AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗರಹೊಳೆ ಅರಣ್ಯದಲ್ಲಿ ಸಫಾರಿ ಮಾಡುವ ವೇಳೆ ಜೀಪ್​ ಎದುರೇ ಎರಡು ಹುಲಿಗಳ ಕಾದಾಟ; ವಿಡಿಯೋ ಇದೆ

ಸಾಮಾನ್ಯವಾಗಿ ಕಾಡಿನಲ್ಲಿ ಎರಡು ಹುಲಿಗಳ ನಡುವೆ ಈ ರೀತಿ ಕಾದಾಟ ನಡೆಯುತ್ತದೆ. ಆದರೆ ಅದು ಪ್ರವಾಸಿಗರಿಗೆ ಕಾಣ ಸಿಗುವುದಿಲ್ಲ. ಇಂತದ್ದೊಂದು ಅಪರೂಪದ ದೃಶ್ಯ ಈಗ ನೋಡುಗರನ್ನು ಹೆಚ್ಚು ಕುತೂಹಲ ಉಂಟುಮಾಡಿದೆ.

ನಾಗರಹೊಳೆ ಅರಣ್ಯದಲ್ಲಿ ಸಫಾರಿ ಮಾಡುವ ವೇಳೆ ಜೀಪ್​ ಎದುರೇ ಎರಡು ಹುಲಿಗಳ ಕಾದಾಟ; ವಿಡಿಯೋ ಇದೆ
ಎರಡು ಹುಲಿಗಳ ಕಾದಾಟ ಅಪರೂಪದ ದೃಶ್ಯ
TV9 Web
| Updated By: preethi shettigar|

Updated on:Aug 09, 2021 | 1:24 PM

Share

ಮೈಸೂರು: ನಾಗರಹೊಳೆ ಅರಣ್ಯದಲ್ಲಿ ಸಫಾರಿ ಮಾಡುವ ವೇಳೆ ಎರಡು ಹುಲಿಗಳ ಕಾದಾಟದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಕಬಿನಿ ಸಫಾರಿಯಲ್ಲಿ ಈ ದೃಶ್ಯ ಕಂಡುಬಂದಿದೆ. ಹುಲಿಗಳು ತಮ್ಮ ಸಾಮ್ರಾಜ್ಯಕ್ಕಾಗಿ ಕಾದಾಟ ನಡೆಸುತ್ತವೆ ಎನೋ ಎಂಬತ್ತೆ ಇವುಗಳ ವರ್ತನೆ ಬಿಂಬಿತವಾಗಿದೆ.

ಒಂದು ಹುಲಿಯ ಟೆರಿಟರಿಗೆ ಮತ್ತೊಂದು ಹುಲಿ ಬಂದಾಗ ಕಾದಾಟ ಶುರುವಾಗಿದ್ದು, ಕಾದಾಟದ ಅಪರೂಪದ ದೃಶ್ಯವನ್ನು ಪ್ರವಾಸಿಗರು ಸೆರೆ ಹಿಡಿದಿದ್ದಾರೆ. ಸಾಮಾನ್ಯವಾಗಿ ಕಾಡಿನಲ್ಲಿ ಎರಡು ಹುಲಿಗಳ ನಡುವೆ ಈ ರೀತಿ ಕಾದಾಟ ನಡೆಯುತ್ತದೆ. ಆದರೆ ಅದು ಪ್ರವಾಸಿಗರಿಗೆ ಕಾಣ ಸಿಗುವುದಿಲ್ಲ. ಇಂತದ್ದೊಂದು ಅಪರೂಪದ ದೃಶ್ಯ ಈಗ ನೋಡುಗರನ್ನು ಹೆಚ್ಚು ಕುತೂಹಲ ಉಂಟುಮಾಡಿದೆ.

ಕೊರೊನಾ ಎರಡನೇ ಅಲೆಯ ಕಾರಣದಿಂದಾಗಿ ಸಫಾರಿಗೆ ಅಥವಾ ಮೃಗಾಲಯಗಳ ಭೇಟಿಗೆ ಅವಕಾಶವಿರಲಿಲಲ್ಲ ಈ ಸಂದರ್ಭದಲ್ಲಿ ಪ್ರಾಣಿಗಳು ಕೂಡ ಸಂಕಷ್ಟಕ್ಕೆ ಗುರಿಯಾಗಿದ್ದವು. ಹೀಗಾಗಿ ಈ ಬಾರಿ ಆಸರೆಯಾಗಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್.‌ ನಟ ದರ್ಶನ್‌ ಅವರ ಅಭಿಯಾನಕ್ಕೆ‌ 3 ಕೋಟಿಗೂ ಅಧಿಕ ದೇಣಿಗೆ ಸಂಗ್ರವಾಗಿದ್ದು, ಪ್ರಾಣಿಗಳ ನೆರವಿಗೆ ಜನರು ಮುಂದೆ ಬಂದಿದ್ದಾರೆ.‌ ಈಗ ಕೊರೊನಾ ಸೋಂಕಿನ ತೀವ್ರತೆಯೂ ಕಡಿಮೆಯಾಗುತ್ತಿದ್ದು, ಲಾಕ್​ಡೌನ್​ ಸಡಿಲಗೊಂಡಿದೆ. ಹೀಗಾಗಿ 3 ಮೃಗಾಲಯಕ್ಕೆ ಪ್ರವಾಸಿಗರಿಗೆ ಅವಕಾಶ‌ ನೀಡಲಾಗಿದೆ. ಹೀಗಾಗಿ ಮೈಸೂರಿನ ನಾಗರಹೊಳೆಗೆ ಪ್ರಾಣಿ ಪ್ರಿಯರು ಆಗಮಿಸುತ್ತಿದ್ದಾರೆ.

ಇದನ್ನೂ ಓದಿ:

ಗರಿಬಿಚ್ಚಿ ಕುಣಿಯುತ್ತಿದ್ದ ನವಿಲಿನ ಮೇಲೆ ಹುಲಿ ದಾಳಿ; ರಾಷ್ಟ್ರಪಕ್ಷಿ ಹಾಗೂ ರಾಷ್ಟ್ರಪ್ರಾಣಿ ಮುಖಾಮುಖಿಯಾದ ವಿಡಿಯೋ ವೈರಲ್

ಟೂರಿಸ್ಟ್​ ವ್ಯಾನ್​ ಸುತ್ತುವರೆದ ದೈತ್ಯಾಕಾರದ 3 ಹುಲಿಗಳು: ಪ್ರವಾಸಿಗರ ಹೃದಯ ಬಡಿತ ಹೆಚ್ಚಾಯ್ತು! ವಿಡಿಯೋ ವೈರಲ್ ಆಯ್ತು

Published On - 11:27 am, Mon, 9 August 21

ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ