AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಣಾಮುಚ್ಚಾಲೆ ಆಡುವಾಗ ಐಸ್​ ಕ್ರೀಮ್​ ಬಾಕ್ಸ್​​ನಲ್ಲಿ ಕುಳಿತಿದ್ದ ಇಬ್ಬರು ಬಾಲಕಿಯರು ಉಸಿರುಗಟ್ಟಿ ಸಾವು

ಮಸಗೆ ಗ್ರಾಮದ ನಾಗರಾಜು-ಚಿಕ್ಕದೇವಮ್ಮ ಎಂಬುವರ ಪುತ್ರಿ ಭಾಗ್ಯ (12) ಹಾಗೂ ರಾಜನಾಯಕ -ಗೌರಮ್ಮ ಎಂಬುವರ ಪುತ್ರಿ ಕಾವ್ಯ (7) ಮೃತರು. ತಗಡೂರು ಗ್ರಾಮದ ಹನುಮಂತನಾಯಕ ಅವರ ಐಸ್ ಕ್ರೀಮ್ ಬಾಕ್ಸ್​ ನಲ್ಲಿ ಈ ದುರಂತ ನಡೆದಿದೆ. ಕಣ್ಣಾಮುಚ್ಚಾಲೆ ಆಡುತ್ತಾ ಐಸ್ ಕ್ರೀಮ್ ಬಾಕ್ಸ್ ಒಳಗೆ ಅಡಗಿ ಕುಳಿತ ಬಾಲಕಿಯರು ಸುಮಾರು ಅರ್ಧ ಗಂಟೆ ಸಮಯ ಕಳೆದರೂ ಹೊರಬಂದಿಲ್ಲ.

ಕಣ್ಣಾಮುಚ್ಚಾಲೆ ಆಡುವಾಗ ಐಸ್​ ಕ್ರೀಮ್​ ಬಾಕ್ಸ್​​ನಲ್ಲಿ ಕುಳಿತಿದ್ದ ಇಬ್ಬರು ಬಾಲಕಿಯರು ಉಸಿರುಗಟ್ಟಿ ಸಾವು
ಕಣ್ಣಾಮುಚ್ಚಾಲೆ ಆಡುವಾಗ ಐಸ್​ಕ್ರೀಮ್​ ಬಾಕ್ಸ್​​ನಲ್ಲಿ ಕುಳಿತಿದ್ದ ಇಬ್ಬರು ಬಾಲಕಿಯರು ಉಸಿರುಗಟ್ಟಿ ಸಾವು
TV9 Web
| Edited By: |

Updated on:Apr 27, 2022 | 7:46 PM

Share

ಮೈಸೂರು: ಮಕ್ಕಳು ಕಣ್ಣಾಮುಚ್ಚಾಲೆ ಆಡುವಾಗ ಐಸ್‌ ಕ್ರೀಮ್ ಬಾಕ್ಸ್‌ನಲ್ಲಿ‌ ಅಡಗಿ ಕುಳಿತಿದ್ದಾಗ ಇಬ್ಬರು ಬಾಲಕಿಯರು ಉಸಿರುಗಟ್ಟಿ ಕೊನೆಯುಸಿರೆಳೆದಿದ್ದಾರೆ. ಆಟ ಆಡುತ್ತಿದ್ದ ಸಂದರ್ಭದಲ್ಲಿ ಐಸ್ ಕ್ರೀಮ್ ಬಾಕ್ಸ್ ಒಳಗೆ ನತದೃಷ್ಟ ಬಾಲಕಿಯರಿಬ್ಬರೂ ಲಾಕ್ ಆಗಿಬಿಟ್ಟಿದ್ದಾರೆ. ಆ ಐಸ್ ಕ್ರೀಮ್ ಬಾಕ್ಸ್ ಬಾಗಿಲು ತೆರೆಯಲಾಗದೆ ಉಸಿರುಗಟ್ಟಿ ಅಸುನೀಗಿದ್ದಾರೆ ಬಾಲಕಿಯರು. ನಂಜನಗೂಡು ತಾಲೂಕಿನ ಮಸಗೆ ಗ್ರಾಮದಲ್ಲಿ ಈ ಆಕಸ್ಮಿಕ ಘಟನೆ ನಡೆದಿದೆ.

ಮಸಗೆ ಗ್ರಾಮದ ನಾಗರಾಜು-ಚಿಕ್ಕದೇವಮ್ಮ ಎಂಬುವರ ಪುತ್ರಿ ಭಾಗ್ಯ (12) ಹಾಗೂ ರಾಜನಾಯಕ -ಗೌರಮ್ಮ ಎಂಬುವರ ಪುತ್ರಿ ಕಾವ್ಯ (7) ಮೃತರು. ತಗಡೂರು ಗ್ರಾಮದ ಹನುಮಂತನಾಯಕ ಅವರ ಐಸ್ ಕ್ರೀಮ್ ಬಾಕ್ಸ್​ ನಲ್ಲಿ ಈ ದುರಂತ ನಡೆದಿದೆ. ಕಣ್ಣಾಮುಚ್ಚಾಲೆ ಆಡುತ್ತಾ ಐಸ್ ಕ್ರೀಮ್ ಬಾಕ್ಸ್ ಒಳಗೆ ಅಡಗಿ ಕುಳಿತ ಬಾಲಕಿಯರು ಸುಮಾರು ಅರ್ಧ ಗಂಟೆ ಸಮಯ ಕಳೆದರೂ ಹೊರಬಂದಿಲ್ಲ. ಬಾಗಿಲು ತೆರೆದು ನೋಡಿದಾಗ ಉಸಿರುಗಟ್ಟಿ ಸಾವನ್ನಪ್ಪಿರುವುದು ಪತ್ತೆಯಾಗಿದೆ. ಈ ಪ್ರಕರಣದ ವಿಚಾರವಾಗಿ ಯಾವುದೇ ದೂರು ದಾಖಲಾಗಿಲ್ಲ. ನಂಜನಗೂಡು ತಾಲ್ಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ‌ ಪ್ರಕರಣ ನಡೆದಿದೆ. ಯಾವುದೇ ದೂರು ದಾಖಲಿಸದೆ ಮೃತ ಬಾಲಕಿಯರಿಬ್ಬರ ಶವಸಂಸ್ಕಾರವನ್ನು ಕುಟುಂಬಸ್ಥರು ನೆರವೇರಿಸಿದ್ದಾರೆ.

ಗಂಡನಿಂದ ಹೆಂಡತಿಗೆ ಕಿರುಕುಳ ಕೈಮೇಲೆ‌ ಕರ್ಪೂರ ಹಚ್ಚಿ ಟಾರ್ಚರ್: ಕೈ ಹಿಡಿದ ಪತ್ನಿಯ ಶೀಲ ಶಂಕಿಸಿ ಅನುಮಾನಗೊಂಡ ಗಂಡ ಕೈಯಲ್ಲಿ ಕರ್ಪೂರ ಹಚ್ವಿಸಿ ಆಣೆ ಪ್ರಮಾಣ ಮಾಡಿಸಿ ಕೈ ಸುಟ್ಟು ಅಮಾನುಷವಾಗಿ ವರ್ತಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೈಯಲ್ಲಿ ಕರ್ಪೂರ ಅಂಟಿಸಿ ಕೈ ಸುಟ್ಟು ಹಾಕಿರುವ ದುಷ್ಟ ಪರಾರಿಯಾಗಿದ್ದಾನೆ. ಕೋಲಾರ ತಾಲ್ಲೂಕಿನ ವೇಮಗಲ್ ಬಳಿಯ ಹಿರೇನಹಳ್ಳಿ ಗ್ರಾಮದ ಆನಂದ್ ಎಂಬುವವನೆ ಈ ದುಷ್ಕೃತ್ಯವೆಸಗಿದೆ ದುಷ್ಟ.

ಕೆ.ಜಿ.ಎಫ್ ತಾಲ್ಲೂಕು ಬಾಣಗೆರೆ ಗ್ರಾಮದ ಮಹಿಳೆ ಪ್ರಮೋಧ ದೈಹಿಕ ಹಿಂಸೆ ನೀಡಿ ದುಷ್ಕೃತ್ಯ ಮೆರೆದಿದ್ದಾನೆ. ಇನ್ನೂ ತನ್ನ ಗಂಡನ ಕಿರುಕುಳ ತಾಳಲಾರದೆ ಇಬ್ಬರು ಮಕ್ಕಳಾದ ಬೇಬಿ ಹಾಗೂ ಅಕ್ಷಿತ್ ಕುಮಾರ್ ಹಾಗೂ ತನ್ನ ತಾಯಿಯೊಂದಿಗೆ ಕಂಗಾಲಾಗಿರುವ ಮಹಿಳೆ ಮನೆ ಬಿಟ್ಟು ಬಂದಿದ್ದಾಳೆ. ಇಬ್ಬರು ಮಕ್ಕಳಿದ್ದರು ಸಹ ಗಂಡ ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದಾನೆ ಎಂದು ಸಂಘಟನೆಗಳು ಹಾಗೂ ಮಹಿಳಾ ಸಾಂತ್ವಾನ ಕೇಂದ್ರದ ಮೊರೆ ಹೋಗಿದ್ದಾಳೆ ಮಹಿಳೆ. ಇನ್ನು ನ್ಯಾಯ ದೊರಕಿಸಿಕೊಡಲು ಅಂಬೇಡ್ಕರ್ ಸೇವಾ ಸಮಿತಿ ಮೊರೆ ಹೋಗಿದ್ದು, ಸಧ್ಯ ಮಹಿಳೆಗೆ ಸಾಂತ್ವಾನ ಹೇಳಿರುವ ಅಂಬೇಡ್ಕರ್ ಸೇವಾ ಸಮಿತಿ ಮುಖಂಡ ಸಂದೇಶ್, ಕುಟುಂಬಕ್ಕೆ ನೆರವಾಗಿ ಕಾನೂನು ಹೋರಾಟಕ್ಕೆ ಮುಂದಾಗಿದ್ದಾನೆ.

Published On - 7:42 pm, Wed, 27 April 22

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?