AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸುಡುಗಾಡು ಸಿದ್ದ’ ಮಾಡಿದ್ದನ್ನು ನಾವು ಸರಿ ಮಾಡಿದ್ದೇವೆ; ಸಿದ್ದರಾಮಯ್ಯ ವಿರುದ್ಧ ವಸತಿ ಸಚಿವ ವಿ ಸೋಮಣ್ಣ ಕಿಡಿ

ಪದೇಪದೆ ಮನೆಗಳನ್ನು ನೀಡಿಲ್ಲವೆಂದು ಹೇಳಬೇಡಿ. ನೂರು ಬಾರಿ ಸುಳ್ಳು ಹೇಳಿದರೆ ಸತ್ಯವಾಗುವುದಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ವಿ ಸೋಮಣ್ಣ, ನಾನು, ನೀವು ಇಬ್ಬರೂ ಒಂದೇ ಗರಡಿಯಲ್ಲಿ ಇದ್ದವರು.

'ಸುಡುಗಾಡು ಸಿದ್ದ' ಮಾಡಿದ್ದನ್ನು ನಾವು ಸರಿ ಮಾಡಿದ್ದೇವೆ; ಸಿದ್ದರಾಮಯ್ಯ ವಿರುದ್ಧ ವಸತಿ ಸಚಿವ ವಿ ಸೋಮಣ್ಣ ಕಿಡಿ
ವಸತಿ ಸಚಿವ ವಿ ಸೋಮಣ್ಣ
TV9 Web
| Edited By: |

Updated on:Feb 12, 2022 | 12:13 PM

Share

ಮೈಸೂರು: ‘ಸುಡುಗಾಡು ಸಿದ್ದ’ ಮಾಡಿದ್ದನ್ನು ನಾವು ಸರಿ ಮಾಡಿದ್ದೇವೆ ಅಂತ ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ವಿರುದ್ಧ ವಸತಿ ಸಚಿವ ವಿ ಸೋಮಣ್ಣ (V Somanna) ಕಿಡಿ ಕಾರಿದ್ದಾರೆ. ಅವರ ಕಾಲದಲ್ಲಿ ಬರೀ ಘೋಷಣೆ ಆಗಿತ್ತು. ನಾವು ಮನೆ ಕಟ್ಟಿಕೊಡುತ್ತಿದ್ದೇವೆ. ಇದು ನಿರಂತರ ಪ್ರಕ್ರಿಯೆಯಾಗಿದೆ. ರಾಜಕಾರಣಕ್ಕಾಗಿ ನನ್ನ ಮೇಲೆ ಆರೋಪ ಮಾಡಬೇಡಿ. ನಾವು ಕೊಟ್ಟಿದ್ದು, ನೀವು ಕೊಟ್ಟಿದ್ದು ಅನ್ನುವುದಲ್ಲ. ಜನರಿಗೆ ಮನೆ ಸಿಗಬೇಕು. ಸಿದ್ದರಾಮಯ್ಯ ಸಹ ಮನೆಯಿಂದ ತಂದು ಕೊಟ್ಟಿಲ್ಲ. ನಾನು ಸಹ ಮನೆಯಿಂದ ತಂದು ಕೊಡಲ್ಲ. ಇನ್ನು ಮುಂದೆಯಾದರೂ ಸೋಮಣ್ಣನನ್ನು ಟಾರ್ಗೆಟ್ ಮಾಡುವುದನ್ನು ಬಿಡಿ ಅಂತ ಸಚಿವರು ಹೇಳಿದರು.

ಪದೇಪದೆ ಮನೆಗಳನ್ನು ನೀಡಿಲ್ಲವೆಂದು ಹೇಳಬೇಡಿ. ನೂರು ಬಾರಿ ಸುಳ್ಳು ಹೇಳಿದರೆ ಸತ್ಯವಾಗುವುದಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ವಿ ಸೋಮಣ್ಣ, ನಾನು, ನೀವು ಇಬ್ಬರೂ ಒಂದೇ ಗರಡಿಯಲ್ಲಿ ಇದ್ದವರು. ನಿಮಗೆ ಅದೃಷ್ಟ ಇದ್ದು ಮುಖ್ಯಮಂತ್ರಿ ಆಗಿದ್ದೀರಿ. ನನಗೂ ಎಲ್ಲಾ ಅರ್ಹತೆ ಇದೆ. ನಾಲಗೆ ಮೇಲೆ ಹಿಡಿತವಿಟ್ಟುಕೊಂಡು ಮಾತನಾಡಿ ಅಂತ ಕಿಡಿಕಾರಿದ್ದಾರೆ.

ಇದೇ ವೇಳೆ ಹಿಜಾಬ್, ಕೇಸರಿ ವಿವಾದ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿದ ಸೋಮಣ್ಣ, ಸಂಘಟನೆಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಯಾರ್ ಯಾರು ಏನ್ ಮಾಡುತ್ತಿದ್ದಾರೆ ಎನ್ನುವುದನ್ನು ಸರ್ಕಾರ ಗಂಭೀರವಾಗಿ ಗಮನಿಸುತ್ತಿದೆ. ಇಲ್ಲಿ ಯಾರು ದೊಡ್ಡವರಲ್ಲ, ಎಲ್ಲರಿಗಿಂತ ದೊಡ್ಡದು ದೇಶ. ಸಮಾಜದ ಸ್ವಾಸ್ಥ್ಯ ಹಾಳು ಮಾಡುವಂತಹ ಸಂಘಟನೆಗಳನ್ನು ಬಗ್ಗು ಬಡಿಯುವ ಕೆಲಸವನ್ನ ಸರ್ಕಾರ ಮಾಡಲಿದೆ. ಘಜಿನಿ ಮಹಮ್ಮದ್ 17 ಬಾರಿ ದಂಡೆತ್ತಿ ಬಂದ. ಅನೇಕ ರಾಜರು ದಾಳಿ ಮಾಡಿದರು. ಆದರೂ ಭಾರತ ಭಾರತವಾಗಿಯೇ ಇದೆ. ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡದಿರಿ ಅಂತ ಸಚಿವರು ಹೇಳಿದರು.

ಇದನ್ನೂ ಓದಿ

ಅಸಾದುದ್ದೀನ್ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ; ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು

ಜಯತೀರ್ಥ, ಸತ್ಯ ಮೆಚ್ಚಿದ ‘ಗಿಲ್ಕಿ’ ಟ್ರೇಲರ್​; ಇದು ಅಪರೂಪದ ಪ್ರೇಮಕಥೆಯ ವಿಭಿನ್ನ ಪ್ರಯತ್ನ

Published On - 12:13 pm, Sat, 12 February 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ