AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Umesh Katti: ಸಿಎಂ ಆಗಲು ನನಗೆ ಎಲ್ಲ ಅರ್ಹತೆ ಇದೆ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿ; ಉಮೇಶ್ ಕತ್ತಿ

ನನ್ನ ಹಣೆಬರದಲ್ಲಿ ಬರೆದಿದ್ದರೆ ನಾನು ಸಿಎಂ ಆಗುತ್ತೇನೆ. ಇರುವ 224 ಶಾಸಕರಲ್ಲಿ ನಾನೇ ಹಿರಿಯ ಶಾಸಕ. ನನಗೆ ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆ ಇದೆ ಎಂದು ಉಮೇಶ್ ಕತ್ತಿ ಹೇಳಿದ್ದಾರೆ. 

Umesh Katti: ಸಿಎಂ ಆಗಲು ನನಗೆ ಎಲ್ಲ ಅರ್ಹತೆ ಇದೆ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿ; ಉಮೇಶ್ ಕತ್ತಿ
ಉಮೇಶ್ ಕತ್ತಿ
TV9 Web
| Edited By: |

Updated on:Jun 30, 2022 | 2:08 PM

Share

ಮೈಸೂರು: ಆಂಧ್ರಪ್ರದೇಶ, ತೆಲಂಗಾಣದಂತೆ ನಮ್ಮ ರಾಜ್ಯದಲ್ಲೂ ಉತ್ತರ ಕರ್ನಾಟಕ (North Karnataka) ಪ್ರತ್ಯೇಕ ರಾಜ್ಯವಾಗಲಿ ಎಂದು ಮೈಸೂರಿನಲ್ಲಿ ಪ್ರತ್ಯೇಕ ರಾಜ್ಯದ ಬಗ್ಗೆ ಉಮೇಶ್​ ಕತ್ತಿ (Umesh Katti) ಪುನರುಚ್ಛರಿಸಿದ್ದಾರೆ. ನಾನು ಸಿಎಂ ಆಗುವುದಾದರೆ ಅಖಂಡ ಕರ್ನಾಟಕದ ಸಿಎಂ ಆಗುತ್ತೇನೆ. ನನ್ನ ಹಣೆಬರದಲ್ಲಿ ಬರೆದಿದ್ದರೆ ನಾನು ಸಿಎಂ ಆಗುತ್ತೇನೆ. ಇರುವ 224 ಶಾಸಕರಲ್ಲಿ ನಾನೇ ಹಿರಿಯ ಶಾಸಕ. ನನಗೆ ಸಿಎಂ ಆಗುವ ಎಲ್ಲಾ ಅರ್ಹತೆ ಇದೆ ಎಂದು ಉಮೇಶ್ ಕತ್ತಿ ಹೇಳಿದ್ದಾರೆ.

ಸಿಎಂ ಸ್ಥಾನಕ್ಕಾಗಿ ನಾನು ಪ್ರತ್ಯೇಕ ರಾಜ್ಯ ಕೇಳುತ್ತಿಲ್ಲ. ನನಗೆ ಅಖಂಡ ಕರ್ನಾಟಕದ ಸಿಎಂ ಆಗಬೇಕೆಂಬ ಬಯಕೆ ಇದೆ. ಪ್ರತ್ಯೇಕ ರಾಜ್ಯವಾದರೂ ಕೂಡಾ ನಾವು ಕನ್ನಡಿಗರೇ. ಆಂಧ್ರ ಪ್ರದೇಶ, ತೆಲಂಗಾಣ ರೀತಿಯಲ್ಲೇ ನಮ್ಮ ರಾಜ್ಯದಲ್ಲೂ ಪ್ರತ್ಯೇಕ ರಾಜ್ಯವಾಗಲಿ ಎಂದು ಬಯಸಿದ್ದೇನೆ. ನಮ್ಮ ಜನರ ದೃಷ್ಟಿಯಿಂದ ನಾನೇ ಹಿರಿಯನಾಗಿ ಧ್ವನಿ ಎತ್ತಿದ್ದೇನೆ ಎಂದು ಉಮೇಶ್ ಕತ್ತಿ ಹೇಳಿದ್ದಾರೆ.

ನಮ್ಮ ಜನರ ದೃಷ್ಟಿಯಿಂದ ನಾನೇ ಹಿರಿಯನಾಗಿ ಧ್ವನಿ ಎತ್ತಿದ್ದೇನೆ. ಹೈಕಮಾಂಡ್ ಮಟ್ಟದಲ್ಲೂ ಹೊಸ ರಾಜ್ಯಗಳ ರಚನೆ ಬಗ್ಗೆ ಚಿಂತನೆ ನಡೆದಿದೆ ಎಂಬುದು ನನ್ನ ಅನಿಸಿಕೆ‌. ನಾನು‌ ಮಾತಾಡಿದರೆ ಆ ವಿಚಾರ ಕೇಂದ್ರದ ಮಟ್ಟಕ್ಕೂ ಹೋಗುತ್ತದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರದ ಮಂತ್ರಿಗಳನ್ನು ಭೇಟಿ ಮಾಡುತ್ತೇನೆ ಎಂದು ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಈ ಹಿಂದೆಯೂ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಎಂದಿದ್ದ ಸಚಿವ ಉಮೇಶ್ ಕತ್ತಿ ಆ ಹೇಳಿಕೆಯನ್ನು ಮತ್ತೆ ಪ್ರಸ್ತಾಪಿಸಿದ್ದಾರೆ. ಅಭಿವೃದ್ಧಿ ದೃಷ್ಟಿಯಿಂದ ನಾನು ಪ್ರತ್ಯೇಕ ರಾಜ್ಯ ಕೇಳುತ್ತಿದ್ದೇನೆಯೇ ಹೊರತು ಬೇರೆ ಉದ್ದೇಶದಿಂದಲ್ಲ ಎಂದಿದ್ದಾರೆ.

ಇದನ್ನೂ ಓದಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಪ್ರಧಾನಿ ಮೋದಿ ಚಿಂತನೆ ಮಾಡಿದ್ದಾರೆ ಎಂದ ಉಮೇಶ್ ಕತ್ತಿ, ಬೊಮ್ಮಾಯಿ ಏನಂದರು?

ಈ ವೇಳೆ, ತಮ್ಮ ಸರ್ಕಾರದ ಆಡಳಿತವನ್ನೇ ಪ್ರಶ್ನಿಸಿದ ಸಚಿವ ಉಮೇಶ್ ಕತ್ತಿ, ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಿದೆ? ದೊಡ್ಡ ರಾಜ್ಯಗಳಾದಾಗ ಇಂತಹ ಸಮಸ್ಯೆಗಳು ಇದ್ದೇ ಇರುತ್ತವೆ‌. ಇದೇ ಕಾರಣಕ್ಕೆ ನಾವು ರಾಜ್ಯ ಇಬ್ಭಾಗ ಆಗಬೇಕೆಂದು ಕೇಳುತ್ತಿದ್ದೇನೆ‌. ಜಲಾಶಯಗಳ ನೀರಿನ ಬಳಕೆ ಗಡಿ ಸಮಸ್ಯೆಗಳ ನಿವಾರಣೆ ಇದರ ದೃಷ್ಟಿಯಿಂದ ಚಿಕ್ಕ ರಾಜ್ಯಗಳು ಆಗಬೇಕು. ಅತಿ ಹೆಚ್ಚು ಜನಸಂಖ್ಯೆ ಇದ್ದಾಗ ಇಂತಹ ಯಾವ ಸಮಸ್ಯೆಗಳು ಬಗೆಹರಿಯುವುದಿಲ್ಲ. ಬೆಳಗಾವಿ ಗಡಿ ಸಮಸ್ಯೆಗೂ ಪ್ರತ್ಯೇಕ ರಾಜ್ಯವೇ ಪರಿಹಾರ ಎಂದು ಮೈಸೂರಿನಲ್ಲಿ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ವಿಚಾರವಾಗಿ ಪ್ರತಿಕ್ರಿಯಿಸಿದ ಉಮೇಶ್ ಕತ್ತಿ, ಮಹಾರಾಷ್ಟ್ರದ ಬಿಜೆಪಿಯೇ ಬೇರೆ ಕರ್ನಾಟಕದ ಬಿಜೆಪಿಯೇ ಬೇರೆ. ಮಹಾರಾಷ್ಟ್ರದಲ್ಲಿ ಯಾರೇ ಅಧಿಕಾರಕ್ಕೆ ಬಂದರೂ ಬೆಳಗಾವಿ ಕನ್ನಡಿಗರದ್ದು. ಇದರಲ್ಲಿ ಯಾವ ಅನುಮಾನಗಳು ಬೇಡ. ಯಾವುದೇ ರಾಜ್ಯದಲ್ಲಿ ಯಾವುದೇ ಸರ್ಕಾರ ಇದ್ದರೂ ಗಡಿಭಾಗಗಳಲ್ಲಿ ಗಲಾಟೆ ಮಾಡಲು ಕೆಲವು ಪುಂಡರು ಇದ್ದೇ ಇರುತ್ತಾರೆ. ಅವರಿಗೆ ಕಾನೂನಾತ್ಮಕ ಶಿಕ್ಷೆ ಆಗಬೇಕು ಅಷ್ಟೇ. ಗಡಿ ಖ್ಯಾತೆ ಬಗೆಹರಿದು ಬಹಳ ವರ್ಷವಾಗಿದೆ. ಆಗಾಗ ಪುಂಡರು ಗಲಾಟೆ ಮಾಡುತ್ತಲೇ ಇರುತ್ತಾರೆ. ಅದಕ್ಕೆ ಮಹತ್ವ ಕೊಡಬೇಡಿ ಎಂದಿದ್ದಾರೆ.

ಇದನ್ನೂ ಓದಿ: ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಬೆಳಗಾವಿ ವಿಭಜನೆಯಾಗಬೇಕು: ಉಮೇಶ್ ಕತ್ತಿ ಒತ್ತಾಯ

ಈ ಹಿಂದೆಯೂ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಎಂದು ಉಮೇಶ್ ಕತ್ತಿ ಕೆಲವು ಬಾರಿ ಹೇಳಿಕೆ ನೀಡಿದ್ದರು. 2024ರ ಚುನಾವಣೆ ನಂತರ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ. 2024ರ ನಂತರ ದೇಶದಲ್ಲಿ 50 ಹೊಸ ರಾಜ್ಯಗಳು ಉದಯಿಸಲಿವೆ. ಆಗ ಕರ್ನಾಟಕವೂ ಎರಡು ರಾಜ್ಯಗಳಾಗಲಿವೆ. ಧಾರವಾಡದಲ್ಲಿ ಹೈಕೋರ್ಟ್, ಬೆಳಗಾವಿಯಲ್ಲಿ ಸುವರ್ಣಸೌಧ ಇದೆ. ಉತ್ತರ ಕರ್ನಾಟಕ ರಾಜ್ಯವಾದಾಗ ಪ್ರತ್ಯೇಕ ರಾಜ್ಯಕ್ಕೆ ಬೇಕಾದ ಮೂಲಸೌಕರ್ಯ ನಮ್ಮಲ್ಲಿವೆ. ಕರ್ನಾಟಕದಾದ್ಯಂತ ಹರಡಿರುವ ಜನಸಂಖ್ಯೆಯ ಆಧಾರದ ಮೇಲೆ ಕರ್ನಾಟಕವೂ ಪ್ರತ್ಯೇಕ ರಾಜ್ಯವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರೇ ಈ ವಿಷಯದ ಬಗ್ಗೆ ಉಪಕ್ರಮ ತೆಗೆದುಕೊಳ್ಳುತ್ತಾರೆ. ಮಹಾರಾಷ್ಟ್ರದಿಂದ ಮೂರು ಹೊಸ ರಾಜ್ಯಗಳು, ಉತ್ತರಪ್ರದೇಶದಲ್ಲಿ ನಾಲ್ಕು ಮತ್ತು ಕರ್ನಾಟಕದಲ್ಲಿ ಎರಡು ಹೊಸ ರಾಜ್ಯಗಳನ್ನು ಘೋಷಿಸಲಾಗುವುದು ಎಂದು ಹೇಳಿದ್ದರು. ಇದು ತೀವ್ರ ಚರ್ಚೆಗೆ ಕಾರಣವಾಗಿತ್ತು.

Published On - 2:08 pm, Thu, 30 June 22

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ