AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಜಿ20 ‘ಥಿಂಕ್ 20’ ಸಭೆ ಆರಂಭ; ಆಗಸ್ಟ್ 1, 2ರಂದು ಅರಮನೆ ಪ್ರವೇಶಕ್ಕೆ ಪ್ರವಾಸಿಗರಿಗಿಲ್ಲ ಎಂಟ್ರಿ

ಆಗಸ್ಟ್ 1ರ ಮಧ್ಯಾಹ್ನ 2.30ರಿಂದ ಅರಮನೆಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಆಗಸ್ಟ್ 2ರಂದು ರಾತ್ರಿ 7 ರಿಂದ 8 ಗಂಟೆಯ ವರೆಗೆ ಧ್ವನಿ ಮತ್ತು ಬೆಳಕಿನ ಕಾರ್ಯಕ್ರಮ ಆಯೋಜಿಸಲಾಗಿದೆ. ಇದಕ್ಕೂ ಪ್ರವಾಸಿಗರಿಗೆ ಪ್ರವೇಶಾವಕಾಶ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೈಸೂರಿನಲ್ಲಿ ಜಿ20 ‘ಥಿಂಕ್ 20’ ಸಭೆ ಆರಂಭ; ಆಗಸ್ಟ್ 1, 2ರಂದು ಅರಮನೆ ಪ್ರವೇಶಕ್ಕೆ ಪ್ರವಾಸಿಗರಿಗಿಲ್ಲ ಎಂಟ್ರಿ
ಮೈಸೂರು ಅರಮನೆಯ ಸಂಗ್ರಹ ಚಿತ್ರ
ಗಣಪತಿ ಶರ್ಮಾ
|

Updated on:Jul 31, 2023 | 8:51 PM

Share

ಬೆಂಗಳೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜಿ20 (G20 Summit) ಸದಸ್ಯರಾಷ್ಟ್ರಗಳ ‘ಥಿಂಕ್ 20 (Think20)’ ಶೃಂಗಸಭೆ ಸೋಮವಾರ ಆರಂಭಗೊಂಡಿದೆ. ಸದಸ್ಯ ರಾಷ್ಟ್ರಗಳ ಗಣ್ಯ ಪ್ರತಿನಿಧಿಗಳು ಮೈಸೂರಿಗೆ ಆಗಮಿಸಿದ್ದಾರೆ. ಶೃಂಗಸಭೆಯ ಪ್ರಯುಕ್ತ ಗಣ್ಯರು ಮೈಸೂರು ಅರಮನೆಗೆ ಭೇಟಿ ನೀಡಲಿದ್ದಾರೆ. ಹೀಗಾಗಿ ಆಗಸ್ಟ್ 1 ಮತ್ತು 2ರಂದು ಮೈಸೂರು ಅರಮನೆಗೆ (Mysuru Palace) ಪ್ರವಾಸಿಗರ ಭೇಟಿಗೆ ನಿರ್ಬಂಧ ಹೇರಿ ಅಲ್ಲಿನ ಆಡಳಿತ ಮಂಡಿ ಅಧಿಸೂಚನೆ ಹೊರಡಿಸಿದೆ. ಈ ಕುರಿತು ಆಡಳಿತ ಮಂಡಳಿಯ ಉಪ ನಿರ್ದೇಶಕ ಟಿಎಸ್ ಸುಬ್ರಹ್ಮಣ್ಯ ಅವರು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.

ಆಗಸ್ಟ್ 1ರ ಮಧ್ಯಾಹ್ನ 2.30ರಿಂದ ಅರಮನೆಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಆಗಸ್ಟ್ 2ರಂದು ರಾತ್ರಿ 7 ರಿಂದ 8 ಗಂಟೆಯ ವರೆಗೆ ಧ್ವನಿ ಮತ್ತು ಬೆಳಕಿನ ಕಾರ್ಯಕ್ರಮ ಆಯೋಜಿಸಲಾಗಿದೆ. ಇದಕ್ಕೂ ಪ್ರವಾಸಿಗರಿಗೆ ಪ್ರವೇಶಾವಕಾಶ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಜಿ20 ಶೃಂಗಸಭೆ ಒಟ್ಟು 43 ರಾಷ್ಟ್ರಗಳ ಗಣ್ಯರು ಆಗಮಿಸಿದ್ದು, ರ‍್ಯಾಡಿಸನ್ ಬ್ಲೂ ಗ್ರ್ಯಾಂಡ್ ಮರ್ಕ್ಯೂರಿ ಹೋಟೆಲ್‌ನಲ್ಲಿ‌ ಅವರಿಗೆ ವಾಸ್ತವ್ಯದ ವ್ಯವಸ್ಥೆ ಕಲ್ಪಿಸಲಾಗಿದೆ. ಜುಲೈ 31 ರಿಂದ ಆಗಸ್ಟ್ 2 ರವರೆಗೆ ಮೂರು ದಿನಗಳ ಕಾಲ ಥಿಂಕ್20 ಶೃಂಗಸಭೆ ನಡೆಯುತ್ತಿದೆ.

ಈ ಸಭೆಯಲ್ಲಿ ಏಳು ‘ಥಿಂಕ್ 20’ ಕಾರ್ಯಪಡೆಗಳ ಸದಸ್ಯರು ಮತ್ತು ಪ್ರಪಂಚದಾದ್ಯಂತದ ನೀತಿ ತಜ್ಞರು ಭಾಗವಹಿಸುತ್ತಿದ್ದಾರೆ. ಸುಸ್ಥಿರ ಅಭಿವೃದ್ಧಿಗಾಗಿ ಜೀವನಶೈಲಿ, ಸ್ಥೂಲ ಆರ್ಥಿಕತೆ ಮತ್ತು ವ್ಯಾಪಾರ, ಮಹಿಳಾ ನೇತೃತ್ವದ ಅಭಿವೃದ್ಧಿ, ಡಿಜಿಟಲ್ ರೂಪಾಂತರ, ಹಸಿರು ಪರಿವರ್ತನೆ ಮತ್ತು ಜಾಗತಿಕ ಹಣಕಾಸು ಕ್ರಮದಂತಹ ಸಮಸ್ಯೆಗಳು ಸೇರಿದಂತೆ ಭಾರತದ ಜಿ20 ಅಧ್ಯಕ್ಷತೆಯ ಆದ್ಯತೆಗಳ ಕುರಿತ ಕಲ್ಪನೆಗಳು ಮತ್ತು ಒಳನೋಟಗಳ ಕುರಿತು ವಿಸ್ತೃತ ಚರ್ಚೆ ಸಭೆಯಲ್ಲಿ ನಡೆಯಲಿದೆ.

ಇದನ್ನೂ ಓದಿ: ಇಂದಿನಿಂದ ಮೈಸೂರಿನಲ್ಲಿ 3 ದಿನ ಜಿ20 ಶೃಂಗಸಭೆ: ಪ್ರವಾಸಿಗರು ಮೈಸೂರು ಟ್ರಿಪ್​ ಬದಲಾವಣೆ ಮಾಡಿಕೊಂಡ್ರೆ ಒಳಿತು

ಗಣ್ಯರಿಗೆ ಮೈಸೂರಿನ ಪ್ರಸಿದ್ಧ ಪ್ರವಾಸಿ ತಾಣಗಳ ಭೇಟಿಗೂ ಅವಕಾಶ ಮಾಡಿಕೊಡಲಾಗಿದೆ. ಆ ಮೂಲಕ ಪ್ರವಾಸೋದ್ಯಮದ ಉತ್ತೇಜನಕ್ಕೂ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಮೈಸೂರಿನ ಇನ್ನಷ್ಟು ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:50 pm, Mon, 31 July 23

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು