AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tomato Price: ಮೈಸೂರು; ಬೆಲೆ ಸಿಗದ ಸಿಟ್ಟಲ್ಲಿ 40 ಟ್ರೇ ಟೊಮೆಟೊ ರಸ್ತೆಗೆ ಸುರಿದ ರೈತರು

ಕಷ್ಟಪಟ್ಟು ಬೆಳೆದ 40 ಟ್ರೇ ಟೊಮೆಟೊವನ್ನು ಇಲ್ಲಿವರೆಗೆ ತೆಗೆದುಕೊಂಡು ಬಂದಿದ್ದೇವೆ. ಇಲ್ಲಿ ಉತ್ತಮ ಬೆಲೆ ದೊರೆಯುತ್ತಿಲ್ಲ. ವಾಪಸ್ ತೆಗೆದುಕೊಂಡು ಹೋಗಲು ನಮ್ಮ ಬಳಿ ದುಡ್ಡಿಲ್ಲ ಎಂದು ರೈತರು ಹೇಳಿದ್ದಾರೆ.

TV9 Web
| Edited By: |

Updated on:Feb 22, 2023 | 9:31 AM

Share

ಮೈಸೂರು: ಬೆಳೆದ ಬೆಲೆಗೆ ಸೂಕ್ತ ಬೆಲೆ (Tomato Price) ಸಿಗದ ಸಿಟ್ಟಿನಲ್ಲಿ ರೈತರು (Farmers) 40 ಟ್ರೇ ಟೊಮೆಟೊವನ್ನು (Tomato) ರಸ್ತೆಗೆ ಸುರಿದ ಘಟನೆ ಹುಣಸೂರು ಎಪಿಎಂಸಿ ಆವರಣದಲ್ಲಿ ನಡೆದಿದೆ. ಹುಣಸೂರು ತಾಲ್ಲೂಕು ರಾಮಪಟ್ಟಣದಿಂದ ಎಪಿಎಂಸಿಗೆ (Hunsur APMC) ಟೊಮೆಟೊ ಮಾರಾಟ ಮಾಡಲು ರೈತರು ಬಂದಿದ್ದರು. ಸುಮಾರು 1 ಎಕರೆ ಪ್ರದೇಶದಲ್ಲಿ 1 ಲಕ್ಷ ರೂ. ವೆಚ್ಚದಲ್ಲಿ 3 ತಿಂಗಳುಗಳಿಂದ ಕೃಷಿ ಮಾಡಲಾಗಿತ್ತು. ಉತ್ತಮ ಇಳುವರಿಯೂ ಬಂದಿತ್ತು. ಆದರೆ ಸೂಕ್ತ ಬೆಲೆ ಸಿಗದೆ ನಷ್ಟವಾಗಿದೆ ಎಂದು ರೈತರು ಅಳಲುತೋಡಿಕೊಂಡಿದ್ದಾರೆ.

ಮಧ್ಯವರ್ತಿಗಳಿಂದಾಗಿ ಬೆಲೆ ಸಮಸ್ಯೆ ಸೃಷ್ಟಿಯಾಗಿದೆ. ಟೊಮೆಟೊಗೆ ಉತ್ತಮ ಬೆಲೆ ಇದ್ದರೂ ಕಡಿಮೆ ಬೆಲೆ ನೀಡಿ ಅನ್ಯಾಯ ಎಸಗುತ್ತಿದ್ದಾರೆ. ಈ ಕುರಿತು ಅಧಿಕಾರಿಗಳಿಗೆ ದೂರು ನೀಡಿದ್ದೆವು. ಆದರೆ, ಕ್ರಮ ಕೈಗೊಂಡಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಷ್ಟಪಟ್ಟು ಬೆಳೆದ 40 ಟ್ರೇ ಟೊಮೆಟೊವನ್ನು ಇಲ್ಲಿವರೆಗೆ ತೆಗೆದುಕೊಂಡು ಬಂದಿದ್ದೇವೆ. ಇಲ್ಲಿ ಉತ್ತಮ ಬೆಲೆ ದೊರೆಯುತ್ತಿಲ್ಲ. ವಾಪಸ್ ತೆಗೆದುಕೊಂಡು ಹೋಗಲು ನಮ್ಮ ಬಳಿ ದುಡ್ಡಿಲ್ಲ ಎಂದು ರೈತರು ಹೇಳಿದ್ದಾರೆ. ಜತೆಗೆ, ಟೊಮೆಟೊವನ್ನು ರಸ್ತೆಗೆ ಸುರಿದು ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:42 am, Wed, 22 February 23

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ