AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಷೇತರ ಅಭ್ಯರ್ಥಿಯಾಗಿ ನ 23ಕ್ಕೆ ನಾಮಪತ್ರ ಸಲ್ಲಿಸಲು ವಾಟಾಳ್ ನಾಗರಾಜ್ ನಿರ್ಧಾರ

ಕಾಂಗ್ರೆಸ್ ಪಕ್ಷದವರು ನನಗೆ ಬೆಂಬಲ ಕೊಟ್ಟರೆ ನಿಮಗೆ-ನನಗೆ ಇಬ್ಬರಿಗೂ ಅನುಕೂಲ ಆಗಲಿದೆ ಎಂದು ಹೇಳಿದರು.

ಪಕ್ಷೇತರ ಅಭ್ಯರ್ಥಿಯಾಗಿ ನ 23ಕ್ಕೆ ನಾಮಪತ್ರ ಸಲ್ಲಿಸಲು ವಾಟಾಳ್ ನಾಗರಾಜ್ ನಿರ್ಧಾರ
ಕನ್ನಡ ಪರ ಹಿರಿಯ ಹೋರಾಟಗಾರ ವಾಟಾಳ್​ ನಾಗರಾಜ್ ​
TV9 Web
| Edited By: |

Updated on: Nov 20, 2021 | 3:06 PM

Share

ಮೈಸೂರು: ಕರ್ನಾಟಕ ವಿಧಾನಪರಿಷತ್​ನ ಪಕ್ಷೇತರ ಅಭ್ಯರ್ಥಿಯಾಗಿ ನ 23ರಂದು ನಾಮಪತ್ರ ಸಲ್ಲಿಸುವುದಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು. ವಿಧಾನಪರಿಷತ್​ ಸದಸ್ಯ ಸ್ಥಾನವು ಚಿನ್ನ, ಬೆಳ್ಳಿ ವ್ಯಾಪಾರಿಗಳಿಗಲ್ಲ. ರಿಯಲ್ ಎಸ್ಟೇಟ್​ ಮಾಡುವವರಿಗಲ್ಲ ಪರಿಷತ್ ಸ್ಥಾನ ಎಂದು ಹೇಳಿದ ಅವರು, ಸಹಕಾರ ನೀಡುವಂತೆ ಕಾಂಗ್ರೆಸ್​ನವರನ್ನು ಕೇಳಿದ್ದೇನೆ ಎಂದು ಮಾಹಿತಿ ನೀಡಿದರು. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಬುದ್ಧ ರಾಜಕಾರಿಣಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ನನಗೆ ಬೇಕಾದವರು. ಅವರ ಸಹಕಾರ ಸಿಗಬಹುದು ಎಂಬ ನಿರೀಕ್ಷೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ವಿಧಾನಪರಿಷತ್​ನ 25 ಸ್ಥಾನಗಳಿಗೆ ಡಿ.10ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಪಕ್ಷದವರು ನನಗೆ ಬೆಂಬಲ ಕೊಟ್ಟರೆ ನಿಮಗೆ-ನನಗೆ ಇಬ್ಬರಿಗೂ ಅನುಕೂಲ ಆಗಲಿದೆ. ಈ ಮಾತನ್ನ ವಿಶ್ವಾಸಕ್ಕೆ ತೆಗೆದುಕೊಂಡು ಸಹಕಾರ ಕೊಡಿ ಎಂದು ಮನವಿ ಮಾಡಿದರು.

ಮಳೆಹಾನಿಯ ಬಗ್ಗೆ ಉನ್ನತ ಮಟ್ಟದ ಪರಿಶೀಲನೆ ಆಗಬೇಕು. ಮಳೆಯಿಂದ ರಾಜ್ಯದಲ್ಲಿ ₹ 5,000 ಕೋಟಿ ನಷ್ಟವಾಗಿದೆ. ಸಂಕಷ್ಟಕ್ಕೆ ಸಿಲುಕಿದವರ ರಕ್ಷಣೆಗೆ ಸರ್ಕಾರ ಧಾವಿಸಬೇಕು. ಜನರು ಸತ್ತಿದ್ದಾರೆ, ಸೇತುವೆಗಳು ಮುಳುಗಿವೆ. ರೈತರಿಗೆ, ಹೂ ಬೆಳೆಗಾರರಿಗೆ ಸಾಕಷ್ಟು ಸಮಸ್ಯೆ ಆಗಿದೆ. ಇದನ್ನ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.

ಮುಂಬರುವ ಪರಿಷತ್ ಚುನಾವಣೆಯಲ್ಲಿ ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ತಿಳಿಸಿದರು. ಚುನಾವಣೆ ಎಂದರೆ ಕಡುಬು ತಿಂದ ಹಾಗೆ ಅಲ್ಲ. ಚುನಾವಣೆಗೆ ನಿಂತ ಎಲ್ಲರಿಗೂ ನೀವು ಮತ ಹಾಕಿ. ಒಂದೇ ಒಂದು ಮತ ಹಾಕಿ ಎಂದರೆ ಅದನ್ನು ಮಾಡಬೇಡಿ ಎಂದು ಒತ್ತಾಯಿಸಿದರು.

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್​ಗೆ ಆಯ್ಕೆಯಾಗಲು ನಡೆಯುವ ಚುನಾವಣೆಯಲ್ಲಿ ನಾನು ಕಣಕ್ಕಿಳಿಯುತ್ತೇನೆ. ಈ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳೇ ಮತದಾರರಾಗಿರುತ್ತಾರೆ. ಎರಡು ಮತ ಚಲಾವಣೆಗೆ ಅವಕಾಶವಿದೆ. ನನಗೊಂದು ಮತ ಕೊಡಿ ಉಳಿದೊಂದು ಮತವನ್ನು ಬೇರೆ ಯಾರಿಗೆ ಬೇಕಾದರೂ ಚಲಾಯಿಸಿ. ನನ್ನಂಥವನು ಸದನದಲ್ಲಿ ಇರಬೇಕು ಎಂದು ಹೇಳಿದರು.

ಇದನ್ನೂ ಓದಿ: ಹಿಂದಿ ಭಾಷೆ ವಿರುದ್ಧ ಕರಾಳ ದಿನ; ನವೆಂಬರ್ 21ರಿಂದ ಚಳುವಳಿ ನಡೆಸಲು ವಾಟಾಳ್ ಕರೆ ಇದನ್ನೂ ಓದಿ: ನನ್ನಂಥವನು ವಿಧಾನಸೌಧಕ್ಕೆ ಹೋಗಬೇಕು ಹೀಗಾಗಿ ಚುನಾವಣೆಗೆ ನಿಲ್ತೀನಿ: ವಾಟಾಳ್ ನಾಗರಾಜ್ ಘೋಷಣೆ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ