AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಧ ಆಯ್ತು, ಸ್ವಲ್ಪ ಆಯ್ತು ಅಂದರೆ ಹೆಣ ಎತ್ತು ಬಿಡ್ತೀನಿ; ಮೈಸೂರಿನಲ್ಲಿ ಪುರಸಭೆ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ಸಚಿವ ವಿ ಸೋಮಣ್ಣ

ನಂಜನಗೂಡು ನಗರಸಭೆ ಆಯುಕ್ತ ಸಭೆಗೆ ಗೈರಾದ ಹಿನ್ನೆಲೆ ಅಧಿಕಾರಿ ವಿರುದ್ಧ ಸಚಿವ ಸೋಮಣ್ಣ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಮಂತ್ರಿ ಬಂದಾಗ ಅಧಿಕಾರಿ ಬರಬೇಕೆಂಬ ಸೌಜನ್ಯವಿಲ್ಲವಾ? ಈ ಸಭೆಗಿಂತಾ ಬೇರೆ ಏನು ಕೆಲಸ ಇದೆ ಅವನಿಗೆ ಅಂತ ಕಿಡಿಕಾರಿದ್ದಾರೆ.

ಅರ್ಧ ಆಯ್ತು, ಸ್ವಲ್ಪ ಆಯ್ತು ಅಂದರೆ ಹೆಣ ಎತ್ತು ಬಿಡ್ತೀನಿ; ಮೈಸೂರಿನಲ್ಲಿ ಪುರಸಭೆ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ಸಚಿವ ವಿ ಸೋಮಣ್ಣ
ಸಚಿವ ವಿ ಸೋಮಣ್ಣ
TV9 Web
| Edited By: |

Updated on:Jan 24, 2022 | 2:02 PM

Share

ಮೈಸೂರು: ಇಂದು (ಜ.24) ನಡೆದ ಜಿಲ್ಲಾ ಪಂಚಾಯತಿ ಸಭೆಯಲ್ಲಿ ಸಚಿವ ವಿ ಸೋಮಣ್ಣ (V Somanna) ಬನ್ನೂರು ಪುರಸಭೆ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು. ಅರ್ಧ ಆಯ್ತು, ಸ್ವಲ್ಪ ಆಯ್ತು ಅಂದರೆ ಹೆಣ ಎತ್ತು ಬಿಡ್ತೀನಿ ಅಂತ ಅಧಿಕಾರಿಗಳಿಗೆ ಗದರಿದರು. ವಸತಿ ಇಲಾಖೆ ಮನೆಗಳು ಸೋರುತ್ತಿವೆ ಎಂದು ಸಚಿವರಿಗೆ ಶಾಸಕ ಅಶ್ವಿನ್ ಕುಮಾರ್ ದೂರು ನೀಡಿದ ಹಿನ್ನೆಲೆ ಅಧಿಕಾರಿಗೆ ಪಟ್ಟಿ ಸಿದ್ಧಮಾಡಿಕೊಂಡು ಬರಲು ಸೂಚನೆ ನೀಡಿದ ಸೋಮಣ್ಣ, ಕೆಲಸ ಮಾಡಿಸಬೇಕು, ಅರ್ಧ ಆಯ್ತು ಅಂದರೆ ಸರಿಯಿರಲ್ಲ ಅಂತ ತರಾಟೆಗೆ ತೆಗೆದುಕೊಂಡರು.

ನಂಜನಗೂಡು ನಗರಸಭೆ ಆಯುಕ್ತ ಸಭೆಗೆ ಗೈರಾದ ಹಿನ್ನೆಲೆ ಅಧಿಕಾರಿ ವಿರುದ್ಧ ಸಚಿವ ಸೋಮಣ್ಣ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಮಂತ್ರಿ ಬಂದಾಗ ಅಧಿಕಾರಿ ಬರಬೇಕೆಂಬ ಸೌಜನ್ಯವಿಲ್ಲವಾ? ಈ ಸಭೆಗಿಂತಾ ಬೇರೆ ಏನು ಕೆಲಸ ಇದೆ ಅವನಿಗೆ ಅಂತ ಕಿಡಿಕಾರಿದ್ದಾರೆ. ಬೇರೆ ಸಭೆ ಮಾಡುವುದಕ್ಕೆ ಅವನಿಗೆಷ್ಟು ಧಮ್ ಎಂದು ಹೇಳಿದಾಗ ಶಾಸಕ ಹರ್ಷವರ್ಧನ್ ಸಮಜಾಯಿಷಿ ನೀಡಲು ಬಂದರು. ಆಗ ಹರ್ಷವರ್ಧನ್ ವಿರುದ್ಧವೂ ಸಚಿವರು ಗರಂ ಆಗಿದ್ದಾರೆ. ನಿನ್ನ ಕೆಲಸ ಏನು ಇದೆಯೋ ಅಷ್ಟು ಮಾತ್ರ ನನಗೆ ಹೇಳು. ನಾನು ಕೂಡ 40 ವರ್ಷದಿಂದ ಇಂತಹದ್ದನ್ನು ಕಂಡಿದ್ದೇನೆ. ಅವನ ವಿಚಾರ ನಾನು ನೋಡಿಕೊಳ್ಳುತ್ತೇನೆಂದು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಆರೋಪಕ್ಕೆ ಸೋಮಣ್ಣ ತಿರುಗೇಟು ಒಂದು ಮನೆಯನ್ನೂ ಕೊಟ್ಟಿಲ್ಲವೆಂದು ಆರೋಪಿಸುತ್ತಾರೆ. ಸಿದ್ದರಾಮಯ್ಯ ಕಾಲದಲ್ಲಿ ಮಾಡಿದ ತಪ್ಪು ಸರಿಪಡಿಸಿದ್ದೇವೆ. ಅವರ ಅವಧಿಯಲ್ಲಾದ ಅಡೆತಡೆಗಳನ್ನು ಬಗೆಹರಿಸಿದ್ದೇನೆ. ಕೇಂದ್ರದ ಆ್ಯಪ್‌ನಲ್ಲಿ ಮಾಹಿತಿ ಅಪ್‌ಡೇಟ್ ಮಾಡಬೇಕಿತ್ತು. ರಾಜ್ಯ ಸರ್ಕಾರ ತಮ್ಮ ಆ್ಯಪ್‌ನಲ್ಲಿ ಅಪ್‌ಡೇಟ್ ಮಾಡಿದೆ. ಇದು ಸಿದ್ದರಾಮಯ್ಯನವರ ಕಾಲದಲ್ಲಿ ಆಗಿರುವ ಎಡವಟ್ಟು. ಸಿದ್ದರಾಮಯ್ಯ ಸೂಕ್ತ ಮಾಹಿತಿ ಇಲ್ಲದೆ ಮಾತಾಡುತ್ತಾರೆ ಅಂತ ಸಿದ್ದರಾಮಯ್ಯ ಹೇಳಿಕೆಗೆ ಸೋಮಣ್ಣ ತಿರುಗೇಟು ನೀಡಿದ್ದಾರೆ

ಮೇಕೆದಾಟು ಯೋಜನೆ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಮ್ಮಪ್ಪನಾಣೆ ನಾವೇ ಮೇಕೆದಾಟು ಯೋಜನೆ ಮಾಡುತ್ತೇವೆ. ಕೇಂದ್ರ ಹಾಗೂ ರಾಜ್ಯದಲ್ಲಿ ನಮ್ಮದೇ ಸುಭದ್ರ ಸರ್ಕಾರಗಳಿವೆ. ಎಲ್ಲವೂ ಸುಸೂತ್ರವಾಗಿ ಸಾಗುತ್ತಿವೆ, ಯಾರಿಗೂ ಚಿಂತೆ ಬೇಡ. ಕೆಲ ಶಾಸಕರ ಹೇಳಿಕೆಗಳಿಗೆ ಬೇರೆ ಬೇರೆ ಅರ್ಥ ಕಲ್ಪಿಸಬೇಡಿ. ಕೆಲವರಿಗೆ ಸಂಜೆಯಾದ್ರೆ ಅಲ್ಲಿ ಇಲ್ಲಿ ಮಾತಾಡುವ ಅಭ್ಯಾಸ. ಅಲ್ಲಿ ಇಲ್ಲಿ ಕೂತು ಮಾತನಾಡುವ ಅಭ್ಯಾಸ ನನಗೆ ಇಲ್ಲ ಅಂತ ಹೇಳಿದರು.

ಶಾಸಕ ನಾಗೇಂದ್ರಗೆ ಸಚಿವ ವಿ ಸೋಮಣ್ಣ ಪಾಠ ಸ್ಲಂ ಬಗ್ಗೆ ಶಾಸಕ ನಾಗೇಂದ್ರಗೆ ಸಚಿವ ವಿ ಸೋಮಣ್ಣ ಪಾಠ ಮಾಡಿದ್ದಾರೆ. ನಮ್ಮಿಂದ ಏನು ಬೇಕು ಎಲ್ಲವನ್ನೂ ಕೊಡುತ್ತೇವೆ. ಫಲಾನುಭವಿಗಳನ್ನು ಆಯ್ಕೆ‌ ಮಾಡಿ. ನೀವು ಸಂಸದ ಪ್ರತಾಪ್ ಸಿಂಹ ಜತೆ ಕುಳಿತು ಪಟ್ಟಿ‌ ಮಾಡಿ. ಶಾಸಕ‌ ನಾಗೇಂದ್ರಗೆ ಸಲಹೆ ನೀಡಿ. ಸ್ಲಂ‌ ಬಗ್ಗೆ ಸಿಎಂ ಬಳಿ ಹೋಗಿ ಕೇಳಿದರೆ ಆಗುತ್ತದೆ. ನಾನು ಕೇವಲ ಶಾಸಕನಾಗಿದ್ದೇನೆ, ನೀವು ಸಚಿವರಾಗಿದ್ದೀರಿ ಎಂದು ಸೋಮಣ್ಣ ಅಭಿಪ್ರಾಯಪಟ್ಟರು.

ಇದನ್ನೂ ಓದಿ

ಬಿಜೆಪಿ ಸರ್ಕಾರ ಬಂದಾಗಲೆಲ್ಲಾ ಅವರೇ ಸಚಿವರಾಗಬೇಕಾ? ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವಾ? – ರೇಣುಕಾಚಾರ್ಯ ಗರಂ

ಮೈಸೂರಿನ ಕೆರೆಗಳಲ್ಲಿ ಅತಿಥಿಗಳ ಕಲರವ; ಚಳಿಗಾಲವೆಂದು ಮಂಗೋಲಿಯ, ರಷ್ಯಾದಿಂದ ಹಾರಿಬಂದ ಹೆಬ್ಬಾತುಗಳು

Published On - 1:45 pm, Mon, 24 January 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?