾಗುತ್ತಿರುತ್ತವೆ. ಇದರಿಂದ ಜನರು ಭಯದಿಂದ ಜೀವನ ನಡೆಸುವಂತಾಗಿದೆ. ಇದೀಗ ಮತ್ತೆ ಮೈಸೂರು ತಾಲೂಕಿನ ಬ್ಯಾತಳ್ಳಿ, ಕಡಕೊಳ ಸುತ್ತಮುತ್ತಲಿನ ರೈತರ ಹೊಲದಲ್ಲಿ ಎರಡು ಹುಲಿಗಳು ಕಾಣಿಸಿಕೊಂಡಿವೆ.

ಮೈಸೂರಿನ ತಾಲೂಕಿನ ಬ್ಯಾತಳ್ಳಿ, ಕಡಕೊಳ ಸುತ್ತಮುತ್ತ ಹುಲಿಗಳು ಪ್ರತ್ಯಕ್ಷ, ಗ್ರಾಮಸ್ಥರಲ್ಲಿ ಆತಂಕ
ಬ್ಯಾತಳ್ಳಿ, ಕಡಕೊಳ ಗ್ರಾಮಗಳಲ್ಲಿ ಕಾಣಿಸಿಕೊಂಡ ಹುಲಿ
ರಾಮ್​, ಮೈಸೂರು
| Edited By: ವಿವೇಕ ಬಿರಾದಾರ|

Updated on:Nov 26, 2023 | 8:44 AM

Share

ಮೈಸೂರು ನ.26: ಮೈಸೂರು (Mysore) ತಾಲೂಕಿನ ಬ್ಯಾತಳ್ಳಿ, ಕಡಕೊಳ ಸುತ್ತಮುತ್ತಲಿನ ರೈತರ ಹೊಲದಲ್ಲಿ ಎರಡು ಹುಲಿಗಳು (Tigers) ಕಾಣಿಸಿಕೊಂಡಿದ್ದು ಮೊಬೈಲ್​ ಕ್ಯಾಮೆರಾದಲ್ಲಿ ಚಿತ್ರ ಸೆರೆಯಾಗಿದೆ. ಎರಡು ಹುಲಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದ್ದು, ಸ್ಥಳೀಯರು ಎಚ್ಚರಿಕೆಯಿಂದ ಇರುವಂತೆ ಸಂದೇಶ ರವಾನಿಸಲಾಗುತ್ತಿದೆ. ​

ಹುಲಿ ದಾಳಿಗೆ ಮಹಿಳೆ ಮೃತ: ಅಧಿಕಾರಿಗಳಿಗೆ ಶಾಸಕ ದರ್ಶನ್​​ ಕ್ಲಾಸ್​

ನಂಜನಗೂಡು ತಾಲೂಕಿನ ಬಳ್ಳೂರ್ ಹುಂಡಿಯಲ್ಲಿ ಹುಲಿ ದಾಳಿಗೆ ಮಹಿಳೆ ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡು ತಾಲೂಕಿನ ಬಳ್ಳೂರ್ ಹುಂಡಿ, ಮಹಾದೇವನಗರ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಧಿಕಾರಿ ಕುಮಾರ್ ಪುಷ್ಕರ್ ಜೊತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಭೆ ನಡೆಸಿದರು.

ಹಲವು ದಿನಗಳಿಂದ ನಿರಂತರವಾಗಿ ಹುಲಿ ದಾಳಿಯಾಗಿದೆ. ಅದೇ ಸ್ಥಳದಲ್ಲಿ ಮತ್ತೆ ಮತ್ತೆ ದಾಳಿಯಾಗುತ್ತಿದೆ. ಇಲಾಖೆಯ ಸಿಬ್ಬಂದಿಗಳು ನಿರ್ಲಕ್ಷ ವಹಿಸಿದ್ದೀರಿ ಎಂದು ಗ್ರಾಮಸ್ಥರ ಮುಂದೆ ಶಾಸಕ ದರ್ಶನ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಶಾಸಕರು ಬಿಸಿ ಮುಟ್ಟಿಸಿದ ಬಳಿಕ ಕಾರ್ಯಚರಣೆ ಚುರುಕುಗೊಂಡಿದೆ. ಹುಲಿ ಸೆರೆಗೆ ಇಲಾಖೆ ಈಗಾಗಲೇ 200 ಸಿಬ್ಬಂದಿಗಳು, 3 ಆನೆ ಬಳಸಿ ಬಂಡೀಪುರ ಅರಣ್ಯದ ಹೆಡಿಯಾಲ ವ್ಯಾಪ್ತಿಯಲ್ಲಿ ಕಾರ್ಯಚರಣೆ ನಡೆಸುತ್ತಿದೆ.

ಇದನ್ನೂ ಓದಿ: ಮೈಸೂರು: ನಂಜನಗೂಡಿನ ಬಳ್ಳೂರ್ ಹುಂಡಿಯಲ್ಲಿ ಹುಲಿ ದಾಳಿಗೆ ಮಹಿಳೆ ಬಲಿ

ಮನೆಯೊಂದರಲ್ಲಿ ಕಾಣಿಸಿಕೊಂಡ ಅಪರೂಪದ ಹಾವು

ನಗರದ ವಿಜಯನಗರ ಬಡಾವಣೆಯ ಮನೆಯೊಂದರಲ್ಲಿ ಕಾಣಿಸಿಕೊಂಡ ಅಪರೂಪದ ಬೆಂಗಾಲ್​​ ಕ್ರೈಟ್​​ ಹಾವು ಕಾಣಿಸಿಕೊಂಡಿದೆ. ಮಾಹಿತಿ ತಿಳಿದ ಕೂಡಲೇ ಉರಗ ತಜ್ಞ ಅರವಿಂದ್ ಸ್ಥಳಕ್ಕೆ ಆಗಮಿಸಿ ಹಾವು ರಕ್ಷಣೆ ಮಾಡಿ, ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ಈ ಹಾವು ಪಾಕಿಸ್ತಾನ, ಬಾಂಗ್ಲಾದೇಶದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:07 am, Sun, 26 November 23

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ