AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಬೆನ್ನು ನೋವಿನಿಂದ ಬೇಸತ್ತು ಎಎಸ್​ಐ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಕುಖ್ಯಾತ ಮನೆಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸೈಯದ್ ನದೀಂ ಹಾಗೂ ಅಜಂ ಖಾನ್ ಬಂಧಿತ ಆರೋಪಿಗಳು.

Crime News: ಬೆನ್ನು ನೋವಿನಿಂದ ಬೇಸತ್ತು ಎಎಸ್​ಐ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 04, 2022 | 3:03 PM

Share

ಮೈಸೂರು: ಬೆನ್ನು ನೋವಿನಿಂದ ಬೇಸತ್ತು ಎಎಸ್​ಐ ಪತ್ನಿ ನೇಣಿಗೆ (hang) ಶರಣಾಗಿರುವಂತಹ ಘಟನೆ ನಜರ್​ಬಾದ್ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಎಎಸ್​ಐ ಮಂಜೇಗೌಡ ಪತ್ನಿ ಜ್ಯೋತಿ(40) ಮೃತ ಮಹಿಳೆ. ಕೆಎಸ್​ಆರ್​ಪಿಯಲ್ಲಿ ಎಎಸ್​ಐ ಆಗಿರುವ ಮಂಜೇಗೌಡ, ದೇಹದ ತೂಕ ಹೆಚ್ಚಾದ ಕಾರಣ ತೀವ್ರ ಬೆನ್ನು ನೋವು ಉಂಟಾಗಿದ್ದು, ಚಿಕಿತ್ಸೆ ಪಡೆದಿದ್ದರೂ ಕಡಿಮೆಯಾಗಿರಲಿಲ್ಲ. ಹೀಗಾಗಿ ಬೇಸತ್ತು ಜ್ಯೋತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಜರ್​ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಪ್ರಯಾಣಿಕರ ಸೋಗಿನಲ್ಲಿ ಚಿನ್ನ ಸಾಗಟ ಮಾಡುತ್ತಿದ್ದ ಸ್ಮಗ್ಲರ್ಸ್ ಅರೆಸ್ಟ್​; 69.74 ಲಕ್ಷ ಮೌಲ್ಯದ ಚಿನ್ನ ಜಪ್ತಿ

ಕುಖ್ಯಾತ ಮನೆಗಳ್ಳರು ಅರೆಸ್ಟ್

ಬೆಂಗಳೂರು: ಕುಖ್ಯಾತ ಮನೆಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸೈಯದ್ ನದೀಂ ಹಾಗೂ ಅಜಂ ಖಾನ್ ಬಂಧಿತ ಆರೋಪಿಗಳು. ರಾತ್ರಿ ವೇಳೆ ಮನೆಗೆ ಹಾಕಿದ್ದ ಲಾಕ್ ಮುರಿದು ಆರೋಪಿಗಳು ಕಳವು ಮಾಡುತ್ತಿದ್ದರು. ಬಂಧಿತ ಆರೋಪಿಗಳು ಈ ಹಿಂದೆಯೂ ಕೃತ್ಯವೆಸಗಿ ಜೈಲಿಗೆ ಹೋಗಿದ್ದರು. ಕೆಜಿ ಹಳ್ಳಿ, ಆರ್​.ಟಿ ನಗರ, ಗೋವಿಂದಪುರ ಠಾಣಾ ವ್ಯಾಪ್ತಿಯಲ್ಲಿ ಕೈ ಚಳಕ ತೋರಿಸಿ ಅಂದರ್ ಆಗಿದ್ದರು. ಜೈಲಿಗೆ ಹೋಗಿ ಬಂದರು ಬುದ್ದಿ ಕಲಿಯದೆ ಮತ್ತೆ ಅದೇ ಕಾಯಕವನ್ನು ಮಾಡುತ್ತಿದ್ದರು. ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯವೆಸಗಿ ಮತ್ತೆ ಲಾಕ್​ ಆಗಿದ್ದು, ಬಂಧಿತರಿಂದ 4 ಲಕ್ಷ ಬೆಲೆಬಾಳುವ 92 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನು ಓದಿ: Crime News: ಬಾರ್​​ನಲ್ಲಿ ಬಿಲ್ ಕೊಡುವ ವಿಚಾರಕ್ಕೆ ಗಲಾಟೆ; ಓರ್ವನ ಕೊಲೆ

ಬ್ರೇಕ್ ಫೇಲ್ ಆಗಿ ರಸ್ತೆ ಪಕ್ಕದ ಗುಂಡಿಗೆ ಬಿದ್ದ ಸಾರಿಗೆ ಬಸ್​​

ಚಿಕ್ಕೋಡಿ: ಬ್ರೇಕ್ ಫೇಲ್ ಆಗಿ ರಸ್ತೆ ಪಕ್ಕದ ಗುಂಡಿಗೆ ಸಾರಿಗೆ ಬಸ್ ಬಿದ್ದಿರುವಂತಹ ಘಟನೆ ನಡೆದಿದ್ದು, ಸ್ವಲ್ಪದರಲ್ಲೇ ಭಾರಿ ಅನಾಹುತ ತಪ್ಪಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ಘಟನೆ ನಡೆದಿದೆ. ಅಥಣಿ ಘಟಕಕ್ಕೆ ಸೇರಿದ ಸಾರಿಗೆ ಬಸ್ ಇದಾಗಿದ್ದು, ಅಥಣಿಯಿಂದ ಸಾವಳಗಿ ಗ್ರಾಮಕ್ಕೆ ಹೋಗುತ್ತಿತ್ತು. 35ಕ್ಕೂ ಹೆಚ್ಚು ಜನ ಬಸ್​ನಲ್ಲಿ ಪ್ರಯಾಣಿಸುತ್ತಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಐಗಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?