AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tourism: ಮೈಸೂರು: ವೀಕೆಂಡ್ ಕರ್ಫ್ಯೂ ತೆರವಾದರೂ ಪ್ರವಾಸಿ ತಾಣಗಳಿಗೆ ಬಾರದ ಪ್ರವಾಸಿಗರು

Mysore Palace: ವೀಕೆಂಡ್ ಕರ್ಪ್ಯೂ ಮುಕ್ತವಾದರೂ ಪ್ರವಾಸಿ ತಾಣಗಳಲ್ಲಿ ಜನರು ಕಾಣಿಸುತ್ತಿಲ್ಲ. ಕಳೆದ ವಾರ ವೀಕೆಂಡ್ ಕರ್ಪ್ಯೂ ಇದ್ದ ಕಾರಣ ಪ್ರವಾಸಿ ತಾಣಗಳಿಗೆ ಜನರು ಬಂದಿರಲಿಲ್ಲ.

Tourism: ಮೈಸೂರು: ವೀಕೆಂಡ್ ಕರ್ಫ್ಯೂ ತೆರವಾದರೂ ಪ್ರವಾಸಿ ತಾಣಗಳಿಗೆ ಬಾರದ ಪ್ರವಾಸಿಗರು
ಮೈಸೂರು ಅರಮನೆ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 23, 2022 | 5:46 PM

ಮೈಸೂರು: ಕರ್ನಾಟಕದಲ್ಲಿ ವಾರಾಂತ್ಯ ಕರ್ಫ್ಯೂ (Weekend Curfew) ತೆರವಾಗಿದೆ. ಆದರೂ ರಾಜ್ಯದ ಪ್ರವಾಸಿ ತಾಣಗಳತ್ತ ಜನರು ಸುಳಿಯುತ್ತಿಲ್ಲ. ಬಹುತೇಕ ಪ್ರವಾಸಿ ತಾಣಗಳು ಬಣಗುಡುತ್ತಿವೆ. ಸಾಮಾನ್ಯವಾಗಿ ಜನಸಂದಣಿ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿದ್ದ ಮೈಸೂರು ಅರಮನೆ (Mysore Palace) ಸುತ್ತಮುತ್ತಲೂ ಜನರು ಸುಳಿಯುತ್ತಿಲ್ಲ. ವೀಕೆಂಡ್ ಕರ್ಪ್ಯೂ ಮುಕ್ತವಾದರೂ ಪ್ರವಾಸಿ ತಾಣಗಳಲ್ಲಿ (Tourist Destination) ಜನರು ಕಾಣಿಸುತ್ತಿಲ್ಲ. ಕಳೆದ ವಾರ ವೀಕೆಂಡ್ ಕರ್ಪ್ಯೂ ಇದ್ದ ಕಾರಣ ಪ್ರವಾಸಿ ತಾಣಗಳಿಗೆ ಜನರು ಬಂದಿರಲಿಲ್ಲ. ಈ ವಾರವೂ ಅದೇ ಪರಿಸ್ಥಿತಿ ಮುಂದುವರಿದಿದೆ. ಕೋವಿಡ್ ಲಸಿಕೆ ಹಾಕಿದವರಿಗೆ ಮಾತ್ರ ಮೈಸೂರು ಅರಮನೆಗೆ ಪ್ರವೇಶ ನೀಡಲಾಗಿದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡೇ ಅರಮನೆಯನ್ನು ವೀಕ್ಷಿಸಬೇಕೆಂದು ಪೊಲೀಸರು ನಿಯಮ ಮಾಡಿದ್ದಾರೆ. ಮುಖ್ಯದ್ವಾರದ ಬಳಿ ಪೊಲೀಸರು ಎಲ್ಲ ಪ್ರವಾಸಿಗರನ್ನು ಪರಿಶೀಲಿಸಿಯೇ ಒಳಗೆ ಬಿಡುತ್ತಿದ್ದಾರೆ.

ಕಾಡೆಮ್ಮೆ ಬೇಟೆಗೆ ಹುಲಿ ಯತ್ನ: ಕ್ಯಾಮೆರಾದಲ್ಲಿ ಸೆರೆಯಾಯ್ತು ಅಪರೂಪದ ದೃಶ್ಯ ಹುಲಿಯೊಂದು ಕಾಡೆಮ್ಮೆ ಬೇಟೆಗೆ ಯತ್ನಿಸುವ ಅಪರೂಪದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೈಸೂರಿನ ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದ್ದು, ಹುಣಸೂರು ಅರಣ್ಯದಲ್ಲಿ ಸಫಾರಿಗೆ ಹೋಗಿದ್ದ ಪ್ರವಾಸಿಗರ ಕಣ್ಣಿಗೆ ಬಿದ್ದಿದೆ. ನೀರು ಕುಡಿಯುತ್ತಿದ್ದ ಕಾಡೆಮ್ಮೆ ಮೇಲೆ ಹುಲಿ ಅಚಾನಕ್ ದಾಳಿ ಮಾಡಿತು. ಹುಲಿ ಹತ್ತಿರಕ್ಕೆ ಬಂದಿದ್ದು ಅರಿತ ತಕ್ಷಣ ಕಾಡೆಮ್ಮಿ ಅಲ್ಲಿಂದ ಓಡಿ ಹೋಯಿತು. ಹುಲಿ ದಾಳಿ ದೃಶ್ಯಗಳನ್ನು ಪ್ರವಾಸಿಗರು ಖುಷಿಯಿಂದ ಸೆರೆ ಹಿಡಿದಿದ್ದಾರೆ.

ಅರಣ್ಯಾಧಿಕಾರಿಗಳಿಂದ ಚಿರತೆ ರಕ್ಷಣೆ ನಂಜನಗೂಡು ತಾಲೂಕಿನ ಜಾಲಹಳ್ಳಿ ಗ್ರಾಮದ ಬಳಿ ಸೋಲಾರ್ ತಂತಿಗೆ ಸಿಲುಕಿ ರಾತ್ರಿಯಿಡೀ ನರಳಾಡಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ. ಚಿರತೆಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಅರಣ್ಯಕ್ಕೆ ಬಿಡಲು ಉದ್ದೇಶಿಸಲಾಗಿದೆ. ಹೆಡಿಯಾಲ ವಲಯದ ಎಸಿಎಫ್ ರವಿಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಬಾಳೆತೋಟಕ್ಕೆ ಕಾಡುಪ್ರಾಣಿಗಳ ದಾಳಿಯಿಂದ ರಕ್ಷಿಸಲು ಅಳವಡಿಸಿದ್ದ ಸೋಲಾರ್ ತಂತಿಬೇಲಿಗೆ ಚಿರತೆಯ ಬಲಗಾಲು ಸಿಲುಕಿತ್ತು. ಚಿರತೆಗೆ ಅರವಳಿಕೆ ಚುಚ್ಚುಮದ್ದು ನೀಡಿ ರಕ್ಷಿಣೆ ಮಾಡಲಾಗಿದೆ.

ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ
ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ
ಕಾರು ಚಲಾಯಿಸುವಾಗ ನಿದ್ರೆಗೆ ಜಾರಿದ ಟೆಕ್ಕಿ, ನಡೆಯಿತು ಭಯಾನಕ ಘಟನೆ
ಕಾರು ಚಲಾಯಿಸುವಾಗ ನಿದ್ರೆಗೆ ಜಾರಿದ ಟೆಕ್ಕಿ, ನಡೆಯಿತು ಭಯಾನಕ ಘಟನೆ
ಗ್ಯಾಂಗ್​​ಸ್ಟರ್ ಜಗ್ಗು ಭಗವಾನ್​ಪುರಿಯಾ ತಾಯಿಯ ಗುಂಡಿಕ್ಕಿ ಹತ್ಯೆ
ಗ್ಯಾಂಗ್​​ಸ್ಟರ್ ಜಗ್ಗು ಭಗವಾನ್​ಪುರಿಯಾ ತಾಯಿಯ ಗುಂಡಿಕ್ಕಿ ಹತ್ಯೆ
ಆಷಾಢ ಮೊದಲ ಶುಕ್ರವಾರ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ
ಆಷಾಢ ಮೊದಲ ಶುಕ್ರವಾರ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ
ಜಮ್ಮು ಕಾಶ್ಮೀರದ ಪ್ರವಾಸಿ ರೆಸಾರ್ಟ್​ ಬಳಿ ಕರಡಿ ಪ್ರತ್ಯಕ್ಷ, ಹೆಚ್ಚಿದ ಆತಂಕ
ಜಮ್ಮು ಕಾಶ್ಮೀರದ ಪ್ರವಾಸಿ ರೆಸಾರ್ಟ್​ ಬಳಿ ಕರಡಿ ಪ್ರತ್ಯಕ್ಷ, ಹೆಚ್ಚಿದ ಆತಂಕ
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ
ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ
ಗುಜರಾತ್​​ನಲ್ಲಿ ಭಾರೀ ಪ್ರವಾಹ; ಭಾಗಶಃ ಮುಳುಗಿದ ತಡಕೇಶ್ವರ ಮಹಾದೇವ ದೇವಾಲಯ
ಗುಜರಾತ್​​ನಲ್ಲಿ ಭಾರೀ ಪ್ರವಾಹ; ಭಾಗಶಃ ಮುಳುಗಿದ ತಡಕೇಶ್ವರ ಮಹಾದೇವ ದೇವಾಲಯ
‘ಕಾಲವೇ ಮೋಸಗಾರ’ ಚಿತ್ರಕ್ಕಾಗಿ ವಿದ್ಯಾರ್ಥಿಗಳ ಬಳಿ ತೆರಳಿದ ಭರತ್ ಸಾಗರ್
‘ಕಾಲವೇ ಮೋಸಗಾರ’ ಚಿತ್ರಕ್ಕಾಗಿ ವಿದ್ಯಾರ್ಥಿಗಳ ಬಳಿ ತೆರಳಿದ ಭರತ್ ಸಾಗರ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್