AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tomato Price: ಮೈಸೂರು; ಬೆಲೆ ಸಿಗದ ಸಿಟ್ಟಲ್ಲಿ 40 ಟ್ರೇ ಟೊಮೆಟೊ ರಸ್ತೆಗೆ ಸುರಿದ ರೈತರು

ಕಷ್ಟಪಟ್ಟು ಬೆಳೆದ 40 ಟ್ರೇ ಟೊಮೆಟೊವನ್ನು ಇಲ್ಲಿವರೆಗೆ ತೆಗೆದುಕೊಂಡು ಬಂದಿದ್ದೇವೆ. ಇಲ್ಲಿ ಉತ್ತಮ ಬೆಲೆ ದೊರೆಯುತ್ತಿಲ್ಲ. ವಾಪಸ್ ತೆಗೆದುಕೊಂಡು ಹೋಗಲು ನಮ್ಮ ಬಳಿ ದುಡ್ಡಿಲ್ಲ ಎಂದು ರೈತರು ಹೇಳಿದ್ದಾರೆ.

TV9 Web
| Updated By: Ganapathi Sharma|

Updated on:Feb 22, 2023 | 9:31 AM

Share

ಮೈಸೂರು: ಬೆಳೆದ ಬೆಲೆಗೆ ಸೂಕ್ತ ಬೆಲೆ (Tomato Price) ಸಿಗದ ಸಿಟ್ಟಿನಲ್ಲಿ ರೈತರು (Farmers) 40 ಟ್ರೇ ಟೊಮೆಟೊವನ್ನು (Tomato) ರಸ್ತೆಗೆ ಸುರಿದ ಘಟನೆ ಹುಣಸೂರು ಎಪಿಎಂಸಿ ಆವರಣದಲ್ಲಿ ನಡೆದಿದೆ. ಹುಣಸೂರು ತಾಲ್ಲೂಕು ರಾಮಪಟ್ಟಣದಿಂದ ಎಪಿಎಂಸಿಗೆ (Hunsur APMC) ಟೊಮೆಟೊ ಮಾರಾಟ ಮಾಡಲು ರೈತರು ಬಂದಿದ್ದರು. ಸುಮಾರು 1 ಎಕರೆ ಪ್ರದೇಶದಲ್ಲಿ 1 ಲಕ್ಷ ರೂ. ವೆಚ್ಚದಲ್ಲಿ 3 ತಿಂಗಳುಗಳಿಂದ ಕೃಷಿ ಮಾಡಲಾಗಿತ್ತು. ಉತ್ತಮ ಇಳುವರಿಯೂ ಬಂದಿತ್ತು. ಆದರೆ ಸೂಕ್ತ ಬೆಲೆ ಸಿಗದೆ ನಷ್ಟವಾಗಿದೆ ಎಂದು ರೈತರು ಅಳಲುತೋಡಿಕೊಂಡಿದ್ದಾರೆ.

ಮಧ್ಯವರ್ತಿಗಳಿಂದಾಗಿ ಬೆಲೆ ಸಮಸ್ಯೆ ಸೃಷ್ಟಿಯಾಗಿದೆ. ಟೊಮೆಟೊಗೆ ಉತ್ತಮ ಬೆಲೆ ಇದ್ದರೂ ಕಡಿಮೆ ಬೆಲೆ ನೀಡಿ ಅನ್ಯಾಯ ಎಸಗುತ್ತಿದ್ದಾರೆ. ಈ ಕುರಿತು ಅಧಿಕಾರಿಗಳಿಗೆ ದೂರು ನೀಡಿದ್ದೆವು. ಆದರೆ, ಕ್ರಮ ಕೈಗೊಂಡಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಷ್ಟಪಟ್ಟು ಬೆಳೆದ 40 ಟ್ರೇ ಟೊಮೆಟೊವನ್ನು ಇಲ್ಲಿವರೆಗೆ ತೆಗೆದುಕೊಂಡು ಬಂದಿದ್ದೇವೆ. ಇಲ್ಲಿ ಉತ್ತಮ ಬೆಲೆ ದೊರೆಯುತ್ತಿಲ್ಲ. ವಾಪಸ್ ತೆಗೆದುಕೊಂಡು ಹೋಗಲು ನಮ್ಮ ಬಳಿ ದುಡ್ಡಿಲ್ಲ ಎಂದು ರೈತರು ಹೇಳಿದ್ದಾರೆ. ಜತೆಗೆ, ಟೊಮೆಟೊವನ್ನು ರಸ್ತೆಗೆ ಸುರಿದು ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:42 am, Wed, 22 February 23

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು