AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ ಅಮಿತ್ ಶಾ ಇಂದು ಮೈಸೂರಿಗೆ: ಇಲ್ಲಿದೆ ಪ್ರವಾಸದ ವೇಳಾಪಟ್ಟಿ

ವಿಧಾನಸಭೆ ಸಭೆ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರ ಸಚಿವ ಅಮಿತ್​​ ಶಾ ಮೈಸೂರಿಗೆ ಭೇಟಿ ನೀಡಲಿದ್ದಾರೆ. ಲೋಕಸಭಾ ಚುನಾವಣೆ ಸನಿಹದಲ್ಲೇ ಬಿಜೆಪಿ ಚಾಣಕ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿರುವುದು, ಕುತೂಹಲಕ್ಕೆ ಕಾರಣವಾಗಿದೆ. ಇನ್ನು ಕೇಂದ್ರ ಸಚಿವರ ಕಾರ್ಯಕ್ರಮದ ವಿವರ ಇಲ್ಲಿದೆ.

ಕೇಂದ್ರ ಸಚಿವ ಅಮಿತ್ ಶಾ ಇಂದು ಮೈಸೂರಿಗೆ: ಇಲ್ಲಿದೆ ಪ್ರವಾಸದ ವೇಳಾಪಟ್ಟಿ
ಅಮಿತ್​ ಶಾ ಮೈಸೂರು ಜಿಲ್ಲಾ ಪ್ರವಾಸ
ರಾಮ್​, ಮೈಸೂರು
| Edited By: |

Updated on:Feb 10, 2024 | 7:27 AM

Share

ಬೆಂಗಳೂರು, ಫೆ.10: ಲೋಕಸಭಾ ಚುನಾವಣೆ ಕೆಲವೆ ತಿಂಗಳು ಬಾಕಿ ಉಳಿದಿರುವಾಗಲೆ ಬಿಜೆಪಿ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್​​ ಶಾ ಅವರು ಇಂದು (ಫೆ.10) ಮೈಸೂರಿಗೆ (Mysore) ಆಗಮಿಸಲಿದ್ದಾರೆ. ವಿಧಾನಸಭೆ ಸಭೆ ಚುನಾವಣೆ ಬಳಿಕ ಅಮಿತ್​ ಶಾ ಅವರ ಇದೇ ಮೊದಲ ರಾಜ್ಯ ಪ್ರವಾಸವಾಗಿದೆ. ಇದು ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಇಂದು (ಶನಿವಾರ) ಕೇಂದ್ರ ಸಚಿವ ಅಮಿತ್ ಶಾ (Amit Shah) ಅವರು ರಾತ್ರಿ 10.50 ಗಂಟೆಗೆ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ ರಾಡಿಸನ್ ಬ್ಲೂ ಹೋಟೆಲ್‌ಗೆ ತೆರಳಲಿರುವ ಅಮಿತ್​​ ಶಾ, ಫೆ.11 ರಂದು ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಕಾರ್ಯಕ್ರಮದ ವಿವರ ಹೀಗಿದೆ

ಇನ್ನು ಫೆ.11 ರಂದು ಬೆಳಗ್ಗೆ 11 ಗಂಟೆಗೆ ಅಮಿತ್ ಶಾ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ ಚಾಮುಂಡೇಶ್ವರಿ ದರ್ಶನ‌ ಪಡೆದು ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಅಲ್ಲಿಂದ 11.45ಕ್ಕೆ ಹೆಲಿಕಾಪ್ಟರ್​ನಲ್ಲಿ ಸುತ್ತೂರು ಗ್ರಾಮಕ್ಕೆ ಪ್ರಯಾಣ ಬೆಳಸಲಿದ್ದು, ಸುತ್ತೂರು ಜಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಅದೇ ದಿನ ಮಧ್ಯಾಹ್ನ 1.30ಕ್ಕೆ ಸುತ್ತೂರು ಮಠದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದ್ದು, ಅದನ್ನು ಮುಗಿಸಿಕೊಂಡು ಮಧ್ಯಾಹ್ನ 2.30ಕ್ಕೆ ರಾಡಿಸನ್ ಬ್ಲೂ ಹೋಟೆಲ್‌ಗೆ ಆಗಮಿಸಲಿದ್ದಾರೆ.

ಇದನ್ನೂ ಓದಿ:ಬಿಜೆಪಿಗೆ ಜಗದೀಶ್ ಶೆಟ್ಟರ್​ ಕರೆತರಲು ಅಖಾಡಕ್ಕಿಳಿದ ಅಮಿತ್ ಶಾ; ಲಕ್ಷ್ಮಣ ಸವದಿ ಆಗಮನದ ನಿರೀಕ್ಷೆಯಲ್ಲಿ ರಾಜ್ಯ ನಾಯಕರು

ಮುಖಂಡರ ಜೊತೆ ಕೇಂದ್ರ ಸಚಿವ ಅಮಿತ್ ಶಾ ಸಭೆ

ನಂತರ ಮಧ್ಯಾಹ್ನ 2.40ಕ್ಕೆ ಕೇಂದ್ರ ಸಚಿವ ಅಮಿತ್ ಶಾ ಸಭೆ ನಿಗದಿಪಡಿಸಿದ್ದು, ಸುಮಾರು 2 ಗಂಟೆ ಕಾಲ ಮುಖಂಡರ ಜೊತೆ ಚರ್ಚೆ ನಡೆಯಲಿದೆ. ಈ ಸಭೆ ಮೂಲಕ ಚುನಾವಣಾ ಸಿದ್ಧತೆಗೆ ಅಮಿತ್ ಶಾ ಚಾಲನೆ ನೀಡಲಿದ್ದಾರಾ?,  ಸುತ್ತೂರು ಜಾತ್ರಾ ಮಹೋತ್ಸವದ ನೆಪದಲ್ಲಿ ಚುನಾವಣೆಗೆ ರಣತಂತ್ರ ಹೆಣೆಯಲು ಬಿಜೆಪಿ ಚಾಣಕ್ಯ ಆಗಮಿಸಿದರಾ?. ಇಂತಹ ಹತ್ತು ಹಲವು ಪ್ರಶ್ನೆಗಳು ಇದೀಗ ರಾಜಕೀಯ ಪಡಸಾಲೆಯಲ್ಲಿ ಶುರುವಾಗಿದೆ.

ರಾಜ್ಯದ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:42 pm, Thu, 8 February 24

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್