AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tomato Price: ಮೈಸೂರು; ಬೆಲೆ ಸಿಗದ ಸಿಟ್ಟಲ್ಲಿ 40 ಟ್ರೇ ಟೊಮೆಟೊ ರಸ್ತೆಗೆ ಸುರಿದ ರೈತರು

ಕಷ್ಟಪಟ್ಟು ಬೆಳೆದ 40 ಟ್ರೇ ಟೊಮೆಟೊವನ್ನು ಇಲ್ಲಿವರೆಗೆ ತೆಗೆದುಕೊಂಡು ಬಂದಿದ್ದೇವೆ. ಇಲ್ಲಿ ಉತ್ತಮ ಬೆಲೆ ದೊರೆಯುತ್ತಿಲ್ಲ. ವಾಪಸ್ ತೆಗೆದುಕೊಂಡು ಹೋಗಲು ನಮ್ಮ ಬಳಿ ದುಡ್ಡಿಲ್ಲ ಎಂದು ರೈತರು ಹೇಳಿದ್ದಾರೆ.

TV9 Web
| Edited By: |

Updated on:Feb 22, 2023 | 9:31 AM

Share

ಮೈಸೂರು: ಬೆಳೆದ ಬೆಲೆಗೆ ಸೂಕ್ತ ಬೆಲೆ (Tomato Price) ಸಿಗದ ಸಿಟ್ಟಿನಲ್ಲಿ ರೈತರು (Farmers) 40 ಟ್ರೇ ಟೊಮೆಟೊವನ್ನು (Tomato) ರಸ್ತೆಗೆ ಸುರಿದ ಘಟನೆ ಹುಣಸೂರು ಎಪಿಎಂಸಿ ಆವರಣದಲ್ಲಿ ನಡೆದಿದೆ. ಹುಣಸೂರು ತಾಲ್ಲೂಕು ರಾಮಪಟ್ಟಣದಿಂದ ಎಪಿಎಂಸಿಗೆ (Hunsur APMC) ಟೊಮೆಟೊ ಮಾರಾಟ ಮಾಡಲು ರೈತರು ಬಂದಿದ್ದರು. ಸುಮಾರು 1 ಎಕರೆ ಪ್ರದೇಶದಲ್ಲಿ 1 ಲಕ್ಷ ರೂ. ವೆಚ್ಚದಲ್ಲಿ 3 ತಿಂಗಳುಗಳಿಂದ ಕೃಷಿ ಮಾಡಲಾಗಿತ್ತು. ಉತ್ತಮ ಇಳುವರಿಯೂ ಬಂದಿತ್ತು. ಆದರೆ ಸೂಕ್ತ ಬೆಲೆ ಸಿಗದೆ ನಷ್ಟವಾಗಿದೆ ಎಂದು ರೈತರು ಅಳಲುತೋಡಿಕೊಂಡಿದ್ದಾರೆ.

ಮಧ್ಯವರ್ತಿಗಳಿಂದಾಗಿ ಬೆಲೆ ಸಮಸ್ಯೆ ಸೃಷ್ಟಿಯಾಗಿದೆ. ಟೊಮೆಟೊಗೆ ಉತ್ತಮ ಬೆಲೆ ಇದ್ದರೂ ಕಡಿಮೆ ಬೆಲೆ ನೀಡಿ ಅನ್ಯಾಯ ಎಸಗುತ್ತಿದ್ದಾರೆ. ಈ ಕುರಿತು ಅಧಿಕಾರಿಗಳಿಗೆ ದೂರು ನೀಡಿದ್ದೆವು. ಆದರೆ, ಕ್ರಮ ಕೈಗೊಂಡಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಷ್ಟಪಟ್ಟು ಬೆಳೆದ 40 ಟ್ರೇ ಟೊಮೆಟೊವನ್ನು ಇಲ್ಲಿವರೆಗೆ ತೆಗೆದುಕೊಂಡು ಬಂದಿದ್ದೇವೆ. ಇಲ್ಲಿ ಉತ್ತಮ ಬೆಲೆ ದೊರೆಯುತ್ತಿಲ್ಲ. ವಾಪಸ್ ತೆಗೆದುಕೊಂಡು ಹೋಗಲು ನಮ್ಮ ಬಳಿ ದುಡ್ಡಿಲ್ಲ ಎಂದು ರೈತರು ಹೇಳಿದ್ದಾರೆ. ಜತೆಗೆ, ಟೊಮೆಟೊವನ್ನು ರಸ್ತೆಗೆ ಸುರಿದು ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:42 am, Wed, 22 February 23

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ