AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ವಿಚಾರದಲ್ಲಿ ಸಿದ್ದರಾಮಯ್ಯ ನಿಂದಿಸಲು ಹೋಗಿ ನೆಟ್ಟಿಗರ ಬಾಯಿಗೆ ಆಹಾರವಾದ ಚಕ್ರವರ್ತಿ ಸೂಲಿಬೆಲೆ

ಕಾವೇರಿ ಹೋರಾಟದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ನಿಂದಿಸಿ ಎಕ್ಸ್​ನಲ್ಲಿ (ಟ್ವಿಟ್ಟರ್) ಚಕ್ರವರ್ತಿ ಸೂಲಿಬೆಲೆ ಅವರು ಹಾಕಿದ್ದ ಪೋಸ್ಟ್ ಈಗ ಅವರಿಗೆಯೇ ತಿರುಗು ಬಾಣವಾಗಿದೆ. ಸೂಲಿಬೆಲೆ ಅವರನ್ನು ಬೆಂಬಲಿಸುತ್ತಿದ್ದ ಅವರ ಅಭಿಮಾನಿಗಳೇ ಅವರ ವಿರುದ್ಧ ತಿರುಗಿಬಿದ್ದಿದ್ದಾರೆ.

ಕಾವೇರಿ ವಿಚಾರದಲ್ಲಿ ಸಿದ್ದರಾಮಯ್ಯ ನಿಂದಿಸಲು ಹೋಗಿ ನೆಟ್ಟಿಗರ ಬಾಯಿಗೆ ಆಹಾರವಾದ ಚಕ್ರವರ್ತಿ ಸೂಲಿಬೆಲೆ
ಚಕ್ರವರ್ತಿ ಸೂಲಿಬೆಲೆ, ಸಿಎಂ ಸಿದ್ದರಾಮಯ್ಯ
ರಾಮ್​, ಮೈಸೂರು
| Updated By: ಆಯೇಷಾ ಬಾನು|

Updated on: Sep 27, 2023 | 8:53 AM

Share

ಮೈಸೂರು, ಸೆ.27: ಸಿಎಂ ಸಿದ್ದರಾಮಯ್ಯರನ್ನು ನಿಂದಿಸಿ ಚಕ್ರವರ್ತಿ ಸೂಲಿಬೆಲೆ (chakravarthy sulibele) ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ರಾಜ್ಯದಲ್ಲಿ ಕಾವೇರಿ ಕಿಚ್ಚು ಭುಗಿಲೆದ್ದಿದೆ. ರಾಜಕಾರಣ, ದ್ವೇಷ ಮರೆತು ಎಲ್ಲರೂ ಒಂದಾಗಿ ಕಾವೇರಿ ನೀರನ್ನು ಉಳಿಸಿಕೊಳ್ಳಬೇಕು ಎಂಬ ಕೂಗು ಕೇಳಿ ಬರುತ್ತಿದೆ. ಆದರೆ ಕಾವೇರಿ ಹೋರಾಟದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯನವರನ್ನು (siddaramaiah) ನಿಂದಿಸಿ ಎಕ್ಸ್​ನಲ್ಲಿ (ಟ್ವಿಟ್ಟರ್) ಚಕ್ರವರ್ತಿ ಸೂಲಿಬೆಲೆ ಅವರು ಹಾಕಿದ್ದ ಪೋಸ್ಟ್ ಈಗ ಅವರಿಗೆಯೇ ತಿರುಗು ಬಾಣವಾಗಿದೆ. ಸೂಲಿಬೆಲೆ ಅವರನ್ನು ಬೆಂಬಲಿಸುತ್ತಿದ್ದ ಅವರ ಅಭಿಮಾನಿಗಳೇ ಅವರ ವಿರುದ್ಧ ತಿರುಗಿಬಿದ್ದಿದ್ದಾರೆ.

‘ಸಿದ್ರಾಮ’ ಹೆಸರನ್ನು ಹಿಂಬದಿಯಿಂದ ಓದಿದರೆ ಗೊತ್ತಾಗುತ್ತೆ ಸಿದ್ದರಾಮಯ್ಯ ಯಾಕೆ ತಮಿಳುನಾಡಿಗೆ ನೀರು ಬಿಟ್ಟರು ಎಂದು ಚಕ್ರವರ್ತಿ ಸೂಲಿಬೆಲೆ ಅವರು ಟ್ವೀಟ್ ಮಾಡಿದ್ದಾರೆ. ಸಿದ್ರಾಮ ಎಂಬುದನ್ನು ಹಿಂಬದಿಯಿಂದ ಓದಿದರೆ ಮದ್ರಾಸಿ ಎಂಬಂತಾಗುತ್ತದೆ ಎಂದು ಪೋಸ್ಟ್ ಹಾಕಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಬೇಸರ ವ್ಯಕ್ತಪಡಿಸಿದ್ದು ಹಿಗ್ಗಾಮಗ್ಗಾ ಜಾಡಿಸಿದ್ದಾರೆ. ಸೂಲಿಬೆಲೆ ಟ್ವೀಟ್​ಗೆ ಹಲವರು ಆಕ್ರೋಶಗೊಂಡಿದ್ದಾರೆ.

ಸೂಲಿಬೆಲೆ ಅವರಿಗೆ ನೆಟ್ಟಿಗರ ಪ್ರಶ್ನೆ

ನೀವಾದ್ರೂ ಲ್ಯಾಪ್ ಟಾಪ್ ಕನೆಕ್ಟ್ ಮಾಡಿ ಮೋದಿಗೆ ಹೇಳಿ ಕರ್ನಾಟಕ ನೀರನ್ನು ಉಳಿಸಿ ಎಂದು. ಈ ತರ ಚೀಪ್ ಪೋಸ್ಟ್ ಮಾಡಬೇಡಿ, ನಿಮ್ಮ ಘನತೆಯನ್ನು ಕಾಪಾಡಿಕೊಳ್ಳಿ ಎಂದು ನೆಟ್ಟಿಗರು ಸಲಹೆ ಕೊಟ್ಟಿದ್ದಾರೆ. ಹಾಗೂ ಕಾವೇರಿ ಹೋರಾಟಕ್ಕೆ ನಿನ್ನ ಬೆಂಬಲ ಎಂದು ಒಂದಾದರು ಪೋಸ್ಟ್ ಮಾಡಿಲ್ವಲ್ಲೋ ಮಾರಾಯ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಜಗತ್ತಿನ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಶಕ್ತಿಯಿರುವ ವಿಶ್ವಗುರುವಿಗೆ ಕಾವೇರಿ ಸಮಸ್ಯೆಯೇಕೆ ಕಾಣುತ್ತಿಲ್ಲಾ? ನಿಮ್ಮ ಪಕ್ಷದ ತೇಜಸ್ವಿ ಸೂರ್ಯ, ಪ್ರತಾಪ್ ಸಿಂಹ, ಪ್ರಲ್ಹಾದ್ ಜೋಶಿ, BL ಸಂತೋಶ್ ರವರುಗಳು ಏಕೆ ಕಾವೇರಿ ವಿಚಾರವಾಗಿ ಮೌನ ತಾಳಿದ್ದಾರೆ? ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ