AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಜುಂಡೇಶ್ವರ ದೇಗುಲದಲ್ಲಿ 2.15 ಕೋಟಿ ರೂ. ಕಾಣಿಕೆ ಸಂಗ್ರಹ; 42 ಸಾವಿರ ಮೌಲ್ಯದ ನಿಷೇಧಿತ ನೋಟುಗಳು ಪತ್ತೆ

ಈ ಬಾರಿಯೂ ನಿಷೇಧಿತ ನೋಟುಗಳು ದೇವರ ಹುಂಡಿಯಲ್ಲಿ ಪತ್ತೆಯಾಗಿದೆ. ಸುಮಾರು 42 ಸಾವಿರ ಮೌಲ್ಯದ ನಿಷೇಧಿತ ನೋಟುಗಳ ಸಂಗ್ರಹವಾಗಿದೆ. ವಿದೇಶಿ ಭಕ್ತರು ನಂಜುಂಡನಿಗೆ ಕಾಣಿಕೆ ಹಾಕಿದ್ದಾರೆ.

ನಂಜುಂಡೇಶ್ವರ ದೇಗುಲದಲ್ಲಿ 2.15 ಕೋಟಿ ರೂ. ಕಾಣಿಕೆ ಸಂಗ್ರಹ; 42 ಸಾವಿರ ಮೌಲ್ಯದ ನಿಷೇಧಿತ ನೋಟುಗಳು ಪತ್ತೆ
ಸಂಗ್ರಹ ಕಾಣಿಕೆಗೆ ಪೂಜೆ ಸಲ್ಲಿಸುತ್ತಿದ್ದಾರೆ
TV9 Web
| Edited By: sandhya thejappa|

Updated on:Dec 25, 2021 | 9:26 AM

Share

ಮೈಸೂರು: ದಕ್ಷಿಣಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಎರಡು ಕೋಟಿ ಹದಿನೈದು ಲಕ್ಷದ ಎಂಬತ್ತು ಸಾವಿರದ ನಾನೂರು ಅರವತ್ತೇಳು (2,15,80,467) ರೂಪಾಯಿ ಹಣ ಸಂಗ್ರಹವಾಗಿದೆ. ಕಳೆದ ತಿಂಗಳ ಸಂಗ್ರಹಕ್ಕೆ ಹೋಲಿಸಿದರೆ ದೇವಾಯಲದ ಒಟ್ಟು 21 ಹುಂಡಿಗಳಲ್ಲಿ ಈ ಬಾರಿ 57 ಲಕ್ಷ ಹಣ ಹೆಚ್ಚುವರಿ ಸಂಗ್ರಹವಾಗಿದೆ. ಕೊರೊನಾ ನಿಯಮ ಸಡಿಲಿಕೆ ನಂತರ ದೇವಾಲಯಕ್ಕೆ ಹೆಚ್ಚಿದ ಆದಾಯ ಬಂದಿದೆ.

ಈ ಬಾರಿಯೂ ನಿಷೇಧಿತ ನೋಟುಗಳು ದೇವರ ಹುಂಡಿಯಲ್ಲಿ ಪತ್ತೆಯಾಗಿದೆ. ಸುಮಾರು 42 ಸಾವಿರ ಮೌಲ್ಯದ ನಿಷೇಧಿತ ನೋಟುಗಳ ಸಂಗ್ರಹವಾಗಿದೆ. ವಿದೇಶಿ ಭಕ್ತರು ನಂಜುಂಡನಿಗೆ ಕಾಣಿಕೆ ಹಾಕಿದ್ದಾರೆ. 29 ವಿದೇಶಿ ಕರೆನ್ಸಿಗಳು ಹುಂಡಿಯಲ್ಲಿ ಸಂಗ್ರಹವಾಗಿದ್ದು, ಇದರ ಜೊತೆಗೆ 108 ಗ್ರಾಂ ಚಿನ್ನ ಹಾಗೂ 5 ಕೆಜಿ 750 ಗ್ರಾಂ ಬೆಳ್ಳಿ ಇದೆ. ಬ್ಯಾಂಕ್ ಸಿಬ್ಬಂದಿಗಳು ಸೇರಿ ಸುಮಾರು 40ಕ್ಕೂ ಹೆಚ್ಚು ಜನರು ಎಣಿಕೆ ಕಾರ್ಯವನ್ನು ನಡೆಸಿದ್ದಾರೆ. ಲಾಕ್​ಡೌನ್​ ತೆರವು ನಂತರ ನಂಜುಂಡೇಶ್ವರ ದರ್ಶನ ಪಡೆಯಲು ಭಕ್ತಾದಿಗಳ ಸಂಖ್ಯೆ ದಿನೇ ದಿನೇ ಏರುತ್ತಿರುವುದರಿಂದ ಹುಂಡಿಗೆ ಕಾಣಿಕೆ ಹೆಚ್ಚಾಗಿದೆ.

ಕಾಣಿಕೆಯನ್ನು ಎಣಿಕೆ ಮಾಡುತ್ತಿದ್ದಾರೆ

ಲಾಕ್ಡೌನ್ ನಂತರ ಕೋಟ್ಯಾಧೀಶನಾದ ನಂಜುಂಡೇಶ್ವರ ಆಗಸ್ಟ್ ತಿಂಗಳಲ್ಲಿ ಭಕ್ತಾದಿಗಳಿಂದ ಕಾಣಿಕೆ ಹುಂಡಿ ಭರ್ತಿಯಾಗಿತ್ತು. ನಂಜನಗೂಡಿನ ದೇವಸ್ಥಾನದ ಸಿಬ್ಬಂದಿ ಹಾಗೂ ಕಾವೇರಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಸಿಬ್ಬಂದಿ ದೇವಸ್ಥಾನದ ಹುಂಡಿಯಲ್ಲಿರುವ ಹಣ ಹಾಗೂ ಚಿನ್ನಾಭರಣ ಎಣಿಕೆ ಮಾಡಿದ್ದರು. ಆ ಪ್ರಕಾರ 50ಗ್ರಾಂ ಚಿನ್ನ, 8 ಕೆಜಿ 200 ಗ್ರಾಂ ಬೆಳ್ಳಿ, 12 ವಿದೇಶಿ ಕರೆನ್ಸಿಗಳು ಹುಂಡಿಯಲ್ಲಿ ಸಂಗ್ರಹವಾಗಿತ್ತು.

ಫೆಬ್ರವರಿಯಲ್ಲಿ ಸಂಗ್ರಹವಾದ ಕಾಣಿಕೆ ಎಷ್ಟು? ಫೆಬ್ರವರಿಯಲ್ಲಿ ದೇಗುಲದ ಹುಂಡಿಯಲ್ಲಿನ ಹಣವನ್ನು ತಹಶೀಲ್ದಾರ್ ಶರ್ಮಿಳಾ ದತ್ತು ಸಮ್ಮುಖದಲ್ಲಿ ಏಣಿಕೆ ಮಾಡಿದ್ದರು. ಅಂದು ಹುಂಡಿಯಲ್ಲಿ 1,11,64,033 ರೂಪಾಯಿ ಕಾಣಿಕೆ ಸಂಗ್ರಹವಾಗಿತ್ತು. 105 ಗ್ರಾಂ ಚಿನ್ನ, 2 ಕೆ.ಜಿ 250 ಗ್ರಾಂ ಬೆಳ್ಳಿ, 6 ವಿದೇಶಿ ಕರೆನ್ಸಿ ಇದ್ದು, ಚಲಾವಣೆ ಇಲ್ಲದ 1 ಸಾವಿರ ಮುಖಬೆಲೆಯ 11 ನೋಟುಗಳು, 500 ಮುಖಬೆಲೆಯ 87 ನೋಟುಗಳು ಸಹ ಹುಂಡಿಯಲ್ಲಿ ಪತ್ತೆಯಾಗಿತ್ತು.

ಇದನ್ನೂ ಓದಿ

ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ನರಳಾಡಿದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಗಾಯಾಳುಗಳು; ದಾವಣಗೆರೆ ಜಿಲ್ಲಾಡಳಿತ ವಿರುದ್ಧ ಸ್ಥಳೀಯರ ಆಕ್ರೋಶ

Omicron: ಭಾರತದಲ್ಲಿ ಒಮಿಕ್ರಾನ್ ಕೇಸ್ ಎರಡೇ ತಿಂಗಳಲ್ಲಿ 10 ಲಕ್ಷಕ್ಕೇರುವ ಸಾಧ್ಯತೆ; ಇದನ್ನು ನಿಯಂತ್ರಿಸಲು ತಿಂಗಳ ಸಮಯವೂ ಉಳಿದಿಲ್ಲ: ಡಾ.ಅನೀಶ್

Published On - 9:22 am, Sat, 25 December 21

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​