AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ; 100 ಕೋಟಿ ರೂ. ಮೌಲ್ಯದ 5.14 ಎಕರೆ ಒತ್ತುವರಿ ಜಾಗ ತೆರವು

ಮಹದೇವಯ್ಯ ಜಮೀನು ಸ್ವಾಧೀನ ಮಾಡಿಕೊಂಡಿದ್ದರು. ಅಲ್ಲದೇ ಭೂಮಿ‌ ನೀಡದೆ ಸಿವಿಲ್ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಮುಡಾ ಪರ ಮೈಸೂರು ಸಿವಿಲ್ ನ್ಯಾಯಾಲಯ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಶೆಡ್ ತೆರವುಗೊಳಿಸಿ ಮುಡಾ ನಾಮಫಲಕ ಅಳವಡಿಸಲಾಗಿದೆ.

ಮೈಸೂರು: ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ; 100 ಕೋಟಿ ರೂ. ಮೌಲ್ಯದ 5.14 ಎಕರೆ ಒತ್ತುವರಿ ಜಾಗ ತೆರವು
ಒತ್ತುವರಿ ಮಾಡಿದ್ದ ಜಾಗ ತೆರವು
Follow us
TV9 Web
| Updated By: preethi shettigar

Updated on:Dec 19, 2021 | 9:16 AM

ಮೈಸೂರು: ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು (Urban Development)  ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಮೈಸೂರು ಜಿಲ್ಲೆಯ ಬಸವನಹಳ್ಳಿಯಲ್ಲಿ ಒತ್ತುವರಿ ಮಾಡಿದ್ದ ಜಾಗವನ್ನು ತೆರವು ಮಾಡಿ, ಜಮೀನಿನಲ್ಲಿ ಹಾಕಿದ್ದ ಶೆಡ್ ತೆಗೆದು ಮುಡಾ ನಾಮಫಲಕ ಅಳವಡಿಸಿದ್ದಾರೆ. ಸುಮಾರು 100 ಕೋಟಿ ರೂಪಾಯಿ ಮೌಲ್ಯದ 5.14 ಎಕರೆ ಒತ್ತುವರಿ ಜಾಗವನ್ನು ಇಂದು (ಡಿಸೆಂಬರ್ 19) ಅಧಿಕಾರಿಗಳು ತೆರವು ಮಾಡಿದ್ದಾರೆ.

ಬಸವನಹಳ್ಳಿ ಗ್ರಾಮದ ಮಹದೇವಯ್ಯ ಅವರಿಗೆ ಸೇರಿದ ಜಮೀನಿನಲ್ಲಿ ತೆರವು ಕಾರ್ಯ ಆರಂಭಗೊಂಡಿದೆ. ಮಹದೇವಯ್ಯ ಜಮೀನು ಸ್ವಾಧೀನ ಮಾಡಿಕೊಂಡಿದ್ದರು. ಅಲ್ಲದೇ ಭೂಮಿ‌ ನೀಡದೆ ಸಿವಿಲ್ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಮುಡಾ ಪರ ಮೈಸೂರು ಸಿವಿಲ್ ನ್ಯಾಯಾಲಯ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಶೆಡ್ ತೆರವುಗೊಳಿಸಿ ಮುಡಾ ನಾಮಫಲಕ ಅಳವಡಿಸಲಾಗಿದೆ.

ಸರ್ವೇ ನಂ 118ರಲ್ಲಿ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಒತ್ತುವರಿ ಮಾಡಿದ್ದು, ಜಮೀನಿನಲ್ಲಿ ನಿರ್ಮಾಣ ಮಾಡಿದ್ದ ಎರಡು ಶೆಡ್​ಗಳನ್ನು ತೆರವು ಮಾಡಲಾಗಿದೆ. ಪೊಲೀಸ್ ಬಿಗಿ ಬಂದೊಬಸ್ತ್‌ನಲ್ಲಿ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿದ್ದಾರೆ.

ಈ ಹಿಂದೆಯೂ ಕೂಡ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಜತೆಗೆ ತೆರವು ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ತರಾಟೆಗೂ ಕೂಡ ತೆಗೆದುಕೊಳ್ಳಲಾಗಿದೆ. ಇದಕ್ಕೆ ಒಂದು ಉದಾಹರಣೆ ನೀಡುವುದಾದರೆ,

4 ಅಧಿಕಾರಿಗಳಿಗೆ ಕೊಪ್ಪಳ ಡಿಸಿ ನೋಟಿಸ್ ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹಂಪಿ ಪಕ್ಕದ ವಿರೂಪಾಪೂರ ಗಡ್ಡಿಯ ಅಕ್ರಮ ರೆಸಾರ್ಟ್​ಗಳನ್ನು ಕೊಪ್ಪಳ ಜಿಲ್ಲಾಡಳಿತ ನೆಲಸಮ ಮಾಡಿತ್ತು. ಇದರ ಬೆನ್ನಲ್ಲೇ ರೆಸಾರ್ಟ್ ಮಾಲೀಕರು ಪಟ್ಟಾ ಭೂಮಿಯಲ್ಲಿ ಅನಧಿಕೃತವಾಗಿ ರೆಸಾರ್ಟ್ ನಿರ್ಮಾಣ ಮಾಡಿರುವ ಆರೋಪ ಈಗ ಮತ್ತೆ ಕೇಳಿ ಬಂದಿದೆ. ಇದಕ್ಕೂ ಕೊಪ್ಪಳ ಜಿಲ್ಲಾಡಳಿತ ಬ್ರೇಕ್ ಹಾಕಲು ಮುಂದಾಗಿತ್ತು. ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯ ಹಂಪಿ ಪ್ರದೇಶ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ತಲೆ ಎತ್ತಿರುವ ರೆಸಾರ್ಟ್​ಗಳನ್ನು ತೆರವು ಮಾಡಿ. ಇಲ್ಲದಿದ್ದರೆ ಅದಕ್ಕೆ ನೀವೇ ಹೊಣೆಗಾರರಾಗಿ ಎಂದು ಕೊಪ್ಪಳ ಜಿಲ್ಲಾಧಿಕಾರಿ ಎಸ್.ವಿಕಾಸ ಕಿಶೋರ ಅವರು ನೋಟಿಸ್ ನೀಡಿದ್ದರು.

ಹಂಪಿ ಪರಂಪರೆ ಪ್ರದೇಶ ವ್ಯಾಪ್ತಿಗೆ ಒಳಪಡುವ ಕೊಪ್ಪಳದ ಗಂಗಾವತಿ ತಾಲೂಕಿನ ವಿರೂಪಾಪೂರ ಗಡ್ಡಿಯಲ್ಲಿದ್ದ ಅಕ್ರಮ ರೆಸಾರ್ಟ್​ಗಳು ಕಳೆದ 2 ವರ್ಷದ ಹಿಂದೆ ನೆಲಸಮ ಆಗಿದ್ದವು. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಡಳಿತ ಇಲ್ಲಿನ ರೆಸಾರ್ಟ್​ಗಳನ್ನು ತೆರವು ಮಾಡಿತ್ತು. ವಿರೂಪಾಪೂರ ಗಡ್ಡಿಯಲ್ಲಿನ ರೆಸಾರ್ಟ್ ನೆಲಸಮ ಆದ ನಂತರ ಗಂಗಾವತಿ ತಾಲೂಕಿನ ಆನೇಗೊಂದಿ, ಹನುಮನಹಳ್ಳಿ, ಜಂಗ್ಲಿ, ಸಣಾಪೂರ, ರಂಗಾಪೂರ, ಗಡ್ಡಿ, ಪಂಪಾ ಸರೋವರ ಸುತ್ತಮುತ್ತ ಪಟ್ಟಾ ಭೂಮಿಯಲ್ಲಿ ಮತ್ತೆ ಅಕ್ರಮವಾಗಿ ರೆಸಾರ್ಟ್​ಗಳು ತಲೆ ಎತ್ತುತ್ತಿವೆ. ಈ ಕಾರಣಕ್ಕೆ ಕೊಪ್ಪಳ ಜಿಲ್ಲಾಧಿಕಾರಿ ಎಸ್.ವಿಕಾಸ ಕಿಶೋರ್ ಅವರು ಹೊಸಪೇಟೆಯ ಹಂಪಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು, ಕೊಪ್ಪಳ ಉಪ ವಿಭಾಗಾಧಿಕಾರಿ, ಗಂಗಾವತಿಯ ತಹಶೀಲ್ದಾರ್ ಮತ್ತು ತಾಲೂಕು ಪಂಚಾಯತ್ ಇಒಗೆ ನೋಟಿಸ್ ನೀಡಿದ್ದರು.

ಇದನ್ನೂ ಓದಿ: ಅಕ್ರಮ ಕಟ್ಟಡ ತೆರವು ವಿಚಾರ: ಬಿಬಿಎಂಪಿ ಕಾರ್ಯವೈಖರಿಗೆ ಹೈಕೋರ್ಟ್​ ಗರಂ

Assam Violence: ಒತ್ತುವರಿ ತೆರವುಗೊಳಿಸಲು ಬಂದ ಪೊಲೀಸರೊಂದಿಗೆ ಸಂಘರ್ಷ: ಇಬ್ಬರ ಸಾವು, ಜನರ ಮೇಲಿನ ಹಲ್ಲೆ ಕ್ಯಾಮೆರಾದಲ್ಲಿ ದಾಖಲು

Published On - 8:30 am, Sun, 19 December 21

ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು