AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore News: ವೀಲಿಂಗ್ ಶೋಕಿಗಾಗಿ ಬೈಕ್​ ಕಳ್ಳತನ; ಇಬ್ಬರ ಬಂಧನ

ವೀಲಿಂಗ್ ಶೋಕಿಗಾಗಿ ಬೈಕ್​ಗಳ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕುವೆಂಪು ನಗರ ಪೊಲೀಸರ ಬಂಧಿಸಿದ್ದಾರೆ. ಧನುಷ್(19), ನಿತಿನ್(19)ಬಂಧಿತ ಆರೋಪಿಗಳು.

Mysore News: ವೀಲಿಂಗ್ ಶೋಕಿಗಾಗಿ ಬೈಕ್​ ಕಳ್ಳತನ; ಇಬ್ಬರ ಬಂಧನ
ಮೈಸೂರಿನಲ್ಲಿ ಬೈಕ್​ ಕಳ್ಳತನ ಮಾಡುತ್ತಿದ್ದವರ ಬಂಧನ
ರಾಮ್​, ಮೈಸೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on:Aug 04, 2023 | 7:42 AM

Share

ಮೈಸೂರು, ಆ.4: ವೀಲಿಂಗ್(Wheeling) ಶೋಕಿಗಾಗಿ ಬೈಕ್​ಗಳ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕುವೆಂಪು ನಗರ ಪೊಲೀಸರ ಬಂಧಿಸಿದ್ದಾರೆ. ಧನುಷ್(19), ನಿತಿನ್(19)ಬಂಧಿತ ಆರೋಪಿಗಳು. ಇವರಿಂದ 2.5ಲಕ್ಷ ಮೌಲ್ಯದ 4 ಬೈಕ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಇವರು ಮೈಸೂರಿನ ಶ್ರೀರಾಂಪುರದಲ್ಲಿ ಬೈಕ್ ಕಳ್ಳತನ ಮಾಡುವ ವೇಳೆ ಸಿಕ್ಕಿ ಬಿದ್ದಿದ್ದಾರೆ. ಒಂದು ಬೈಕ್ ಕದ್ದು ಅದೇ ಬೈಕ್​ನಲ್ಲಿ ಮತ್ತೊಂದು ಬೈಕ್ ಕದಿಯಲು ಸಂಚು ಹಾಕುತ್ತಿದ್ದರು. ಅರೆಸ್ಟ್​ ಮಾಡಿ ವಿಚಾರಣೆ ವೇಳೆ ಬೈಕ್ ವೀಲಿಂಗ್ ಮಾಡುವ ಸಲುವಾಗಿ ಕಳ್ಳತನ ಮಾಡುತ್ತಿದ್ದ ಬಗ್ಗೆ ಮಾಹಿತಿ ನೀಡಿದ್ದಾರೆ.

ನಿಧಿಗಾಗಿ ಜಮೀನೊಂದರಲ್ಲಿ ಭೂಮಿ ಅಗೆದು ಶೋಧ; ಸ್ಥಳದಲ್ಲಿ ಮಂತ್ರದ ದಾರ ಕಟ್ಟಿ, ಅರಿಶಿನ ಕುಂಕುಮದಿಂದ ಪೂಜೆ

ಮೈಸೂರು, ಆ.4: ನಿಧಿಗಾಗಿ ಜಮೀನೊಂದರ ದೇವರ ಕಲ್ಲಿನ‌ ಬಳಿ ಭೂಮಿ ತೋಡಿ ಶೋಧ ನಡೆಸಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಹೌದು ಗ್ರಾಮದ ಲೋಕೇಶ್ ಎಂಬುವರ ಜಮೀನಲ್ಲಿ ನಿಧಿಗಳ್ಳರು ಮಂತ್ರದ ದಾರ ಕಟ್ಟಿ, ನಿಂಬೆಹಣ್ಣು ಇಟ್ಟು ಅರಿಶಿನ ಕುಂಕುಮದಿಂದ ಪೂಜೆ ಮಾಡಿ‌ ನಿಧಿಗಾಗಿ ಶೋಧ ನಡೆಸಿದ್ದಾರೆ. ಇನ್ನು ಲೊಕೇಶ್​ ಕುಟುಂಬದವರು ಹಾಗೂ ಗ್ರಾಮಸ್ಥರು ಆ ಸ್ಥಳದಲ್ಲಿ ಒಂದು ಹಂಡೆಯಷ್ಟು ಚಿನ್ನದ ನಿಧಿಯಿದೆಯೆಂದು ಹಲವು ವರ್ಷಗಳಿಂದ ನಂಬಿಕೊಂಡಿದ್ದರು.

ನಿಧಿ ಬಗ್ಗೆ ಲೋಕೇಶ್ ಬಳಿ ಮಾತನಾಡಿದ್ದ ಇಬ್ಬರು ಮುಸ್ಲಿಂ ವ್ಯಕ್ತಿಗಳು

ನಿಧಿ ಬಗ್ಗೆ ಒಂದು‌ ತಿಂಗಳ ಹಿಂದೆ ಲೋಕೇಶ್ ಬಳಿ ಇಬ್ಬರು ಮುಸ್ಲಿಂ ವ್ಯಕ್ತಿಗಳು ಮಾತನಾಡಿದ್ದರು. ಜೊತೆಗೆ ನಿಧಿ ಶೋಧಿಸಿ ಕೊಡುತ್ತೇವೆ ಎಂದು ಭರವಸೆ ಕೂಡ ಕೊಟ್ಟಿದ್ದರು. ಆದರೆ, ಲೋಕೇಶ್ ಕುಟುಂಬದವರಿಗೆ ದೇವರ ಬಗ್ಗೆಯಿದ್ದ ಭಯದಿಂದ ನಿರಾಕರಿಸಿದ್ದರು. ಆದರೂ, ದುಷ್ಕರ್ಮಿಗಳು ಹುಣ್ಣಿಮೆಯ ದಿನ ಬಂದು ಜಾಗ ಶೋಧಿಸಿದ್ದಾರೆ. ಇದೀಗ ಘಟನೆ ಸಂಬಂಧ ಲೋಕೇಶ್ ಕುಟುಂಬ ಬಿಳಿಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:Mysore: ಮೈಸೂರಿನಲ್ಲಿ ಹೆಚ್ಚಿದ ಐಶಾರಾಮಿ ಕಾರು ಕಳ್ಳತನ; ಉದ್ಯಮಿಗಳು, ರಾಜಕಾರಣಿಗಳು, ನಿವೃತ್ತ ಅಧಿಕಾರಿಗಳ ಕಾರುಗಳೇ ಟಾರ್ಗೆಟ್

ಮೈಸೂರಿನಲ್ಲಿ ಸರಕಳ್ಳತನಕ್ಕೆ ವಿಫಲ ಯತ್ನ; ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಮೈಸೂರು: ಮಹಿಳೆಯರು ವಾಕಿಂಗ್ ಮಾಡುವಾಗ ಸರಕಳ್ಳತನಕ್ಕೆ ಯತ್ನಿಸಿದ ಘಟನೆ ಮೈಸೂರಿನ ಕೆ.ಆರ್ ಮೊಹಲ್ಲಾದಲ್ಲಿ ನಡೆದಿದೆ. ಕಳ್ಳನ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಬ್ಬರು ಮಹಿಳೆಯರು ನಡೆದುಕೊಂಡು ಹೋಗುವಾಗ ಅವರನ್ನು ಫಾಲೋ ಮಾಡಿದ ಅಪರಿಚಿತ ಯುವಕ, ಸಮಯ ನೋಡಿ ಸರ ಕಸಿಯಲು ಯುವಕನಿಂದ ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ಕೂಗಿಕೊಂಡಿದ್ದು, ತಕ್ಷಣ ಆರೋಪಿ ಅಲ್ಲಿಂದ ಓಡಿ ಹೋಗಿದ್ದಾನೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:41 am, Fri, 4 August 23

Follow Us
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ