AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಅರುಣ್​ ಯೋಗಿರಾಜ್​ರನ್ನ​ ಸನ್ಮಾನಿಸಿ, ಸುತ್ತೂರು ಮಠದ ಕೊಡುಗೆಯನ್ನು ಸ್ಮರಿಸಿದ ಅಮಿತ್​ ಶಾ

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಭಾಗಿಯಾಗಿದರು. ಈ ವೇಳೆ ಅಯೋಧ್ಯೆಯ ಬಾಲ ರಾಮನ ಮೂರ್ತಿಯನ್ನು ನಿರ್ಮಿಸಿರುವ ಶಿಲ್ಪಿ ಅರುಣ ಯೋಗಿರಾಜ್ ಅವರನ್ನು ಸನ್ಮಾನಿಸಿದರು.

ಮೈಸೂರಿನಲ್ಲಿ ಅರುಣ್​ ಯೋಗಿರಾಜ್​ರನ್ನ​ ಸನ್ಮಾನಿಸಿ, ಸುತ್ತೂರು ಮಠದ ಕೊಡುಗೆಯನ್ನು ಸ್ಮರಿಸಿದ ಅಮಿತ್​ ಶಾ
ಕೇಂದ್ರ ಗೃಹ ಸಚಿವ ಅಮಿತ್​ ಶಾ
ರಾಮ್​, ಮೈಸೂರು
| Edited By: ವಿವೇಕ ಬಿರಾದಾರ|

Updated on:Feb 11, 2024 | 2:04 PM

Share

ಮೈಸೂರು, ಫೆಬ್ರವರಿ 11: ನಂಜನಗೂಡು (Nanjangudu) ತಾಲೂಕಿನ ಸುತ್ತೂರಿನಲ್ಲಿ (Suttur Math) ನಡೆಯುತ್ತಿರುವ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ (Amit Shah) ಭಾಗಿಯಾಗಿದರು. ಈ ವೇಳೆ ಅಯೋಧ್ಯೆಯ ಬಾಲ ರಾಮನ ಮೂರ್ತಿಯನ್ನು ನಿರ್ಮಿಸಿರುವ ಶಿಲ್ಪಿ ಅರುಣ ಯೋಗಿರಾಜ್ (Arun Yogiraj)​ ಅವರನ್ನು ಸನ್ಮಾನಿಸಿದರು. ಬಳಿಕ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಅತಿಥಿಗೃಹ ಉದ್ಘಾಟಿಸಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ (Ayodhya) ಇತ್ತೀಚಿಗೆ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಿದೆ. ಬಾಲ ರಾಮನ ಮೂರ್ತಿ ನಿರ್ಮಾಣ ಮಾಡಿದ ಅರಣು ಯೋಗಿರಾಜ್​ ಅವರಿಗೆ ಸುತ್ತೂರು ಮಠ ಸನ್ಮಾನ ಮಾಡಿದೆ. ಅಯೋಧ್ಯೆಯಲ್ಲಿ ಸುತ್ತೂರು ಮಠದ ಶಾಖಾ ಮಠ ನಿರ್ಮಾಣ ಕಾರ್ಯ ಆರಂಭವಾಗಿದೆ ಎಂದು ತಿಳಿಸಿದರು.

ಸುತ್ತೂರು ಮಠದ ಹಿಂದಿನ 24 ಮಠಾಧೀಶರನ್ನು ಸ್ಮರಿಸಿಕೊಳ್ಳುತ್ತೇನೆ. ಸುತ್ತೂರು ಮಠ ನಿಸ್ವಾರ್ಥ ಸೇವೆಯನ್ನು ಮಾಡಿಕೊಂಡು ಬರುತ್ತಿದೆ. ಅಹಮದಾಬಾದ್ ಕಾರ್ಯಕ್ರಮವನ್ನು ರದ್ದುಪಡಿಸಿ ಇಲ್ಲಿಗೆ ಬಂದಿದ್ದೇನೆ. ಫೆಬ್ರವರಿ 6 ರಿಂದ 11 ರವರೆಗೆ ಸುತ್ತೂರು ಜಾತ್ರೆ ಆಯೋಜಿಸಲಾಗಿದೆ. ಜಾತ್ರೆಯಲ್ಲಿ ವಿಶೇಷ ಪೂಜೆ, ಸಾಮೂಹಿಕ ವಿವಾಹ, ದೇಶೀಯ ಕ್ರೀಡೆಗಳು, ರೈತರಿಗೆ ಸಂಬಂಧಿಸಿದ ಕೃಷಿ ಸೇರಿದಂತೆ ಎಲ್ಲ ಚಟುವಟಿಕೆ ನಡೆದಿವೆ. ಮಠದಲ್ಲಿ 20 ಸಾವಿರಕ್ಕೂ ಹೆಚ್ಚು ಆಡಳಿತ ಮಂಡಳಿ ಸಿಬ್ಬಂದಿ ಇದ್ದಾರೆ. ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದಾರೆ ಎಂದರು.

ಇದನ್ನೂ ಓದಿ: ಗ್ಯಾರಂಟಿಯಿಂದ ಬೊಕ್ಕಸ ಖಾಲಿ ಹೇಳಿಕೆ: ಅಮಿತ್ ಶಾ ಬಹಿರಂಗ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಸವಾಲು

ಇಲ್ಲಿನ ವಿದ್ಯಾಸಂಸ್ಥೆಯಲ್ಲಿ ವಿಶೇಷಚೇತನರಿಗೆ ಹೆಚ್ಚು ಒತ್ತು ನೀಡಲಾಗಿದೆ. ಸುತ್ತೂರು ಮಠದ ಕೊಡುಗೆಯನ್ನು ಬಿಜೆಪಿ ಸದಾ ಸ್ಮರಿಸಿಕೊಳ್ಳುತ್ತದೆ. ಪ್ರಧಾನಿ ನರೇಂದ್ರ ಮೋದಿಯವರು ಸಾಂಸ್ಕೃತಿಕ, ಯೋಗ, ಆಯುರ್ವೇದ, ಸುರಕ್ಷತೆ ಮತ್ತು ಭದ್ರತೆ ಕ್ಷೇತ್ರಕ್ಕೆ ಬಹಳ ಒತ್ತು ನೀಡಿದ್ದಾರೆ ಎಂದು ತಿಳಿಸಿದರು.

ನರೇಂದ್ರ ಮೋದಿ, ಅಮಿತ್ ಶಾ ಜೋಡೆತ್ತುಗಳು: ಸುತ್ತೂರು ಶ್ರೀ

ಒಂದು ಗಾಡಿ ಮುನ್ನಡೆಯಲು ಜೋಡಿ ಎತ್ತುಗಳು ಹೇಗೆ ಮುಖ್ಯ, ಹಾಗೆ ದೇಶವನ್ನು ನರೇಂದ್ರ ಮೋದಿ, ಅಮಿತ್ ಶಾ ಮುನ್ನಡೆಸುತ್ತಿದ್ದಾರೆ. ಇದು ನಮ್ಮ ಜಾತ್ರೆ ಎಂದು ಜನರು ಸುತ್ತೂರು ಜಾತ್ರೆಗೆ ಬರುತ್ತಾರೆ. ಗ್ರಾಮೀಣ ಜನರಿಗೆ ಧೈರ್ಯ, ವಿಶ್ವಾಸ ಮೂಡಿಸುವ ಕೆಲಸ ಆಗಿದೆ. ಅಮಿತ್ ಶಾ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಂತೋಷವಾಗಿದೆ. ಸರ್ದಾರ್ ವಲ್ಲಭ ಭಾಯಿ ಪಟೇಲ್ ಉಕ್ಕಿನ ಮನುಷ್ಯರಾಗಿದ್ದರು. ಅಮಿತ್ ಶಾ ಕೂಡ ಉಕ್ಕಿನ ವ್ಯಕ್ತಿ ಹೌದು, ಚಾಣಕ್ಯರೂ ಹೌದು. ಅರಮನೆಯಲ್ಲಿದ್ದ ಕೇಶವ ಪಂಡಿತ್ ಅವರು ಗುಜರಾತ್‌ಗೆ ಹೋಗಿದ್ದರು. ಕೇಶವ ಪಂಡಿತ್​ ಅವರು ಅಮಿತ್​ ಶಾ ಅವರಿಗೆ ಶಿಕ್ಷಣ ನೀಡಿದ್ದಾರೆ ಎಂದು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:57 pm, Sun, 11 February 24

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ