AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 ವರದಿ ಬಳಿಕ ಎಚ್ಚೆತ್ತ ಜಿಲ್ಲಾಡಳಿತ, ರೌಡಿ ಶೀಟರ್​ಗೆ ನೀಡಿದ್ದ ರಾಜ್ಯೋತ್ಸವ ಪ್ರಶಸ್ತಿ ವಾಪಸ್

ಕಾಂಗ್ರೆಸ್ ಮುಖಂಡ, ಸಿಎಂ ಹಾಗೂ ಡಿಸಿಎಂ ಜೊತೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ಎಂಬ ಕಾರಣಕ್ಕೆ ಸಾಮಾಜ ಸೇವೆ ಹೆಸರಲ್ಲಿ ಮೈಸೂರು ಜಿಲ್ಲಾಡಳಿತ ರೌಡಿಶೀಟರ್​ ಅಶೋಕ್ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಶಸ್ತಿ ನೀಡಿ ಗೌರವಿಸಿತ್ತು. ಆದರೆ ಅಶೋಕ್ ರೌಡಿಶೀಟರ್​ ಎಂದು ಟಿವಿ9 ವರದಿ ಬಳಿಕ ಪ್ರಶಸ್ತಿ ಹಿಂಪಡೆಯಲು ಜಿಲ್ಲಾಡಳಿತ ಮುಂದಾಗಿದೆ.

TV9 ವರದಿ ಬಳಿಕ ಎಚ್ಚೆತ್ತ ಜಿಲ್ಲಾಡಳಿತ, ರೌಡಿ ಶೀಟರ್​ಗೆ ನೀಡಿದ್ದ ರಾಜ್ಯೋತ್ಸವ ಪ್ರಶಸ್ತಿ ವಾಪಸ್
ಕಾಂಗ್ರೆಸ್ ಮುಖಂಡ, ರೌಡಿ ಶೀಟರ್ ಅಶೋಕ್
ದಿಲೀಪ್​, ಚೌಡಹಳ್ಳಿ
| Edited By: |

Updated on:Nov 22, 2023 | 8:04 AM

Share

ಮೈಸೂರು, ನ.22: ರೌಡಿ ಶೀಟರ್​ಗೆ ರಾಜ್ಯೋತ್ಸವ ಪ್ರಶಸ್ತಿ (Kannada Rajyotsava Award) ನೀಡಿರುವ ವಿಚಾರಕ್ಕೆ ಸಂಬಂಧಿಸಿ ಇದೀಗಾ ಪ್ರಶಸ್ತಿಯನ್ನು ವಾಪಸ್ಸು ಪಡೆಯಲು ಮೈಸೂರು ಜಿಲ್ಲಾಡಳಿತ‌ (Mysuru District Administration) ಮುಂದಾಗಿದೆ. ಮೈಸೂರಿನ ಲಷ್ಕರ್ ಠಾಣೆಯಲ್ಲಿ ರೌಡಿ ಶೀಟರ್ ಆಗಿರುವ ಅಶೋಕ್ ಅವರು ಕಾಂಗ್ರೆಸ್ ಮುಖಂಡ ಎಂಬ ಕಾರಣಕ್ಕೆ ನವೆಂಬರ್1 ರಂದು ಮೈಸೂರು ಜಿಲ್ಲಾಡಳಿತ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು. ಈ ಬಗ್ಗೆ ಟಿವಿ9 ವರದಿ ಮಾಡುತ್ತಿದ್ದಂತೆ ಇದೀಗಾ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಪ್ರಶಸ್ತಿಯನ್ನ ವಾಪಸ್ಸು ಪಡೆಯಲು ಮುಂದಾಗಿದೆ.

ರಾಜ್ಯೋತ್ಸವ ಪ್ರಶಸ್ತಿಯನ್ನು ಹಿಂಪಡೆಯಲಾಗುತ್ತೆ ಎಂದು ಕನ್ನಡ ಮತ್ತು ಸಂಸ್ಕೃತಿ‌ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನ್ ಅವರು ಟಿವಿ9ಗೆ ಮಾಹಿತಿ ನೀಡಿದ್ದಾರೆ. ಕೊನೆ ಕ್ಷಣದಲ್ಲಿ ಪ್ರಶಸ್ತಿಗೆ ಹೆಸರು ಸೇರ್ಪಡೆಯಾಗಿತ್ತು‌. ಪೊಲೀಸರಿಂದ ಆತನ ಹಿನ್ನೆಲೆ, ಮಾಹಿತಿ ಪಡೆಯಲು ತಡವಾಯಿತು. ಇದೀಗಾ ಆತ ರೌಡಿ ಶೀಟರ್ ಎಂಬುದು ತಿಳಿದು ಬಂದಿದೆ. ಈ ಕಾರಣದಿಂದ ರೌಡಿ ಶೀಟರ್ ಅಶೋಕ್​ಗೆ ನೀಡಲಾಗಿದ್ದ ಪ್ರಶಸ್ತಿಯನ್ನ ವಾಪಸ್ಸು ಪಡೆಯಲಾಗುತ್ತೆ‌ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರೌಡಿ‌ ಶೀಟರ್​ಗೆ ಸಿಕ್ತು ರಾಜ್ಯೋತ್ಸವ ಪ್ರಶಸ್ತಿ; ಕುತೂಹಲ ಸೃಷ್ಟಿಸಿದ ಮೈಸೂರು ಜಿಲ್ಲಾಡಳಿತದ ನಿರ್ಧಾರ

ಘಟನೆ ಹಿನ್ನೆಲೆ

ಮೈಸೂರಿನ ಲಷ್ಕರ್ ಠಾಣೆಯಲ್ಲಿ ರೌಡಿ ಶೀಟರ್ ಆಗಿರುವ ಅಶೋಕ್ ನೇವಲ್​ಗೆ ನವೆಂಬರ್1 ರಂದು ಮೈಸೂರು ಜಿಲ್ಲಾಡಳಿತ ರಾಜ್ಯೋತ್ಸವ ಪ್ರಶಸ್ತಿಕೊಟ್ಟು ಗೌರವಿಸಿತ್ತು. ಆದರೆ ಇತ್ತೀಚೆಗೆ ನಡೆದ ಮಗನ ಪುಂಡಾಟದಿಂದಾಗಿ ಅಶೋಕ್ ಅವರ ಹಿನ್ನೆಲೆ ಬಹಿರಂಗವಾಗಿತ್ತು. ಅಶೋಕ್ ಸಿಎಂ ಹಾಗೂ ಡಿಸಿಎಂ ಹಿಂಬಾಲಕರಾಗಿದ್ದಾರೆ. ಸಿಎಂ, ಡಿಸಿಎಂ ಮೈಸೂರಿಗೆ ಬಂದ್ರೆ ಸಾಕು ಅಶೋಕ್ ಹಿಂದೆ ಓಡಾಡುತ್ತಿರುತ್ತಾನೆ.‌ ಮೊನ್ನೆ ಕೂಡ ಸಿಎಂ ಮೈಸೂರಿಗೆ ಬಂದಿದ್ದ ವೇಳೆ ಪೊಲೀಸರು ಕೊಡುವ ಗೌರವ ವಂದನ ಸ್ಥಳದಲ್ಲೂ ಸಿಎಂ ಪಕ್ಕದಲ್ಲೆ‌ ನಿಂತಿದ್ದರು. ಅಲ್ಲದೆ ಕಾಂಗ್ರೆಸ್​ನ ಮುಖಂಡಾರು ಆಗಿದ್ದಾರೆ. ಇವರ ಮಗ ನೇವಲ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿದ್ದಾರೆ.ಇತ್ತೀಚೆಗೆ ನಡೆದ ನೇವಲ್ ಪುಂಡಾಡದಿಂದಾಗಿ ತಂದೆಯ ಅನೇಕ ವಿಚಾರಗಳು ಬಹಿರಂಗವಾಗಿದೆ.

ಇನ್ನು ಅಶೋಕ್ ಗೆ ಮೈಸೂರು ಜಿಲ್ಲಾಡಳಿತ ಕೊಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನ ಹೇಗೆ ಕೊಟ್ಟರು ಅನ್ನೋ ಪ್ರಶ್ನೆ ಹಲವರನ್ನು ಕಾಡಿತ್ತು. ಸಣ್ಣಪುಟ್ಟ ಪ್ರಕರಣ ಇದ್ದರು ಅಂತವರಿಗೆ ಪ್ರಶಸ್ತಿಗಳನ್ನ ನಿರಾಕರಣೆ ಮಾಡಲಾಗಿದೆ. ಆದ್ರೆ ರೌಡಿ ಶೀಟರ್ ಆಗಿದ್ರು ಜಿಲ್ಲಾಡಳಿತ ಹೇಗೆ ಪ್ರಶಸ್ತಿ ಕೊಟ್ಟಿದೆ, ಕಾಂಗ್ರೆಸ್ ಮುಖಂಡ, ಸಿಎಂ, ಡಿಸಿಎಂ ಪರಿಚಯಸ್ಥ ಅನ್ನೋ ಕಾರಣಕ್ಕೆ ಕೊಡಲಾಯಿತ ಎಂಬ ಬಗ್ಗೆ ಚರ್ಚೆಗಳು ಶುರುವಾಗಿದ್ದವು. ಸದ್ಯ ಈಗ ಇದೆಲ್ಲದನ್ನೂ ತೆರೆ ಬಿದ್ದಿದ್ದು, ಪ್ರಶಸ್ತಿಯನ್ನು ಹಿಂಪಡೆಯುವುದಾಗಿ ಜಿಲ್ಲಾಡಳಿತ ತಿಳಿಸಿದೆ.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:02 am, Wed, 22 November 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?