AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Dasara 2023: ಮೈಸೂರು ದಸರಾ ಪುಷ್ಪ ಪ್ರದರ್ಶನದಲ್ಲಿ ಬರೋಬ್ಬರಿ 85,000 ಹೂದಾನಿಗಳು

ಮೈಸೂರಿನ ಕುಪ್ಪಣ್ಣ ಪಾರ್ಕ್, ಗಾರ್ಡನ್ ಪಾರ್ಕ್, ಜಲದರ್ಶಿನಿ ಅತಿಥಿ ಗೃಹ, ಸರ್ಕಾರಿ ಅತಿಥಿ ಗೃಹ, ದಸರಾ ವಸ್ತುಪ್ರದರ್ಶನ ಮೈದಾನ ಮತ್ತು ಕರ್ಜನ್ ಪಾರ್ಕ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಈ ಹೂವಿನ ಕುಂಡಗಳನ್ನು ಪೋಷಿಸಲಾಗಿದೆ. ಮೈಸೂರಿನಿಂದ 50,000 ಕುಂಡಗಳನ್ನು ಪ್ರದರ್ಶಿಸುವ ಗುರಿ ಹೊಂದಿದ್ದು, 10,000 ಕುಂಡಗಳನ್ನು ಮೀಸಲಿಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Mysore Dasara 2023: ಮೈಸೂರು ದಸರಾ ಪುಷ್ಪ ಪ್ರದರ್ಶನದಲ್ಲಿ ಬರೋಬ್ಬರಿ 85,000 ಹೂದಾನಿಗಳು
ಸಂಗ್ರಹ ಚಿತ್ರ
Ganapathi Sharma
|

Updated on: Sep 05, 2023 | 4:27 PM

Share

ಮೈಸೂರು, ಸೆಪ್ಟೆಂಬರ್ 5: ಮೈಸೂರು ದಸರಾ ಮಹೋತ್ಸವದ (Mysore Dasara 2023) ಈ ವರ್ಷದ ಪುಷ್ಪ ಪ್ರದರ್ಶನದಲ್ಲಿ (Flower Show) ವೈವಿಧ್ಯಮಯ ಹೂವುಗಳು ಮತ್ತು ಅಲಂಕಾರಿಕ ಸಸ್ಯಗಳು ಇರಲಿದ್ದು ಭಿನ್ನವಾಗಿ ಮತ್ತು ಆಕರ್ಷಕವಾಗಿರಲಿದೆ. ಈ ವರ್ಷ ಪುಷ್ಪ ಪ್ರದರ್ಶನದಲ್ಲಿ ಬರೋಬ್ಬರಿ 85,000 ಹೂದಾನಿಗಳು ಇರಲಿವೆ ಎಂದು ಮೂಲಗಳು ತಿಳಿಸಿವೆ. ಪುಷ್ಪ ಪ್ರದರ್ಶನದ ಈ ವರ್ಷದ ಆವೃತ್ತಿಗಾಗಿ, ನಾಲ್ಕು ಸಂಭಾವ್ಯ ವಿಷಯಗಳನ್ನು ಪರಿಗಣಿಸಲಾಗಿದೆ. ಅವುಗಳೆಂದರೆ; ವಿವೇಕಾನಂದ ಪ್ರತಿಮೆ, ವಿಧಾನ ಸೌಧ, ಮೈಸೂರು ಅರಮನೆ ಮತ್ತು ಭಾರತದ ಚಂದ್ರಯಾನ-3 ಮಿಷನ್. ಆದಾಗ್ಯೂ, ಈ ಥೀಮ್ ಅನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ ಎನ್ನಲಾಗಿದೆ.

ಸದ್ಯದಲ್ಲೇ ಥೀಮ್ ಅಂತಿಮಗೊಳಿಸಿ, ಪುಷ್ಪ ಪ್ರದರ್ಶನಕ್ಕೆ ಸಿದ್ಧತೆ ಆರಂಭಿಸಲಾಗುವುದು ಎಂದು ತೋಟಗಾರಿಕಾ ಇಲಾಖೆಯ ಮೂಲಗಳು ತಿಳಿಸಿವೆ.

ಈ ವರ್ಷ ತೋಟಗಾರಿಕಾ ಇಲಾಖೆಯು 60 ಸಾವಿರಕ್ಕೂ ಹೆಚ್ಚು ಹೂವಿನ ಕುಂಡಗಳನ್ನು ಬೆಳೆಸಿದ್ದು, ಪುಣೆ, ಊಟಿ ಮತ್ತು ಕೋಲ್ಕತ್ತಾದಿಂದ ಹೆಚ್ಚುವರಿಯಾಗಿ 35,000 ಕುಂಡಗಳನ್ನು ತರಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೈಸೂರಿನ ಕುಪ್ಪಣ್ಣ ಪಾರ್ಕ್, ಗಾರ್ಡನ್ ಪಾರ್ಕ್, ಜಲದರ್ಶಿನಿ ಅತಿಥಿ ಗೃಹ, ಸರ್ಕಾರಿ ಅತಿಥಿ ಗೃಹ, ದಸರಾ ವಸ್ತುಪ್ರದರ್ಶನ ಮೈದಾನ ಮತ್ತು ಕರ್ಜನ್ ಪಾರ್ಕ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಈ ಹೂವಿನ ಕುಂಡಗಳನ್ನು ಪೋಷಿಸಲಾಗಿದೆ. ಮೈಸೂರಿನಿಂದ 50,000 ಕುಂಡಗಳನ್ನು ಪ್ರದರ್ಶಿಸುವ ಗುರಿ ಹೊಂದಿದ್ದು, 10,000 ಕುಂಡಗಳನ್ನು ಮೀಸಲಿಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಮೈಸೂರು ದಸರಾ 2023: ಸೆ.5 ರಂದು ಅಭಿಜಿತ್​​​​​​ ಲಗ್ನದಲ್ಲಿ ಗಜಪಡೆಗೆ ಅದ್ಧೂರಿ ಸ್ವಾಗತ

ಇದಲ್ಲದೆ, ಪ್ರಾಥಮಿಕವಾಗಿ ಹೈಬ್ರಿಡ್ ಪ್ರಭೇದಗಳನ್ನು ಒಳಗೊಂಡಿರುವ 35,000 ಕ್ಕೂ ಹೆಚ್ಚು ಹೂವಿನ ಕುಂಡಗಳನ್ನು ಪುಣೆ, ಕೋಲ್ಕತ್ತಾ ಮತ್ತು ಊಟಿಯ ಖಾಸಗಿ ನರ್ಸರಿಗಳಿಂದ ಖರೀದಿಸಲಾಗುತ್ತದೆ. ಪ್ರದರ್ಶನದ ಅತ್ಯಂತ ಸಾಂಪ್ರದಾಯಿಕ ಆಕರ್ಷಣೆಗಳಲ್ಲಿ ಒಂದಾದ ಹೂವಿನ ಕಾರ್ಪೆಟ್, ಅಲ್ಲಿ ನುರಿತ ಕುಶಲಕರ್ಮಿಗಳು ಮತ್ತು ತೋಟಗಾರಿಕಾ ತಜ್ಞರು ಸಾವಿರಾರು ವರ್ಣರಂಜಿತ ಹೂವುಗಳನ್ನು ಬಳಸಿಕೊಂಡು ನೆಲದ ಮೇಲೆ ಸಂಕೀರ್ಣವಾದ ಮಾದರಿಗಳು ಮತ್ತು ವಿನ್ಯಾಸಗಳನ್ನು ರಚಿಸಲಿದ್ದಾರೆ.

ಪ್ರದರ್ಶನದಲ್ಲಿರುವ ವೈವಿಧ್ಯಮಯ ಹೂವುಗಳಲ್ಲಿ ಆಫ್ರಿಕನ್ ಮಾರಿಗೋಲ್ಡ್ ಹಳದಿ, ಆರ್ಕಿಡ್‌ಗಳು, ಸೆಲೋಸಿಯಾ, ಕಾರ್ನೇಷನ್, ಆಂಥೂರಿಯಂ, ಜರ್ಬೆರಾ, ರೋಸಸ್, ಕಾಸ್ಮೊಸ್, ಬ್ಲೂ ಡೈಸಿ, ಕ್ರೈಸಾಂಥೆಮಮ್, ಕಾಕ್ಸ್‌ಕಾಂಬ್, ಕೊಚಿಯಾ, ಫ್ಲೋಕ್ಸ್, ಕ್ರೈಸಾಂಥೆಮಮ್, ಪಿಂಗ್ ಪಾಂಗ್, ಪೆಟುನಿಯಾ, ಟೊರೆನಿಯಾ, ಡ್ರಾಕಾನಾ ಮತ್ತು ಜಿನ್ನಿಯಾ ಕೂಡ ಒಳಗೊಂಡಿರಲಿವೆ. ಥೀಮ್ ಅಂತಿಮಗೊಂಡ ನಂತರ ಸಿದ್ಧತೆ ಭರದಿಂದ ಸಾಗಲಿವೆ ಎಂದು ಮೂಲಗಳು ಹೇಳಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ