AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 ವರದಿ ಬಳಿಕ ಎಚ್ಚೆತ್ತ ಜಿಲ್ಲಾಡಳಿತ, ರೌಡಿ ಶೀಟರ್​ಗೆ ನೀಡಿದ್ದ ರಾಜ್ಯೋತ್ಸವ ಪ್ರಶಸ್ತಿ ವಾಪಸ್

ಕಾಂಗ್ರೆಸ್ ಮುಖಂಡ, ಸಿಎಂ ಹಾಗೂ ಡಿಸಿಎಂ ಜೊತೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ಎಂಬ ಕಾರಣಕ್ಕೆ ಸಾಮಾಜ ಸೇವೆ ಹೆಸರಲ್ಲಿ ಮೈಸೂರು ಜಿಲ್ಲಾಡಳಿತ ರೌಡಿಶೀಟರ್​ ಅಶೋಕ್ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಶಸ್ತಿ ನೀಡಿ ಗೌರವಿಸಿತ್ತು. ಆದರೆ ಅಶೋಕ್ ರೌಡಿಶೀಟರ್​ ಎಂದು ಟಿವಿ9 ವರದಿ ಬಳಿಕ ಪ್ರಶಸ್ತಿ ಹಿಂಪಡೆಯಲು ಜಿಲ್ಲಾಡಳಿತ ಮುಂದಾಗಿದೆ.

TV9 ವರದಿ ಬಳಿಕ ಎಚ್ಚೆತ್ತ ಜಿಲ್ಲಾಡಳಿತ, ರೌಡಿ ಶೀಟರ್​ಗೆ ನೀಡಿದ್ದ ರಾಜ್ಯೋತ್ಸವ ಪ್ರಶಸ್ತಿ ವಾಪಸ್
ಕಾಂಗ್ರೆಸ್ ಮುಖಂಡ, ರೌಡಿ ಶೀಟರ್ ಅಶೋಕ್
ದಿಲೀಪ್​, ಚೌಡಹಳ್ಳಿ
| Edited By: |

Updated on:Nov 22, 2023 | 8:04 AM

Share

ಮೈಸೂರು, ನ.22: ರೌಡಿ ಶೀಟರ್​ಗೆ ರಾಜ್ಯೋತ್ಸವ ಪ್ರಶಸ್ತಿ (Kannada Rajyotsava Award) ನೀಡಿರುವ ವಿಚಾರಕ್ಕೆ ಸಂಬಂಧಿಸಿ ಇದೀಗಾ ಪ್ರಶಸ್ತಿಯನ್ನು ವಾಪಸ್ಸು ಪಡೆಯಲು ಮೈಸೂರು ಜಿಲ್ಲಾಡಳಿತ‌ (Mysuru District Administration) ಮುಂದಾಗಿದೆ. ಮೈಸೂರಿನ ಲಷ್ಕರ್ ಠಾಣೆಯಲ್ಲಿ ರೌಡಿ ಶೀಟರ್ ಆಗಿರುವ ಅಶೋಕ್ ಅವರು ಕಾಂಗ್ರೆಸ್ ಮುಖಂಡ ಎಂಬ ಕಾರಣಕ್ಕೆ ನವೆಂಬರ್1 ರಂದು ಮೈಸೂರು ಜಿಲ್ಲಾಡಳಿತ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು. ಈ ಬಗ್ಗೆ ಟಿವಿ9 ವರದಿ ಮಾಡುತ್ತಿದ್ದಂತೆ ಇದೀಗಾ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಪ್ರಶಸ್ತಿಯನ್ನ ವಾಪಸ್ಸು ಪಡೆಯಲು ಮುಂದಾಗಿದೆ.

ರಾಜ್ಯೋತ್ಸವ ಪ್ರಶಸ್ತಿಯನ್ನು ಹಿಂಪಡೆಯಲಾಗುತ್ತೆ ಎಂದು ಕನ್ನಡ ಮತ್ತು ಸಂಸ್ಕೃತಿ‌ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನ್ ಅವರು ಟಿವಿ9ಗೆ ಮಾಹಿತಿ ನೀಡಿದ್ದಾರೆ. ಕೊನೆ ಕ್ಷಣದಲ್ಲಿ ಪ್ರಶಸ್ತಿಗೆ ಹೆಸರು ಸೇರ್ಪಡೆಯಾಗಿತ್ತು‌. ಪೊಲೀಸರಿಂದ ಆತನ ಹಿನ್ನೆಲೆ, ಮಾಹಿತಿ ಪಡೆಯಲು ತಡವಾಯಿತು. ಇದೀಗಾ ಆತ ರೌಡಿ ಶೀಟರ್ ಎಂಬುದು ತಿಳಿದು ಬಂದಿದೆ. ಈ ಕಾರಣದಿಂದ ರೌಡಿ ಶೀಟರ್ ಅಶೋಕ್​ಗೆ ನೀಡಲಾಗಿದ್ದ ಪ್ರಶಸ್ತಿಯನ್ನ ವಾಪಸ್ಸು ಪಡೆಯಲಾಗುತ್ತೆ‌ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರೌಡಿ‌ ಶೀಟರ್​ಗೆ ಸಿಕ್ತು ರಾಜ್ಯೋತ್ಸವ ಪ್ರಶಸ್ತಿ; ಕುತೂಹಲ ಸೃಷ್ಟಿಸಿದ ಮೈಸೂರು ಜಿಲ್ಲಾಡಳಿತದ ನಿರ್ಧಾರ

ಘಟನೆ ಹಿನ್ನೆಲೆ

ಮೈಸೂರಿನ ಲಷ್ಕರ್ ಠಾಣೆಯಲ್ಲಿ ರೌಡಿ ಶೀಟರ್ ಆಗಿರುವ ಅಶೋಕ್ ನೇವಲ್​ಗೆ ನವೆಂಬರ್1 ರಂದು ಮೈಸೂರು ಜಿಲ್ಲಾಡಳಿತ ರಾಜ್ಯೋತ್ಸವ ಪ್ರಶಸ್ತಿಕೊಟ್ಟು ಗೌರವಿಸಿತ್ತು. ಆದರೆ ಇತ್ತೀಚೆಗೆ ನಡೆದ ಮಗನ ಪುಂಡಾಟದಿಂದಾಗಿ ಅಶೋಕ್ ಅವರ ಹಿನ್ನೆಲೆ ಬಹಿರಂಗವಾಗಿತ್ತು. ಅಶೋಕ್ ಸಿಎಂ ಹಾಗೂ ಡಿಸಿಎಂ ಹಿಂಬಾಲಕರಾಗಿದ್ದಾರೆ. ಸಿಎಂ, ಡಿಸಿಎಂ ಮೈಸೂರಿಗೆ ಬಂದ್ರೆ ಸಾಕು ಅಶೋಕ್ ಹಿಂದೆ ಓಡಾಡುತ್ತಿರುತ್ತಾನೆ.‌ ಮೊನ್ನೆ ಕೂಡ ಸಿಎಂ ಮೈಸೂರಿಗೆ ಬಂದಿದ್ದ ವೇಳೆ ಪೊಲೀಸರು ಕೊಡುವ ಗೌರವ ವಂದನ ಸ್ಥಳದಲ್ಲೂ ಸಿಎಂ ಪಕ್ಕದಲ್ಲೆ‌ ನಿಂತಿದ್ದರು. ಅಲ್ಲದೆ ಕಾಂಗ್ರೆಸ್​ನ ಮುಖಂಡಾರು ಆಗಿದ್ದಾರೆ. ಇವರ ಮಗ ನೇವಲ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿದ್ದಾರೆ.ಇತ್ತೀಚೆಗೆ ನಡೆದ ನೇವಲ್ ಪುಂಡಾಡದಿಂದಾಗಿ ತಂದೆಯ ಅನೇಕ ವಿಚಾರಗಳು ಬಹಿರಂಗವಾಗಿದೆ.

ಇನ್ನು ಅಶೋಕ್ ಗೆ ಮೈಸೂರು ಜಿಲ್ಲಾಡಳಿತ ಕೊಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನ ಹೇಗೆ ಕೊಟ್ಟರು ಅನ್ನೋ ಪ್ರಶ್ನೆ ಹಲವರನ್ನು ಕಾಡಿತ್ತು. ಸಣ್ಣಪುಟ್ಟ ಪ್ರಕರಣ ಇದ್ದರು ಅಂತವರಿಗೆ ಪ್ರಶಸ್ತಿಗಳನ್ನ ನಿರಾಕರಣೆ ಮಾಡಲಾಗಿದೆ. ಆದ್ರೆ ರೌಡಿ ಶೀಟರ್ ಆಗಿದ್ರು ಜಿಲ್ಲಾಡಳಿತ ಹೇಗೆ ಪ್ರಶಸ್ತಿ ಕೊಟ್ಟಿದೆ, ಕಾಂಗ್ರೆಸ್ ಮುಖಂಡ, ಸಿಎಂ, ಡಿಸಿಎಂ ಪರಿಚಯಸ್ಥ ಅನ್ನೋ ಕಾರಣಕ್ಕೆ ಕೊಡಲಾಯಿತ ಎಂಬ ಬಗ್ಗೆ ಚರ್ಚೆಗಳು ಶುರುವಾಗಿದ್ದವು. ಸದ್ಯ ಈಗ ಇದೆಲ್ಲದನ್ನೂ ತೆರೆ ಬಿದ್ದಿದ್ದು, ಪ್ರಶಸ್ತಿಯನ್ನು ಹಿಂಪಡೆಯುವುದಾಗಿ ಜಿಲ್ಲಾಡಳಿತ ತಿಳಿಸಿದೆ.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:02 am, Wed, 22 November 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್