ಬಿಟ್ ಕಾಯಿನ್​ನಲ್ಲಿ ಸುಲಭ ಹಣ ಸಂಪಾದಿಸಲು ಹೋಗಿ ಲಕ್ಷ ಲಕ್ಷ ಹಣ ಕಳೆದುಕೊಂಡ ಮೈಸೂರು ನಿವಾಸಿಗಳು

ಬಿಟ್ ಕಾಯಿನ್ ನಲ್ಲಿ ಸುಲಭವಾಗಿ ಹಣ ಸಂಪಾದಿಸಲು ಹೋಗಿ ಮೈಸೂರಿನ ನಿವಾಸಿಗಳು ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡಿದ್ದಾರೆ. ಬ್ಯಾಂಕ್ ನಲ್ಲಿ ಸಾಲ ಮಾಡಿ ಬಿಟ್ ಕಾಯಿನ್ ನಲ್ಲಿ ಹೂಡಿಕೆ ಮಾಡಿದ್ದವರು ಇದೀಗ ಕಂಗಾಲಾಗಿದ್ದಾರೆ.

ಬಿಟ್ ಕಾಯಿನ್​ನಲ್ಲಿ ಸುಲಭ ಹಣ ಸಂಪಾದಿಸಲು ಹೋಗಿ ಲಕ್ಷ ಲಕ್ಷ ಹಣ ಕಳೆದುಕೊಂಡ ಮೈಸೂರು ನಿವಾಸಿಗಳು
Image Credit source: Getty Images
Edited By:

Updated on: Jul 20, 2023 | 6:51 AM

ಮೈಸೂರು, (ಜುಲೈ 20): ಬಿಟ್ ಕಾಯಿನ್ಮೂ (cryptocurrency ) ಲಕ ಲಕ್ಷ ಲಕ್ಷ ಹಣ ಸಂಪಾದಿಸಲು ಹೋಗಿ ಪಂಗನಾಮ ಹಾಕಿಸಿಕೊಂಡಿದ್ದಾರೆ. ಮಧ್ಯವರ್ತಿಯ ಮಾತಿಗೆ ಮರುಳಾಗಿ ಮೈಸೂರು ನಿವಾಸಿಗಳು(Mysuru citizens)  ಬರೋಬ್ಬರಿ 87 ಲಕ್ಷ ರೂ. ಹಣ ಕಳೆದುಕೊಂಡು ಕಂಗಾಲಾಗಿದ್ದಾರೆ. ಮೈಸೂರಿನ ಮೇಟಗಳ್ಳಿ ನಿವಾಸಿ ವಿಜಯಲಕ್ಷ್ಮಿ 52 ಲಕ್ಷ ರೂ. ಹಾಗೂ ಮೊಹಮ್ಮದ್ ಜಾವೇದ್ 35 ಲಕ್ಷ ರೂ. ಹಣ ಕಳೆದಕೊಂಡರು. ಮಹಮ್ಮದ್ ಜಾವೇದ್ ಬಳಿ 35 ಲಕ್ಷ ರೂ. ಹಣವನ್ನ‌ ಖದೀಮರು 15 ಅಕೌಂಟ್​ಗಳಿಗೆ ಹಾಕಿಸಿಕೊಂಡಿದ್ದರೆ. ವಿಜಯಲಕ್ಷ್ಮೀಯವರ 52 ಲಕ್ಷ ರೂ. ಹಣವನ್ನ 36 ಅಕೌಂಟ್ಸ್ ಗೆ ವರ್ಗಾವಣೆ ಮಾಡಿಸಿಕೊಂಡು ಮೋಸ ಮಾಡಿದ್ದಾರೆ. ಶ್ರೀನಗರ‌ದಲ್ಲಿ 2 ಅಕೌಂಟ್, ಕೇರಳ, ಬೆಂಗಳೂರು, ಮಧ್ಯಪ್ರದೇಶ್, ಜಾರ್ಖಂಡ್, ಉತ್ತರಪ್ರದೇಶ ಸೇರಿದಂತೆ ವಿವಿಧ ಭಾಗದಲ್ಲಿ ಹಣ ವರ್ಗಾವಣೆಯಾಗಿರುವುದು ಪತ್ತೆಯಾಗಿದ್ದು, ಬಿಟ್ ಕಾಯಿನ್ ಟ್ರೇಡರ್ಸ್ ಕಾಂಟ್ಯಾಕ್ಟ್ ಕಂಡು ಮೈಸೂರು ಪೊಲೀಸರು ಬೆಚ್ಚಿ ಬಿದ್ದಿದ್ದಾರೆ.

ಟೆಲಿಗ್ರಾಂನಲ್ಲಿ ಇನ್ವೈಟೇಷನ್ ಕಳುಹಿಸಿ ಗ್ರೂಪ್ ರಚಿಸುವ ಖದೀಮರು, ಕ್ರಿಪ್ಟೋ ಕರೆನ್ಸಿಯಲ್ಲಿ ಇನ್ವೆಸ್ಟ್ ಮಾಡಿ ಲಕ್ಷ ಲಕ್ಷ ಲಾಭಗಳಿಸಿ ಎಂದು ಸುಳ್ಳು ಭರವಸೆ ನೀಡಿತ್ತಾರೆ. ಗ್ರೂಪ್ ರಚಿಸಿ ಲಕ್ಷ ಲಕ್ಷ ಲಾಭ ಗಳಿಸಿರುವ ನಕಲಿ ಸ್ಕ್ರೀನ್ ಶಾಟ್ ಕಳುಹಿಸಿ ಜನರಿಗೆ ನಂಬಿಕೆ ಬರುವಂತೆ ಮಾಡಿ ಟೋಪಿ ಹಾಕುತ್ತಾರೆ.

ಒಂದು ಬಾರಿಯೂ ಮೊಬೈಲ್ ಮೂಲಕ ಮಾತನಾಡದೆ ಎಲ್ಲವನ್ನು ಟೆಲಿಗ್ರಾಂನಲ್ಲೇ ಚಾಟ್ ಮಾಡುತ್ತಾರೆ. ವಂಚಕರು. ಎಲ್ಲಿಯೂ ಸಂದೇಹ ಬರದಂತೆ ಗ್ರಾಹಕರನ್ನ ವಂಚನೆ ಮಾಡಿರುವ ನಕಲಿ ಟ್ರೇಡರ್ಸ್, ಜಮ್ಮು ಕಾಶ್ಮೀರದ ಶ್ರೀನಗರದಿಂದ ಕೇರಳದವರೆಗೆ ನೆಟ್ ವರ್ಕ್ ಹೊಂದಿದ್ದು, ಹಣ ವರ್ಗಾವಣೆಯಾದ ಕ್ಷಣಾರ್ಧದಲ್ಲಿ ಹಣ ಡ್ರಾ ಮಾಡಿಕೊಂಡು ಯಾಮಾರಿಸುತ್ತಾರೆ.

ಒಂದೇ ತಿಂಗಳಿನಲ್ಲಿ ಎರಡು ಪ್ರಕರಣಗಳು ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಬಿಟ್ ಕಾಯಿನ್ ನಲ್ಲಿ ಹಣ ಹೂಡುವ ಮುನ್ನ ಎಚ್ಚರಿಕೆ ವಹಿಸುವಂತೆ ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಕರೆ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 6:48 am, Thu, 20 July 23

Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
Follow Us