AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ವಿಡಿಯೋ ಕಾಲ್ ಮಾಡಿ ಹೆಂಡತಿ ಜೊತೆ ಮಾತನಾಡುತ್ತಿದ್ದ ವ್ಯಕ್ತಿಯ ಮೇಲೆ ರೈಲು ಹರಿದು ಸಾವು

ವಿಡಿಯೋ ಕಾಲ್ ಮಾಡಿ ತನ್ನ ಹೆಂಡತಿ ಜೊತೆ ಮಾತನಾಡುತ್ತ ರೈಲು ಹಳಿಗಳ ಮೇಲೆ ಓಡಾಡುತ್ತಿದ್ದ ವ್ಯಕ್ತಿ ಮೇಲೆ ರೈಲು ಹರಿದಿದ್ದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿ ಬಿಹಾರ ಮೂಲದ ಕಾರ್ಮಿಕ ಎಂದು ತಿಳಿದು ಬಂದಿದೆ. ಮೃತದೇಹವನ್ನು ಎಂಎಂಸಿಆರ್‌ಐ ಶವಾಗಾರಕ್ಕೆ ರವಾನಿಸಲಾಗಿದೆ.

ಮೈಸೂರು: ವಿಡಿಯೋ ಕಾಲ್ ಮಾಡಿ ಹೆಂಡತಿ ಜೊತೆ ಮಾತನಾಡುತ್ತಿದ್ದ ವ್ಯಕ್ತಿಯ ಮೇಲೆ ರೈಲು ಹರಿದು ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Mar 06, 2024 | 11:13 AM

ಮೈಸೂರು, ಮಾರ್ಚ್​.06: ನಂಜನಗೂಡಿನ ಕವಲಂದೆ ಬಳಿ ಮಂಗಳವಾರ ಮುಂಜಾನೆ ರೈಲಿಗೆ ಸಿಲುಕಿ ಬಿಹಾರ ಮೂಲದ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ (Death). ರೈಲ್ವೆ ಪೊಲೀಸರ ಪ್ರಕಾರ, ಮೃತರನ್ನು ಬಿಹಾರ ಮೂಲದ ಮನು ಕುಮಾರ್ (27) ಎಂದು ಗುರುತಿಸಲಾಗಿದ್ದು, ಬೆಳಗ್ಗೆ 8 ಗಂಟೆ ಸುಮಾರಿಗೆ ಚಾಮರಾಜನಗರದಿಂದ ಬರುತ್ತಿದ್ದ ರೈಲಿಗೆ ಸಿಲುಕಿ ಕಾರ್ಮಿಕ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ.

ದುರಂತ ಸಂಭವಿಸಿದಾಗ ಮನು ವೀಡಿಯೊ ಕಾಲ್​ನಲ್ಲಿದ್ದ. ತನ್ನ ಹೆಂಡತಿಗೆ ವಿಡಿಯೋ ಕಾಲ್ ಮಾಡಿ ಮಾತನಾಡುತ್ತ ರೈಲ್ವೆ ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗುತ್ತಿದ್ದ. ಈ ವೇಳೆ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಮಗು ನಂಜನಗೂಡಿನಲ್ಲಿ ಬಡಗಿಗಳಿಗೆ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಮೃತದೇಹವನ್ನು ಎಂಎಂಸಿಆರ್‌ಐ ಶವಾಗಾರಕ್ಕೆ ರವಾನಿಸಲಾಗಿದೆ.

ಜಾರ್ಖಂಡ್‌ನಲ್ಲಿ ರೈಲು ಅಪಘಾತಕ್ಕೆ ಇಬ್ಬರ ಸಾವು

ಜಾರ್ಖಂಡ್‌ನ ಜಮ್ತಾರಾ ಜಿಲ್ಲೆಯಲ್ಲಿ ರೈಲಿಗೆ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಗಿದ ಬಳಿಕ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಮೃತ ಪ್ರಯಾಣಿಕನನ್ನು ಬಿಹಾರದ ಕತಿಹಾರ್ ಜಿಲ್ಲೆಯ ಮನೀಶ್ ಕುಮಾರ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ದೇಶದ ಮೊದಲ ನೀರೊಳಗಿನ ಮೆಟ್ರೋಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಚಾಲಕನ ನಿಯಂತ್ರಣ ತಪ್ಪಿ ಟಾಟಾಸುಮೋ ಪಲ್ಟಿ, ಓರ್ವ ಸಾವು

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ನಿಡಘಟ್ಟಬಳಿಯ ಬೆಂ-ಮೈ ಎಕ್ಸ್​​ಪ್ರೆಸ್​​​ ವೇನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಸುಮೋ ಪಲ್ಟಿಯಾಗಿದ್ದು ಸ್ಥಳದಲ್ಲಿ ಫೈರೋಜ್(36) ಎಂಬ ವ್ಯಕ್ತಿ ಪ್ರಾಣ ಕಳೆದುಕೊಂಡಿದ್ದಾರೆ. ಬೆಂಗಳೂರಿನಿಂದ ಮೈಸೂರುಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ನಿವಾಸಿ ಫೈರೋಜ್​ನ ಸಹೋದರ ಅಪ್ರೋಜ್​ಗೆ ಮಿಮ್ಸ್​​ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮದ್ದೂರು ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಂತಿದ್ದ ಲಾರಿಗೆ ಮತ್ತೊಂದು ಮೈನಿಂಗ್ ಲಾರಿ ಡಿಕ್ಕಿ

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತುಮಟಿ ತಾಂಡಾ ಬಳಿ ನಿಂತಿದ್ದ ಲಾರಿಗೆ ಮೈನಿಂಗ್​​ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಲಾರಿ ನಜ್ಜುಗುಜ್ಜಾಗಿದೆ.  ಗಾಯಗೊಂಡ ಡ್ರೈವರ್​ನನ್ನ ಟ್ಯಾಕ್ಟರ್ ಮೂಲಕ​​ ಹೊರ ತೆಗೆಯಲಾಗಿದೆ. ಜನಾರ್ದನರೆಡ್ಡಿ ಪತ್ನಿ ಲಕ್ಷ್ಮೀ ಗಾಯಾಳುವಿನ ಯೋಗಕ್ಷೇಮ ವಿಚಾರಿಸಿದರು.  ತೋರಣಗಲ್​ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?