AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಒತ್ತುವರಿ ತೆರವು: 170 ಕೋಟಿ ರೂ. ಮೌಲ್ಯದ 163 ನಿವೇಶನ ಮುಡಾ ವಶಕ್ಕೆ

ಮೈಸೂರು ಕಸಬಾ ಹೋಬಳಿ ವ್ಯಾಪ್ತಿಯ ಬಸವನಹಳ್ಳಿ ಗ್ರಾಮ ಸೇರಿ, ವಿಜಯನಗರ 4ನೇ ಹಂತದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮಾಡಲಾಗಿದೆ ಒಟ್ಟು 170 ಕೋಟಿ ರೂ. ಮೌಲ್ಯದ 163 ನಿವೇಶನವನ್ನು ಮುಡಾ ವಶಕ್ಕೆ ಪಡೆದಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಒತ್ತುವರಿ ತೆರವು: 170 ಕೋಟಿ ರೂ. ಮೌಲ್ಯದ 163 ನಿವೇಶನ ಮುಡಾ ವಶಕ್ಕೆ
ಒತ್ತುವರಿ ಮಾಡಿದ್ದ ಜಾಗ ತೆರವು
TV9 Web
| Edited By: |

Updated on:Dec 24, 2021 | 1:20 PM

Share

ಮೈಸೂರು: ನಗರಾಭಿವೃದ್ಧಿ ಪ್ರಾಧಿಕಾರದಿಂದ ಒತ್ತುವರಿ ತೆರವು ಕಾರ್ಯ ಆರಂಭವಾಗಿದೆ. ಮೈಸೂರು ಕಸಬಾ ಹೋಬಳಿ ವ್ಯಾಪ್ತಿಯ ಬಸವನಹಳ್ಳಿ ಗ್ರಾಮ, ವಿಜಯನಗರ 4ನೇ ಹಂತದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮಾಡಲಾಗಿದೆ. ಒಟ್ಟು 170 ಕೋಟಿ ರೂ. ಮೌಲ್ಯದ 163 ನಿವೇಶನವನ್ನು ಮುಡಾ (Urban Development Authority) ವಶಕ್ಕೆ ಪಡೆದಿದೆ. 30X40 ವಿಸ್ತೀರ್ಣದ 19 ಸೈಟ್​, 20X30 ವಿಸ್ತೀರ್ಣದ 64 ಸೈಟ್​, 40X60 ವಿಸ್ತೀರ್ಣದ 35 ಸೈಟ್​, ಅನಿಮಿಯತ ಅಳತೆಯ 45 ಸೈಟ್ ಸೇರಿದಂತೆ​ 163 ನಿವೇಶನವನ್ನು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಇತ್ತೀಚೆಗೆ ನೂರು ಕೋಟಿ ಮೌಲ್ಯದ ಜಮೀನನ್ನು ಮುಡಾ ವಶಕ್ಕೆ ಪಡೆದಿತ್ತು. ಈಗ ಮತ್ತೆ ಮುಡಾ ಆಯುಕ್ತ ಡಿ.ಬಿ.ನಟೇಶ್​ ನೇತೃತ್ವದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆದಿದೆ.

ಈ ಹಿಂದೆ 100 ಕೋಟಿ ರೂ. ಮೌಲ್ಯದ 5.14 ಎಕರೆ ಒತ್ತುವರಿ ಜಾಗ ತೆರವು ಮಾಡಲಾಗಿತ್ತು ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದರು. ಮೈಸೂರು ಜಿಲ್ಲೆಯ ಬಸವನಹಳ್ಳಿಯಲ್ಲಿ ಒತ್ತುವರಿ ಮಾಡಿದ್ದ ಜಾಗವನ್ನು ತೆರವು ಮಾಡಿ, ಜಮೀನಿನಲ್ಲಿ ಹಾಕಿದ್ದ ಶೆಡ್ ತೆಗೆದು ಮುಡಾ ನಾಮಫಲಕ ಅಳವಡಿಸಿದ್ದಾರೆ. ಸುಮಾರು 100 ಕೋಟಿ ರೂಪಾಯಿ ಮೌಲ್ಯದ 5.14 ಎಕರೆ ಒತ್ತುವರಿ ಜಾಗವನ್ನು  ಡಿಸೆಂಬರ್ 19 ಅಧಿಕಾರಿಗಳು ತೆರವು ಮಾಡಿದ್ದರು.

ಬಸವನಹಳ್ಳಿ ಗ್ರಾಮದ ಮಹದೇವಯ್ಯ ಅವರಿಗೆ ಸೇರಿದ ಜಮೀನಿನಲ್ಲಿ ತೆರವು ಕಾರ್ಯ ಆರಂಭಗೊಂಡಿದೆ. ಮಹದೇವಯ್ಯ ಜಮೀನು ಸ್ವಾಧೀನ ಮಾಡಿಕೊಂಡಿದ್ದರು. ಅಲ್ಲದೇ ಭೂಮಿ‌ ನೀಡದೆ ಸಿವಿಲ್ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಮುಡಾ ಪರ ಮೈಸೂರು ಸಿವಿಲ್ ನ್ಯಾಯಾಲಯ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಶೆಡ್ ತೆರವುಗೊಳಿಸಿ ಮುಡಾ ನಾಮಫಲಕ ಅಳವಡಿಸಲಾಗಿದೆ.

ಸರ್ವೇ ನಂ 118ರಲ್ಲಿ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಒತ್ತುವರಿ ಮಾಡಿದ್ದು, ಜಮೀನಿನಲ್ಲಿ ನಿರ್ಮಾಣ ಮಾಡಿದ್ದ ಎರಡು ಶೆಡ್​ಗಳನ್ನು ತೆರವು ಮಾಡಲಾಗಿದೆ. ಪೊಲೀಸ್ ಬಿಗಿ ಬಂದೊಬಸ್ತ್‌ನಲ್ಲಿ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿದ್ದಾರೆ.

ಇದನ್ನೂ ಓದಿ:

ಬೆಂಗಳೂರು: ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಿಸದಂತೆ ನೀಡಿದ್ದ ತಡೆಯಾಜ್ಞೆ ತೆರವು; ಮಂಗಳವಾರವೇ ಫಲಿತಾಂಶ

ಹೋರಿ ಬೆದರಿಸುವ ಸ್ಪರ್ಧೆ ಮೇಲಿನ ನಿಷೇಧ ತೆರವುಗೊಳಿಸುವಂತೆ ಹಾವೇರಿಯಲ್ಲಿ ಸ್ವಾಮೀಜಿಗಳ ನೇತೃತ್ವದ ಪಾದಯಾತ್ರೆ

Published On - 1:13 pm, Fri, 24 December 21

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ